ಮೈಸೂರು ನಗರ

ದಸರಾ ಉದ್ಘಾಟಕರ ಬಗ್ಗೆ ಕೇಂದ್ರ ಸಚಿವ ವಿ.ಸೋಮಣ್ಣ ಆಕ್ಷೇಪ

ಮೈಸೂರು: ನಂಬಿಕೆಗೆ ಮತ್ತೊಂದು‌ ಹೆಸರು ಚಾಮುಂಡಿ ಬೆಟ್ಟ. ಆದರೆ ರಾಜ್ಯ ಸರ್ಕಾರ ಪದೇ ಪದೇ ಯಡವಟ್ಟು ಮಾಡುತ್ತಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಅಸಮಾಧಾನ ಹೊರಹಾಕಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾಡಹಬ್ಬ ದಸರಾ ಮಹೋತ್ಸವ ಉದ್ಘಾಟನಾ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದರು. ನಾನೂ ಕೂಡ ಒಂದು ಬಾರಿ ಉಸ್ತುವಾರಿ ಸಚಿವನಾಗಿ ದಸರಾ ನಿರ್ವಹಿಸಿದ್ದೇನೆ. ನಂಬಿಕೆಗೆ ಮತ್ತೊಂದು‌ ಹೆಸರು ಚಾಮುಂಡಿ ಬೆಟ್ಟ. ಆದರೆ ರಾಜ್ಯ‌ ಸರ್ಕಾರ ಪದೇ ಪದೇ ಯಡವಟ್ಟು ಮಾಡ್ತಿದೆ.

ಇದನ್ನು ಓದಿ:ಬಾನು ಮುಷ್ತಾಕ್ ದಸರಾ ಉದ್ಘಾಟಿಸಲು ವಿರೋಧವೇಕೆ?

ಸಾಮಾಜಿಕ,‌ ಧಾರ್ಮಿಕವಾಗಿ ಪೂರ್ವಜರು‌ ನೀಡಿದ ರೀತಿ ನಡೆದುಕೊಳ್ಳಿ. ಯಾರನ್ನೋ ತೃಪ್ತಿಪಡಿಸಲು ಈ ರೀತಿ ಮಾಡುವುದು ಸರಿಯಲ್ಲ. ಯಾರನ್ನ ಮಾಡಿದ್ದೀರಿ ಅವರಿಗೆ ತಾಯಿಯ ಮೇಲೆ ಗೌರವ ಇರಬೇಕು. ಅವರು ಎಷ್ಟರ ಮಟ್ಟಿಗೆ ಅರ್ಹರು ಎಂಬುದನ್ನು ಚರ್ಚಿಸಲ್ಲ. ಸರ್ಕಾರ ಉದ್ಘಾಟಕರ ವಿಚಾರದಲ್ಲಿ ಗೊಂದಲ ಮಾಡಬಾರದು. ರಾಜ್ಯ ಸರ್ಕಾರ ಶಿಷ್ಠಾಚಾರವನ್ನು ಪಾಲಿಸಬೇಕು. ಸರ್ಕಾರಕ್ಕೆ ಸದ್ಭುದ್ಧಿ‌ ಕೊಡಲಿ ಎಂದು ಬೇಡಿಕೊಳ್ತೀನಿ. ತಾಯಿ ಮನಸು‌ ಗೆದ್ದರೆ ರಾಜ್ಯಕ್ಕೂ‌ ಒಳಿತು, ಸರ್ಕಾರಕ್ಕೂ ಒಳಿತು ಎಂದು ಹೇಳಿದರು.

ಇನ್ನು ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸಾವಿರ ಸರಿ ಸುಳ್ಳು ಹೇಳಿದರೂ ಸತ್ಯ ಆಗಲ್ಲ. ಈ ಮಾತಿಗೆ ಧರ್ಮಸ್ಥಳ ಪ್ರಕರಣವೇ ತಾಜ ನಿದರ್ಶನ. ಯಾರ್ ಯಾರೋ‌, ಏನ್ ಏನೋ‌ ಹೇಳಿದ್ರು. ಆದರೆ ಸತ್ಯ ಏನು ಅಂತ ಹೊರಗೆ ಬಂದಿದೆ. ಎಸ್‌ಐಟಿ‌ ರಚನೆಯಾದಾಗ ಮೊದಲು ಸ್ವಾಗತಿಸಿದ್ದೆ ನಾನು. ಧರ್ಮಸ್ಥಳಕ್ಕೆ ಅಂಟಿರುವ ಕಳಂಕ ದೂರವಾಗುತ್ತಿದೆ. ಅಣ್ಣಪ್ಪಸ್ವಾಮಿ, ಮಂಜುನಾಥಸ್ವಾಮಿ ಕೆಡಕು ಬಯಸಿದರೆ ಸದ್ಭುದ್ಧಿ ಕೊಡಲಿ. ಆ ದೇವರಿಗೆ ನಮ್ಮ ಪ್ರಣಾಮಗಳು. ಈಗ ಆಗಿರುವುದೇ ಸಾಕು. ಸರ್ಕಾರ ಪಶ್ಚಾತ್ತಾಪ ಪಟ್ಟುಕೊಳ್ಳಲಿ. ಮುಂದೆಯಾದರೂ ಧಾರ್ಮಿಕ ತಾಣಗಳ ಬಗ್ಗೆ ಯಾರೇ ಮಾತನಾಡುವಾಗಲೂ ಎಚ್ಚರಿಕೆ ವಹಿಸಬೇಕು. ನಾನು ಮೊದಲಿನಿಂದಲೂ ಕೂಡ ಧರ್ಮಸ್ಥಳದ ಪರ ನಿಂತಿದ್ದೆ ಎಂದರು.

ಆಂದೋಲನ ಡೆಸ್ಕ್

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

3 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

3 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

5 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

6 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

7 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

7 hours ago