ಮೈಸೂರು ನಗರ

ದಸರಾ ಉದ್ಘಾಟಕರ ಬಗ್ಗೆ ಕೇಂದ್ರ ಸಚಿವ ವಿ.ಸೋಮಣ್ಣ ಆಕ್ಷೇಪ

ಮೈಸೂರು: ನಂಬಿಕೆಗೆ ಮತ್ತೊಂದು‌ ಹೆಸರು ಚಾಮುಂಡಿ ಬೆಟ್ಟ. ಆದರೆ ರಾಜ್ಯ ಸರ್ಕಾರ ಪದೇ ಪದೇ ಯಡವಟ್ಟು ಮಾಡುತ್ತಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಅಸಮಾಧಾನ ಹೊರಹಾಕಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾಡಹಬ್ಬ ದಸರಾ ಮಹೋತ್ಸವ ಉದ್ಘಾಟನಾ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದರು. ನಾನೂ ಕೂಡ ಒಂದು ಬಾರಿ ಉಸ್ತುವಾರಿ ಸಚಿವನಾಗಿ ದಸರಾ ನಿರ್ವಹಿಸಿದ್ದೇನೆ. ನಂಬಿಕೆಗೆ ಮತ್ತೊಂದು‌ ಹೆಸರು ಚಾಮುಂಡಿ ಬೆಟ್ಟ. ಆದರೆ ರಾಜ್ಯ‌ ಸರ್ಕಾರ ಪದೇ ಪದೇ ಯಡವಟ್ಟು ಮಾಡ್ತಿದೆ.

ಇದನ್ನು ಓದಿ:ಬಾನು ಮುಷ್ತಾಕ್ ದಸರಾ ಉದ್ಘಾಟಿಸಲು ವಿರೋಧವೇಕೆ?

ಸಾಮಾಜಿಕ,‌ ಧಾರ್ಮಿಕವಾಗಿ ಪೂರ್ವಜರು‌ ನೀಡಿದ ರೀತಿ ನಡೆದುಕೊಳ್ಳಿ. ಯಾರನ್ನೋ ತೃಪ್ತಿಪಡಿಸಲು ಈ ರೀತಿ ಮಾಡುವುದು ಸರಿಯಲ್ಲ. ಯಾರನ್ನ ಮಾಡಿದ್ದೀರಿ ಅವರಿಗೆ ತಾಯಿಯ ಮೇಲೆ ಗೌರವ ಇರಬೇಕು. ಅವರು ಎಷ್ಟರ ಮಟ್ಟಿಗೆ ಅರ್ಹರು ಎಂಬುದನ್ನು ಚರ್ಚಿಸಲ್ಲ. ಸರ್ಕಾರ ಉದ್ಘಾಟಕರ ವಿಚಾರದಲ್ಲಿ ಗೊಂದಲ ಮಾಡಬಾರದು. ರಾಜ್ಯ ಸರ್ಕಾರ ಶಿಷ್ಠಾಚಾರವನ್ನು ಪಾಲಿಸಬೇಕು. ಸರ್ಕಾರಕ್ಕೆ ಸದ್ಭುದ್ಧಿ‌ ಕೊಡಲಿ ಎಂದು ಬೇಡಿಕೊಳ್ತೀನಿ. ತಾಯಿ ಮನಸು‌ ಗೆದ್ದರೆ ರಾಜ್ಯಕ್ಕೂ‌ ಒಳಿತು, ಸರ್ಕಾರಕ್ಕೂ ಒಳಿತು ಎಂದು ಹೇಳಿದರು.

ಇನ್ನು ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸಾವಿರ ಸರಿ ಸುಳ್ಳು ಹೇಳಿದರೂ ಸತ್ಯ ಆಗಲ್ಲ. ಈ ಮಾತಿಗೆ ಧರ್ಮಸ್ಥಳ ಪ್ರಕರಣವೇ ತಾಜ ನಿದರ್ಶನ. ಯಾರ್ ಯಾರೋ‌, ಏನ್ ಏನೋ‌ ಹೇಳಿದ್ರು. ಆದರೆ ಸತ್ಯ ಏನು ಅಂತ ಹೊರಗೆ ಬಂದಿದೆ. ಎಸ್‌ಐಟಿ‌ ರಚನೆಯಾದಾಗ ಮೊದಲು ಸ್ವಾಗತಿಸಿದ್ದೆ ನಾನು. ಧರ್ಮಸ್ಥಳಕ್ಕೆ ಅಂಟಿರುವ ಕಳಂಕ ದೂರವಾಗುತ್ತಿದೆ. ಅಣ್ಣಪ್ಪಸ್ವಾಮಿ, ಮಂಜುನಾಥಸ್ವಾಮಿ ಕೆಡಕು ಬಯಸಿದರೆ ಸದ್ಭುದ್ಧಿ ಕೊಡಲಿ. ಆ ದೇವರಿಗೆ ನಮ್ಮ ಪ್ರಣಾಮಗಳು. ಈಗ ಆಗಿರುವುದೇ ಸಾಕು. ಸರ್ಕಾರ ಪಶ್ಚಾತ್ತಾಪ ಪಟ್ಟುಕೊಳ್ಳಲಿ. ಮುಂದೆಯಾದರೂ ಧಾರ್ಮಿಕ ತಾಣಗಳ ಬಗ್ಗೆ ಯಾರೇ ಮಾತನಾಡುವಾಗಲೂ ಎಚ್ಚರಿಕೆ ವಹಿಸಬೇಕು. ನಾನು ಮೊದಲಿನಿಂದಲೂ ಕೂಡ ಧರ್ಮಸ್ಥಳದ ಪರ ನಿಂತಿದ್ದೆ ಎಂದರು.

ಆಂದೋಲನ ಡೆಸ್ಕ್

Recent Posts

ಆಪರೇಷನ್‌ ಸಿಂಧೂರಕ್ಕೆ ಒಂದು ವರ್ಷ: ಇನ್ನೂ ಚೇತರಿಸಿಕೊಳ್ಳದ ಪಾಕ್‌

ನವದೆಹಲಿ: ಕುಟುಂಬದೊಂದಿಗೆ ಪ್ರವಾಸದಲ್ಲಿದ್ದ 26 ಜೀವಗಳನ್ನು ಬಲಿ ಪಡೆದ ಉಗ್ರರಿಗೆ ತಕ್ಕ ಪಾಠ ಕಲಿಸಿದ ಆಪರೇಷನ್‌ ಸಿಂಧೂರಕ್ಕೆ ಒಂದು ವರ್ಷವಾಗಿದೆ.…

11 mins ago

ಡಿಕೆಶಿಗೆ ಸಿಎಂ ಕುರ್ಚಿ ಮೇಲೆ ಆಸೆ ಇರೋದು ನಿಜ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಸಿಎಂ ಕುರ್ಚಿ ಮೇಲೆ ಆಸೆ ಇರುವುದು ನಿಜ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.…

46 mins ago

ಮೈಸೂರಿನಲ್ಲಿ ಮುಂದುವರಿದ ಕಾಡುಪ್ರಾಣಿಗಳ ಉಪಟಳ

ಮೈಸೂರು: ಮೈಸೂರಿನಲ್ಲಿ ಕಾಡುಪ್ರಾಣಿಗಳ ಉಪಟಳ ಮುಂದುವರಿದಿದ್ದು, ಚಿರತೆಯೊಂದ ನಾಯಿ ಬೇಟೆಯಾಡಿರುವ ಘಟನೆ ಗೌರಿಶಂಕರನಗರದ ಗವಿಮಠದ ಹತ್ತಿರ ನಡೆದಿದೆ. ರಾತ್ರೋರಾತ್ರಿ ಚಿರತೆಯೊಂದು…

2 hours ago

ಓದುಗರ ಪತ್ರ: ಚಿನ್ನದ ಹೆಸರಿನಲ್ಲಾಗುವ ವಂಚನೆಯನ್ನು ತಡೆಗಟ್ಟಿ

ಚಿನ್ನದ ಹೂಡಿಕೆಯ ಹೆಸರಿನಲ್ಲಿ ನಡೆಯುತ್ತಿರುವ ವಂಚನೆ ಅತ್ಯಂತ ಸಂಕೀರ್ಣವೂ ಮತ್ತು ವ್ಯವಸ್ಥಿತವೂ ಆಗಿದೆ. ವಂಚಕರು ಮುಖ್ಯವಾಗಿ ಪೊಂಜಿ ಮಾದರಿಯ ಯೋಜನೆಗಳನ್ನು…

2 hours ago

ಓದುಗರ ಪತ್ರ: ವಿಜಯ್ ಉತ್ತಮ ಆಡಳಿತ ನೀಡಲಿ

ತಮಿಳುನಾಡಿನ ‘ತಮಿಳಿಗ ವೆಟ್ರಿ ಕಳಗಂ’ ಪಕ್ಷದ ಸ್ಥಾಪಕ ಜೋಸೆಫ್ ವಿಜಯ್ ಅವರು ಕೇವಲ ಎರಡು ವರ್ಷಗಳ ಹಿಂದೆ ರಾಜಕೀಯ ಪಕ್ಷ…

2 hours ago

ಓದುಗರ ಪತ್ರ: ಖಾಸಗಿ ಅಂಗಡಿಗಳ ಮಾಲೀಕರಿಂದ ರಸ್ತೆ ಅತಿಕ್ರಮಣ

ಮೈಸೂರು ನಗರದ ಅಶೋಕ ರಸ್ತೆ, ದೇವರಾಜ ಅರಸು ರಸ್ತೆ, ಸಯ್ಯಾಜಿರಾವ್ ರಸ್ತೆ, ಧನ್ವಂತರಿ ರಸ್ತೆ, ಶಿವರಾಂ ಪೇಟೆಯ ಹಲವಾರು ಕಡೆಗಳಲ್ಲಿ…

2 hours ago