ಮೈಸೂರು: ಅಧಿಕಾರ ಹಸ್ತಾಂತರ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು. ಈಗಲೂ ಫೋನ್ ಟ್ಯಾಪಿಂಗ್ ಇದೆ. ಕೆಲವರು ಫೋನ್ ಟ್ಯಾಪಿಂಗ್ ಮಾಡಿಯೂ ಪತಿವ್ರತೆ ರೀತಿ ವರ್ತಿಸುತ್ತಾರೆ. ನಾನು ಸತ್ಯ ಹೇಳುತ್ತೇನೆ ಕೇಳಿ, ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು. ಇವತ್ತಿನ ಸರ್ಕಾರದಲ್ಲಿ ಅದು ಎಷ್ಟು ಹೆಚ್ಚಾಗಿದೆ ಎಂಬುದನ್ನು ಅವರನ್ನೇ ಕೇಳಬೇಕು. ಅವರದ್ದೇ ಶಾಸಕರ ಮೇಲೆ ಅವರದ್ದೇ ಸಚಿವರು ಗುಪ್ತಚಾರ ಮಾಡುತ್ತಿರುವುದು ಇದೇ ಮೊದಲು. ಸಿಎಂ ಆಗಬೇಕೆಂದುಕೊಂಡವರು ಅವರ ಸರ್ಕಾರದ ಮೇಲೆ ಗುಪ್ತಚಾರ ಆರಂಭಿಸಿರುವುದು ದುರಂತ ಎಂದು ಹೇಳಿದರು.
ಇನ್ನು ಇರಾನ್-ಇಸ್ರೇಲ್ ಸಂಘರ್ಷದ ಬಗ್ಗೆ ಮಾತನಾಡಿದ ಅವರು, ಯುದ್ಧ ಸಂಪೂರ್ಣ ನಿಲ್ಲುವವರೆಗೂ ಅಲ್ಲಿಂದ ಎಲ್ಲರನ್ನು ಕರೆಸುವುದು ಕಷ್ಟ. ವಿಮಾನ ಹಾರಾಟ ಆರಂಭವಾದ್ರೆ ಎಲ್ಲರೂ ಬಹುಬೇಗ ಸುರಕ್ಷಿತವಾಗಿ ಬರುತ್ತಾರೆ. ವಿಮಾನ ಹಾರಾಟ ಬಂದ್ ಆಗಿರುವ ಕಾರಣ ಸಮಸ್ಯೆಯಾಗಿದೆ. ದುಬೈನಲ್ಲಿ ಕೆಲಸ ಮಾಡುತ್ತಿರುವ ಕನ್ನಡಿಗರು ಸಾಧ್ಯವಾದಷ್ಟು ಕನ್ನಡಿಗರ ಸಹಾಯಕ್ಕೆ ಬಂದಿದ್ದಾರೆ. ನನ್ನ ಜೊತಯೂ ಬಹಳಷ್ಟು ಜನ ಸಂಪರ್ಕದಲ್ಲಿದ್ದಾರೆ. ಕೇಂದ್ರ ಸರ್ಕಾರವು ಕೂಡ ಎಲ್ಲಾ ಭಾರತೀಯರ ಸುರಕ್ಷತೆಗೆ ಒತ್ತು ಕೊಟ್ಟಿದೆ. ರಾಜ್ಯ ಸರ್ಕಾರವೂ ಕೇಂದ್ರ ಸರ್ಕಾರದ ಜೊತೆ ಮಾತುಕತೆ ನಡೆಸುತ್ತಿದೆ.
ಎಂದು ಹೇಳಿದರು.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…