ಮೈಸೂರು ನಗರ

ದಸರಾ ಉದ್ಘಾಟಕರ ಬಗ್ಗೆ ಕೇಂದ್ರ ಸಚಿವ ವಿ.ಸೋಮಣ್ಣ ಆಕ್ಷೇಪ

ಮೈಸೂರು: ನಂಬಿಕೆಗೆ ಮತ್ತೊಂದು‌ ಹೆಸರು ಚಾಮುಂಡಿ ಬೆಟ್ಟ. ಆದರೆ ರಾಜ್ಯ ಸರ್ಕಾರ ಪದೇ ಪದೇ ಯಡವಟ್ಟು ಮಾಡುತ್ತಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಅಸಮಾಧಾನ ಹೊರಹಾಕಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾಡಹಬ್ಬ ದಸರಾ ಮಹೋತ್ಸವ ಉದ್ಘಾಟನಾ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದರು. ನಾನೂ ಕೂಡ ಒಂದು ಬಾರಿ ಉಸ್ತುವಾರಿ ಸಚಿವನಾಗಿ ದಸರಾ ನಿರ್ವಹಿಸಿದ್ದೇನೆ. ನಂಬಿಕೆಗೆ ಮತ್ತೊಂದು‌ ಹೆಸರು ಚಾಮುಂಡಿ ಬೆಟ್ಟ. ಆದರೆ ರಾಜ್ಯ‌ ಸರ್ಕಾರ ಪದೇ ಪದೇ ಯಡವಟ್ಟು ಮಾಡ್ತಿದೆ.

ಇದನ್ನು ಓದಿ:ಬಾನು ಮುಷ್ತಾಕ್ ದಸರಾ ಉದ್ಘಾಟಿಸಲು ವಿರೋಧವೇಕೆ?

ಸಾಮಾಜಿಕ,‌ ಧಾರ್ಮಿಕವಾಗಿ ಪೂರ್ವಜರು‌ ನೀಡಿದ ರೀತಿ ನಡೆದುಕೊಳ್ಳಿ. ಯಾರನ್ನೋ ತೃಪ್ತಿಪಡಿಸಲು ಈ ರೀತಿ ಮಾಡುವುದು ಸರಿಯಲ್ಲ. ಯಾರನ್ನ ಮಾಡಿದ್ದೀರಿ ಅವರಿಗೆ ತಾಯಿಯ ಮೇಲೆ ಗೌರವ ಇರಬೇಕು. ಅವರು ಎಷ್ಟರ ಮಟ್ಟಿಗೆ ಅರ್ಹರು ಎಂಬುದನ್ನು ಚರ್ಚಿಸಲ್ಲ. ಸರ್ಕಾರ ಉದ್ಘಾಟಕರ ವಿಚಾರದಲ್ಲಿ ಗೊಂದಲ ಮಾಡಬಾರದು. ರಾಜ್ಯ ಸರ್ಕಾರ ಶಿಷ್ಠಾಚಾರವನ್ನು ಪಾಲಿಸಬೇಕು. ಸರ್ಕಾರಕ್ಕೆ ಸದ್ಭುದ್ಧಿ‌ ಕೊಡಲಿ ಎಂದು ಬೇಡಿಕೊಳ್ತೀನಿ. ತಾಯಿ ಮನಸು‌ ಗೆದ್ದರೆ ರಾಜ್ಯಕ್ಕೂ‌ ಒಳಿತು, ಸರ್ಕಾರಕ್ಕೂ ಒಳಿತು ಎಂದು ಹೇಳಿದರು.

ಇನ್ನು ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸಾವಿರ ಸರಿ ಸುಳ್ಳು ಹೇಳಿದರೂ ಸತ್ಯ ಆಗಲ್ಲ. ಈ ಮಾತಿಗೆ ಧರ್ಮಸ್ಥಳ ಪ್ರಕರಣವೇ ತಾಜ ನಿದರ್ಶನ. ಯಾರ್ ಯಾರೋ‌, ಏನ್ ಏನೋ‌ ಹೇಳಿದ್ರು. ಆದರೆ ಸತ್ಯ ಏನು ಅಂತ ಹೊರಗೆ ಬಂದಿದೆ. ಎಸ್‌ಐಟಿ‌ ರಚನೆಯಾದಾಗ ಮೊದಲು ಸ್ವಾಗತಿಸಿದ್ದೆ ನಾನು. ಧರ್ಮಸ್ಥಳಕ್ಕೆ ಅಂಟಿರುವ ಕಳಂಕ ದೂರವಾಗುತ್ತಿದೆ. ಅಣ್ಣಪ್ಪಸ್ವಾಮಿ, ಮಂಜುನಾಥಸ್ವಾಮಿ ಕೆಡಕು ಬಯಸಿದರೆ ಸದ್ಭುದ್ಧಿ ಕೊಡಲಿ. ಆ ದೇವರಿಗೆ ನಮ್ಮ ಪ್ರಣಾಮಗಳು. ಈಗ ಆಗಿರುವುದೇ ಸಾಕು. ಸರ್ಕಾರ ಪಶ್ಚಾತ್ತಾಪ ಪಟ್ಟುಕೊಳ್ಳಲಿ. ಮುಂದೆಯಾದರೂ ಧಾರ್ಮಿಕ ತಾಣಗಳ ಬಗ್ಗೆ ಯಾರೇ ಮಾತನಾಡುವಾಗಲೂ ಎಚ್ಚರಿಕೆ ವಹಿಸಬೇಕು. ನಾನು ಮೊದಲಿನಿಂದಲೂ ಕೂಡ ಧರ್ಮಸ್ಥಳದ ಪರ ನಿಂತಿದ್ದೆ ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

9 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

9 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

9 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

9 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

9 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

9 hours ago