ಮೈಸೂರು ನಗರ

ವಿವಿಗಳನ್ನು ಬಂದ್ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿಲುವು ಸರಿಯಾಗಿದೆ: ಎಂಎಲ್‌ಸಿ ಎಚ್.ವಿಶ್ವನಾಥ್‌

ಮೈಸೂರು: ರಾಜ್ಯದ ಹಲವು ವಿಶ್ವವಿದ್ಯಾನಿಲಯಗಳನ್ನು ಮುಚ್ಚಲು ನಿರ್ಧಾರ ಮಾಡಿರುವ ರಾಜ್ಯ ಸರ್ಕಾರದ ನಿಲುವು ಸರಿಯಾಗಿದೆ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಸರ್ಕಾರದ ಪರ ಬ್ಯಾಟ್‌ ಬೀಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಲವು ವಿವಿಗಳನ್ನು ಮುಚ್ಚಲು ಮುಂದಾಗಿರುವುದು ಒಳ್ಳೆಯ ನಿರ್ಧಾರ. ವಿಶ್ವವಿದ್ಯಾಲಯದ ಕುಲಪತಿ ಹುದ್ದೆ ಪಡೆಯಲು 5 ಕೋಟಿ ಫಿಕ್ಸ್ ಮಾಡಿದ್ದೇ ಈ ಹಿಂದಿನ ಬಿಜೆಪಿ ಸರ್ಕಾರ. ಅದು ಈಗಲೂ ಮುಂದುವರಿದಿದೆ. ಈ ವಿಚಾರ ಎಲ್ಲರಿಗೂ ಗೊತ್ತಿದೆ. ಹಲವು ವಿವಿಗಳನ್ನು ಬಂದ್ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿಲುವು ಸರಿಯಾಗಿದೆ. ರಾಜ್ಯದಲ್ಲಿಗ ಅಕ್ಷರ, ಆರೋಗ್ಯ ಎರಡಕ್ಕೂ ಬೆಲೆ ಇಲ್ಲದಂತಾಗಿದೆ ಎಂದರು.

ಇನ್ನು ಬಜೆಟ್ ಪೂರ್ವಭಾವಿ ಸಭೆ ನಡೆಸುತ್ತಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ವಿಶ್ವನಾಥ್‌ ಅವರು, ಸಿದ್ದರಾಮಯ್ಯ ಸರ್ಕಾರದಲ್ಲಿ ಶಾಸಕಾಂಗಕ್ಕೆ ಬೆಲೆಯೇ ಇಲ್ಲದಂತಾಗಿದೆ. ಬಜೆಟ್ ಕುರಿತು ಶಾಸಕಾಂಗ ಒಪ್ಪಿಗೆ ನೀಡುತ್ತದೆ. ಆದರೆ ಸರ್ಕಾರ ಶಾಸಕಾಂಗ ಒಪ್ಪಿಗೆ ನೀಡಿದ ಬಜೆಟ್ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಏನು ಮಾಡಿದೆ.
ಕಳೆದ ಬಾರಿಯ ಬಜೆಟ್ ಏನಾಯಿತು ಎಂದು ಪ್ರಶ್ನಿಸಿದರು.

ಇನ್ನು ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳಕ್ಕೆ ಉತ್ತರ ಪ್ರದೇಶ ಸರ್ಕಾರ ಮಾಡಿರುವ ವ್ಯವಸ್ಥೆ ಅತ್ಯುತ್ತಮವಾಗಿದೆ. ಸಣ್ಣ ಪುಟ್ಟ ಘಟನೆ ಹೊರತು ಪಡಿಸಿ ಇಡೀ ಕುಂಭಮೇಳದ ವ್ಯವಸ್ಥೆ ಚನ್ನಾಗಿದೆ. ಒಂದು ಮನೆ ನಡೆಸೋದೇ ಕಷ್ಟ. ಕೋಟ್ಯಾಂತರ ಜನರು ಭಾಗಿಯಾಗಿರುವ ಕುಂಭಮೇಳ ಯಶಸ್ವಿಯಾಗಿ ‌ನಡೆಯುತ್ತಿದೆ. ಇದಕ್ಕಾಗಿ ಉತ್ತರ ಪ್ರದೇಶ ಸರ್ಕಾರ ಸೂಕ್ತ ವ್ಯವಸ್ಥೆ ಮಾಡಿದೆ ಎಂದು ಉತ್ತರಪ್ರದೇಶ ಸರ್ಕಾರಕ್ಕೆ ಶಹಭಾಷ್ ಗಿರಿ ನೀಡಿದರು.

ಇನ್ನು ರಾಜ್ಯ ಸರ್ಕಾರದ ಗೃಹಲಕ್ಷ್ಮಿಯೋಜನೆಯ ಫಲಾನುಭವಿ ಮಹಿಳೆಯರು ಹಾಗು ಅನ್ನಭಾಗ್ಯ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಮ್ಮ ಹೆಂಡ್ತಿಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರ್ತಿಲ್ಲ ಎಂದು ಗಂಡಂದಿರು ಹೇಳ್ತಿದ್ದಾರೆ. ಇದರಿಂದ ಮನೆಗಳು ಮುರಿದು ಹೋಗುವ ಪರಿಸ್ಥಿತಿ ಬಂದಿದೆ ಎಂದು ಗ್ಯಾರಂಟಿ ಯೋಜನೆ ಘೋಷಣೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ | ಸರ್ಕಾರಿ ಶಾಲೆಗಳಿಗೆ ಲ್ಯಾಪ್ ಟಾಪ್, ವೈಫೈ ಸೌಲಭ್ಯ ಕಲ್ಪಿಸಿ

ಈಗ ಶಾಲೆಯಲ್ಲಿ ಶಿಕ್ಷಕರು ಕೇವಲ ಪಠ್ಯ ಬೋಧಕರಾಗಿ ಮಾತ್ರ ಉಳಿದಿಲ್ಲ. ಬೋಧನೆಯ ಜೊತೆ ಜೊತೆಗೆ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳುವುದು, ಮಧ್ಯಾಹ್ನದ…

13 mins ago

ಆಂದೋಲನ ವಿಶೇಷ ; ಸೋನಂ ವಾಂಗ್ಚುಕ್ ದಿಢೀರ್ ಬಿಡುಗಡೆ ‌

• ಆರೋಪ ಸಾಬೀತು ಮಾಡಲು ಕೇಂದ್ರ ವಿಫಲ • ಸುಪ್ರೀಂ ಮುಜುಗರದಿಂದ ಪಾರು? ಪರಿಸರ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಮಾಡಿದ…

2 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರೆಗೆ ಸಕಲ ಸಿದ್ಧತೆ

ಮಹಾದೇಶ್‌ ಎಂ.ಗೌಡ ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಸೋಮವಾರದಿಂದ ಪ್ರಾರಂಭವಾಗಿರುವ ಯುಗಾದಿ ಜಾತ್ರಾ ಮಹೋತ್ಸವ ಮಾರ್ಚ್ 19ರವರೆಗೆ…

2 hours ago

ಮತ್ತೆ ಚಿಗುರೊಡೆದ ಎಂಡಿಎ ಹೊಸ ಬಡಾವಣೆಯ ಕನಸು

ಅಧಿಕಾರಿಗಳ ಮನವೊಲಿಕೆಗೆ ಸಮ್ಮತಿಸುತ್ತಿರುವ ಭೂ ಮಾಲೀಕರು ಕೆ.ಬಿ.ರಮೇಶನಾಯಕ ಮೈಸೂರು : ದಶಕಗಳಿಂದಲೂ ಬಡ-ಮಧ್ಯಮ ವರ್ಗದ ಜನರಿಗೆ ನಿವೇಶನ ಹಂಚಿಕೆ ಮಾಡಲು,…

3 hours ago

ಕೇರ್ ಟೇಕರ್ ಕೆಲಸಕ್ಕೆ ಸೇರಿ ಮನೆ ದರೋಡೆ; ಆರೋಪಿ ಬಂಧನ

ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…

13 hours ago

ಮಹದೇಶ್ವರ ಬೆಟ್ಟ : ವಿವಿಧ ಸೇವೆಗಳಿಂದ 1.16 ಕೋಟಿ ಸಂಗ್ರಹ

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…

13 hours ago