ಮೈಸೂರು ನಗರ

ಅಧಿಕಾರ ಹಸ್ತಾಂತರ ವಿಚಾರ: ಹೊಸ ಬಾಂಬ್‌ ಸಿಡಿಸಿದ ಕೇಂದ್ರ ಸಚಿವ ಎಚ್‌ಡಿಕೆ

ಮೈಸೂರು: ಅಧಿಕಾರ ಹಸ್ತಾಂತರ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್‌ ಸಿಡಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು. ಈಗಲೂ ಫೋನ್ ಟ್ಯಾಪಿಂಗ್ ಇದೆ. ಕೆಲವರು ಫೋನ್ ಟ್ಯಾಪಿಂಗ್ ಮಾಡಿಯೂ ಪತಿವ್ರತೆ ರೀತಿ ವರ್ತಿಸುತ್ತಾರೆ. ನಾನು ಸತ್ಯ ಹೇಳುತ್ತೇನೆ ಕೇಳಿ, ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು. ಇವತ್ತಿನ ಸರ್ಕಾರದಲ್ಲಿ ಅದು ಎಷ್ಟು ಹೆಚ್ಚಾಗಿದೆ ಎಂಬುದನ್ನು ಅವರನ್ನೇ ಕೇಳಬೇಕು. ಅವರದ್ದೇ ಶಾಸಕರ ಮೇಲೆ ಅವರದ್ದೇ ಸಚಿವರು ಗುಪ್ತಚಾರ ಮಾಡುತ್ತಿರುವುದು ಇದೇ ಮೊದಲು. ಸಿಎಂ ಆಗಬೇಕೆಂದುಕೊಂಡವರು ಅವರ ಸರ್ಕಾರದ ಮೇಲೆ ಗುಪ್ತಚಾರ ಆರಂಭಿಸಿರುವುದು ದುರಂತ ಎಂದು ಹೇಳಿದರು.

ಇನ್ನು ಇರಾನ್-ಇಸ್ರೇಲ್‌ ಸಂಘರ್ಷದ ಬಗ್ಗೆ ಮಾತನಾಡಿದ ಅವರು, ಯುದ್ಧ ಸಂಪೂರ್ಣ ನಿಲ್ಲುವವರೆಗೂ ಅಲ್ಲಿಂದ ಎಲ್ಲರನ್ನು ಕರೆಸುವುದು ಕಷ್ಟ. ವಿಮಾನ ಹಾರಾಟ ಆರಂಭವಾದ್ರೆ ಎಲ್ಲರೂ ಬಹುಬೇಗ ಸುರಕ್ಷಿತವಾಗಿ ಬರುತ್ತಾರೆ. ವಿಮಾನ ಹಾರಾಟ ಬಂದ್ ಆಗಿರುವ ಕಾರಣ ಸಮಸ್ಯೆಯಾಗಿದೆ. ದುಬೈನಲ್ಲಿ ಕೆಲಸ ಮಾಡುತ್ತಿರುವ ಕನ್ನಡಿಗರು ಸಾಧ್ಯವಾದಷ್ಟು ಕನ್ನಡಿಗರ ಸಹಾಯಕ್ಕೆ ಬಂದಿದ್ದಾರೆ. ನನ್ನ ಜೊತಯೂ ಬಹಳಷ್ಟು ಜನ ಸಂಪರ್ಕದಲ್ಲಿದ್ದಾರೆ. ಕೇಂದ್ರ ಸರ್ಕಾರವು ಕೂಡ ಎಲ್ಲಾ ಭಾರತೀಯರ ಸುರಕ್ಷತೆಗೆ ಒತ್ತು ಕೊಟ್ಟಿದೆ. ರಾಜ್ಯ ಸರ್ಕಾರವೂ ಕೇಂದ್ರ ಸರ್ಕಾರದ ಜೊತೆ ಮಾತುಕತೆ ನಡೆಸುತ್ತಿದೆ.
ಎಂದು ಹೇಳಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

8 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

8 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

8 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

11 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

11 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

11 hours ago