ಮೈಸೂರು ನಗರ

ದಸರಾ ಉದ್ಘಾಟಕರ ಬಗ್ಗೆ ಕೇಂದ್ರ ಸಚಿವ ವಿ.ಸೋಮಣ್ಣ ಆಕ್ಷೇಪ

ಮೈಸೂರು: ನಂಬಿಕೆಗೆ ಮತ್ತೊಂದು‌ ಹೆಸರು ಚಾಮುಂಡಿ ಬೆಟ್ಟ. ಆದರೆ ರಾಜ್ಯ ಸರ್ಕಾರ ಪದೇ ಪದೇ ಯಡವಟ್ಟು ಮಾಡುತ್ತಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಅಸಮಾಧಾನ ಹೊರಹಾಕಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾಡಹಬ್ಬ ದಸರಾ ಮಹೋತ್ಸವ ಉದ್ಘಾಟನಾ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದರು. ನಾನೂ ಕೂಡ ಒಂದು ಬಾರಿ ಉಸ್ತುವಾರಿ ಸಚಿವನಾಗಿ ದಸರಾ ನಿರ್ವಹಿಸಿದ್ದೇನೆ. ನಂಬಿಕೆಗೆ ಮತ್ತೊಂದು‌ ಹೆಸರು ಚಾಮುಂಡಿ ಬೆಟ್ಟ. ಆದರೆ ರಾಜ್ಯ‌ ಸರ್ಕಾರ ಪದೇ ಪದೇ ಯಡವಟ್ಟು ಮಾಡ್ತಿದೆ.

ಇದನ್ನು ಓದಿ:ಬಾನು ಮುಷ್ತಾಕ್ ದಸರಾ ಉದ್ಘಾಟಿಸಲು ವಿರೋಧವೇಕೆ?

ಸಾಮಾಜಿಕ,‌ ಧಾರ್ಮಿಕವಾಗಿ ಪೂರ್ವಜರು‌ ನೀಡಿದ ರೀತಿ ನಡೆದುಕೊಳ್ಳಿ. ಯಾರನ್ನೋ ತೃಪ್ತಿಪಡಿಸಲು ಈ ರೀತಿ ಮಾಡುವುದು ಸರಿಯಲ್ಲ. ಯಾರನ್ನ ಮಾಡಿದ್ದೀರಿ ಅವರಿಗೆ ತಾಯಿಯ ಮೇಲೆ ಗೌರವ ಇರಬೇಕು. ಅವರು ಎಷ್ಟರ ಮಟ್ಟಿಗೆ ಅರ್ಹರು ಎಂಬುದನ್ನು ಚರ್ಚಿಸಲ್ಲ. ಸರ್ಕಾರ ಉದ್ಘಾಟಕರ ವಿಚಾರದಲ್ಲಿ ಗೊಂದಲ ಮಾಡಬಾರದು. ರಾಜ್ಯ ಸರ್ಕಾರ ಶಿಷ್ಠಾಚಾರವನ್ನು ಪಾಲಿಸಬೇಕು. ಸರ್ಕಾರಕ್ಕೆ ಸದ್ಭುದ್ಧಿ‌ ಕೊಡಲಿ ಎಂದು ಬೇಡಿಕೊಳ್ತೀನಿ. ತಾಯಿ ಮನಸು‌ ಗೆದ್ದರೆ ರಾಜ್ಯಕ್ಕೂ‌ ಒಳಿತು, ಸರ್ಕಾರಕ್ಕೂ ಒಳಿತು ಎಂದು ಹೇಳಿದರು.

ಇನ್ನು ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸಾವಿರ ಸರಿ ಸುಳ್ಳು ಹೇಳಿದರೂ ಸತ್ಯ ಆಗಲ್ಲ. ಈ ಮಾತಿಗೆ ಧರ್ಮಸ್ಥಳ ಪ್ರಕರಣವೇ ತಾಜ ನಿದರ್ಶನ. ಯಾರ್ ಯಾರೋ‌, ಏನ್ ಏನೋ‌ ಹೇಳಿದ್ರು. ಆದರೆ ಸತ್ಯ ಏನು ಅಂತ ಹೊರಗೆ ಬಂದಿದೆ. ಎಸ್‌ಐಟಿ‌ ರಚನೆಯಾದಾಗ ಮೊದಲು ಸ್ವಾಗತಿಸಿದ್ದೆ ನಾನು. ಧರ್ಮಸ್ಥಳಕ್ಕೆ ಅಂಟಿರುವ ಕಳಂಕ ದೂರವಾಗುತ್ತಿದೆ. ಅಣ್ಣಪ್ಪಸ್ವಾಮಿ, ಮಂಜುನಾಥಸ್ವಾಮಿ ಕೆಡಕು ಬಯಸಿದರೆ ಸದ್ಭುದ್ಧಿ ಕೊಡಲಿ. ಆ ದೇವರಿಗೆ ನಮ್ಮ ಪ್ರಣಾಮಗಳು. ಈಗ ಆಗಿರುವುದೇ ಸಾಕು. ಸರ್ಕಾರ ಪಶ್ಚಾತ್ತಾಪ ಪಟ್ಟುಕೊಳ್ಳಲಿ. ಮುಂದೆಯಾದರೂ ಧಾರ್ಮಿಕ ತಾಣಗಳ ಬಗ್ಗೆ ಯಾರೇ ಮಾತನಾಡುವಾಗಲೂ ಎಚ್ಚರಿಕೆ ವಹಿಸಬೇಕು. ನಾನು ಮೊದಲಿನಿಂದಲೂ ಕೂಡ ಧರ್ಮಸ್ಥಳದ ಪರ ನಿಂತಿದ್ದೆ ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸಾಂಘಿಕ ಪ್ರದರ್ಶನದಿಂದ ಭಾರತದ ಮುಡಿಗೆ ಟಿ-೨೦ ವಿಶ್ವಕಪ್

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…

3 hours ago

ಓದುಗರ ಪತ್ರ: ಅನುಭವಿ ಮೌಲ್ಯಮಾಪಕರಿಗೆ ಆದ್ಯತೆ ನೀಡಿ

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…

3 hours ago

ಓದುಗರ ಪತ್ರ: ಆಟೋ ಚಾಲಕರಿಂದ ಅರವಟ್ಟಿಗೆ ಸೌಲಭ್ಯ

ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬಿಸಿಲಿನ ತಾಪ ಹೆಚ್ಚಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮೈಸೂರಿನ ರಾಮಸ್ವಾಮಿ…

3 hours ago

ಓದುಗರ ಪತ್ರ: ಯುದ್ಧ: ಎಂಎಲ್‌ಸಿಗೆ ಸ್ಪಂದಿಸದ ಕೇಂದ್ರ ಸರ್ಕಾರ?

ಇಸ್ರೇಲ್- ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಭಾರತದಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಾರ್ಯನಿಮಿತ್ತ…

3 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಸ್ಲಮ್ ವಾಸಿಗಳಿಗೆ ಬದುಕು ಕಟ್ಟಿ ಕೊಟ್ಟ ಆರ್ಕಿಟೆಕ್ಟ್‌

ಕೊಳೆಗೇರಿಗಳ ೨೭,೦೦೦ ಮನೆಗಳಿಗೆ ಶೌಚಾಲಯ ಸೌಲಭ್ಯ ಪೂನಾದ ಇಂದಿರಾ ವಸಾಹತ್ ಎಂಬ ಪ್ರದೇಶದ ಒಂದು ಸ್ಲಮ್ಮಿನಲ್ಲಿ ವಾಸಿಸುವ ಲತಾ ರತನ್…

3 hours ago

ಮರಿಗಳೊಂದಿಗೆ ಹುಲಿ ಕಂಡು ಪುಳಕಿತರಾದ ಪ್ರವಾಸಿಗರು

ಮಹೇಂದ್ರ ಹಸಗೂಲಿ ತಾಯಿ ಹುಲಿ ನಾಪತ್ತೆಯಾಗಿದ್ದರಿಂದ ಮರಿಗಳನ್ನು ಪಾಲನೆ ಮಾಡಿದ್ದ ಅರಣ್ಯ ಇಲಾಖೆ  ಗುಂಡ್ಲುಪೇಟೆ: ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು…

3 hours ago