ಮೈಸೂರು ನಗರ

ಅಧಿಕಾರ ಹಸ್ತಾಂತರ ವಿಚಾರ: ಹೊಸ ಬಾಂಬ್‌ ಸಿಡಿಸಿದ ಕೇಂದ್ರ ಸಚಿವ ಎಚ್‌ಡಿಕೆ

ಮೈಸೂರು: ಅಧಿಕಾರ ಹಸ್ತಾಂತರ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್‌ ಸಿಡಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು. ಈಗಲೂ ಫೋನ್ ಟ್ಯಾಪಿಂಗ್ ಇದೆ. ಕೆಲವರು ಫೋನ್ ಟ್ಯಾಪಿಂಗ್ ಮಾಡಿಯೂ ಪತಿವ್ರತೆ ರೀತಿ ವರ್ತಿಸುತ್ತಾರೆ. ನಾನು ಸತ್ಯ ಹೇಳುತ್ತೇನೆ ಕೇಳಿ, ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು. ಇವತ್ತಿನ ಸರ್ಕಾರದಲ್ಲಿ ಅದು ಎಷ್ಟು ಹೆಚ್ಚಾಗಿದೆ ಎಂಬುದನ್ನು ಅವರನ್ನೇ ಕೇಳಬೇಕು. ಅವರದ್ದೇ ಶಾಸಕರ ಮೇಲೆ ಅವರದ್ದೇ ಸಚಿವರು ಗುಪ್ತಚಾರ ಮಾಡುತ್ತಿರುವುದು ಇದೇ ಮೊದಲು. ಸಿಎಂ ಆಗಬೇಕೆಂದುಕೊಂಡವರು ಅವರ ಸರ್ಕಾರದ ಮೇಲೆ ಗುಪ್ತಚಾರ ಆರಂಭಿಸಿರುವುದು ದುರಂತ ಎಂದು ಹೇಳಿದರು.

ಇನ್ನು ಇರಾನ್-ಇಸ್ರೇಲ್‌ ಸಂಘರ್ಷದ ಬಗ್ಗೆ ಮಾತನಾಡಿದ ಅವರು, ಯುದ್ಧ ಸಂಪೂರ್ಣ ನಿಲ್ಲುವವರೆಗೂ ಅಲ್ಲಿಂದ ಎಲ್ಲರನ್ನು ಕರೆಸುವುದು ಕಷ್ಟ. ವಿಮಾನ ಹಾರಾಟ ಆರಂಭವಾದ್ರೆ ಎಲ್ಲರೂ ಬಹುಬೇಗ ಸುರಕ್ಷಿತವಾಗಿ ಬರುತ್ತಾರೆ. ವಿಮಾನ ಹಾರಾಟ ಬಂದ್ ಆಗಿರುವ ಕಾರಣ ಸಮಸ್ಯೆಯಾಗಿದೆ. ದುಬೈನಲ್ಲಿ ಕೆಲಸ ಮಾಡುತ್ತಿರುವ ಕನ್ನಡಿಗರು ಸಾಧ್ಯವಾದಷ್ಟು ಕನ್ನಡಿಗರ ಸಹಾಯಕ್ಕೆ ಬಂದಿದ್ದಾರೆ. ನನ್ನ ಜೊತಯೂ ಬಹಳಷ್ಟು ಜನ ಸಂಪರ್ಕದಲ್ಲಿದ್ದಾರೆ. ಕೇಂದ್ರ ಸರ್ಕಾರವು ಕೂಡ ಎಲ್ಲಾ ಭಾರತೀಯರ ಸುರಕ್ಷತೆಗೆ ಒತ್ತು ಕೊಟ್ಟಿದೆ. ರಾಜ್ಯ ಸರ್ಕಾರವೂ ಕೇಂದ್ರ ಸರ್ಕಾರದ ಜೊತೆ ಮಾತುಕತೆ ನಡೆಸುತ್ತಿದೆ.
ಎಂದು ಹೇಳಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

SSLC RESULTS | ಈ ಬಾರಿಯೂ ಬಾಲಕಿಯರೇ ಮೇಲುಗೈ, ಶೇ.96.18 ವಿದ್ಯಾರ್ಥಿನಿಯರ್‌ ಪಾಸ್‌

ಬೆಂಗಳೂರು : 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ದಾಖಲೆಯ ಫಲಿತಾಂಶ ಬಂದಿದೆ. ಶಿಕ್ಷಣ ಸಚಿವ…

1 min ago

SSLC RESULTS | ದಕ್ಷಿಣ ಕನ್ನಡ ರಾಜ್ಯಕ್ಕೆ ಪ್ರಥಮ, ಕಲಬುರಗಿಗೆ ಕೊನೆ ಸ್ಥಾನ

ಬೆಂಗಳೂರು : 2026ನೇ ಸಾಲಿನ ಎಸ್ಎಸ್ಎಲ್‌ಸಿ ಫಲಿತಾಂಶದಲ್ಲಿ ಈ ಬಾರಿ ರಾಜ್ಯದ ವಿವಿಧ ಜಿಲ್ಲೆಗಳ ಫಲಿತಾಂಶದಲ್ಲಿ ಗಮನಾರ್ಹ ವ್ಯತ್ಯಾಸ ಕಂಡುಬಂದಿದೆ.…

20 mins ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಬೆಂಗಳೂರು : 2025-26ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ-1ರ ಫಲಿತಾಂಶವನ್ನು ಬುಧವಾರ (ಏಪ್ರಿಲ್ 23) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ…

30 mins ago

ಬರಿದಾಗುತ್ತಿರುವ ಕಪಿಲೆಯ ಒಡಲಿಗೆ ಕೊಳಚೆ ನೀರು

ಕೈಗಾರಿಕೆಗಳ ತ್ಯಾಜ್ಯ, ಒಳಚರಂಡಿ ನೀರು ಸೇರಿ ಸ್ನಾನಘಟ್ಟದ ನೀರು ಕಲ್ಮಶ, ಸ್ನಾನ ಮಾಡುವ ಭಕ್ತರಿಗೆ ರೋಗದ ಭೀತಿ ಎಸ್.ಎಸ್.ಭಟ್ ನಂಜನಗೂಡು…

55 mins ago

ಕಾರುಗಳ ಮುಖಾಮುಖಿ ಡಿಕ್ಕಿ : ಇಬ್ಬರು ಸಾವು

ಸಾಲಿಗ್ರಾಮ : ಪಟ್ಟಣದ ಹೊರವಲಯದಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿಯಾಗಿ ಇಬ್ಬರ ಸಾವಿಗೀಡಾಗಿ, ಮೂವರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಪಟ್ಟಣದಿಂದ ಕೇರಳಾಪುರಕ್ಕೆ…

1 hour ago

ಕೆ.ಆರ್.ನಗರ | ವಿದ್ಯುತ್‌ ಸ್ಪರ್ಶದಿಂದ ಇಬ್ಬರು ದುರ್ಮರಣ

ಕೆ.ಆರ್.ನಗರ : ಪ್ರತ್ಯೇಕ ಪ್ರಕರಣಗಳಲ್ಲಿ  ವಿದ್ಯುತ್ ಸ್ಪರ್ಶಕ್ಕೀಡಾಗಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಒಂದು ಪ್ರಕರಣದಲ್ಲಿ ಹೊಸ ಅಗ್ರಹಾರ ಹೋಬಳಿಯ…

1 hour ago