Mysore
20
overcast clouds

Social Media

ಶನಿವಾರ, 15 ಆಗಸ್ಟ್ 2026
Light
Dark

ಮೈಸೂರಿನಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಪ್ರತಿಭಟನೆ ಬಿಸಿ

Union Minister H D Kumaraswamy Faces Heat of Protest in Mysuru

ಮೈಸೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಮೈಸೂರಿನಲ್ಲಿಂದು ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಮೈಸೂರು ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಬಳಿ ಪ್ರತಿಭಟನೆಗೆ ಮುಂದಾದ ಕಾಂಗ್ರೆಸ್ ಕಾರ್ಯಕರ್ತರು, ಹೊಸದಾಗಿ ಕೈಗಾರಿಕಾ ಯೋಜನೆಗೆ ತರದ, ಮೇಕೆ‌ದಾಟು ಯೋಜನೆಗೆ ಕೇಂದ್ರ ಸರ್ಕಾರದಿಂದ ಅನುಮತಿ ಕೊಡಿಸದ ವಿಚಾರ ಕುರಿತು ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು.

ಮಂಡ್ಯ ಜನರಿಗೆ ಸುಳ್ಳು ಆಶ್ವಾಸನೆ ಕೊಟ್ಟು ಗೆದ್ದಿರುವ ಕುಮಾರಸ್ವಾಮಿಗೆ ಧಿಕ್ಕಾರ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರು, ಪ್ರತಿಭಟನಾಕಾರರನ್ನು ಮಹಾರಾಜ ಕಾಲೇಜು ವೃತ್ತದ ಕಡೆಗೆ ಕಳುಹಿಸಿದರು. ಅಲ್ಲೂ ಕೂಡ ಕಾರ್ಯಕರ್ತರು ಕೆಲ ಕಾಲ ಪ್ರತಿಭಟನೆ ನಡೆಸಿ ಎಚ್‌ಡಿಕೆ ವಿರುದ್ಧ ಕಿಡಿಕಾರಿದರು.

Tags:
error: Content is protected !!