ಮೈಸೂರು: ರಾಜ್ಯದ ಹಲವು ವಿಶ್ವವಿದ್ಯಾನಿಲಯಗಳನ್ನು ಮುಚ್ಚಲು ನಿರ್ಧಾರ ಮಾಡಿರುವ ರಾಜ್ಯ ಸರ್ಕಾರದ ನಿಲುವು ಸರಿಯಾಗಿದೆ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಸರ್ಕಾರದ ಪರ ಬ್ಯಾಟ್ ಬೀಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಲವು ವಿವಿಗಳನ್ನು ಮುಚ್ಚಲು ಮುಂದಾಗಿರುವುದು ಒಳ್ಳೆಯ ನಿರ್ಧಾರ. ವಿಶ್ವವಿದ್ಯಾಲಯದ ಕುಲಪತಿ ಹುದ್ದೆ ಪಡೆಯಲು 5 ಕೋಟಿ ಫಿಕ್ಸ್ ಮಾಡಿದ್ದೇ ಈ ಹಿಂದಿನ ಬಿಜೆಪಿ ಸರ್ಕಾರ. ಅದು ಈಗಲೂ ಮುಂದುವರಿದಿದೆ. ಈ ವಿಚಾರ ಎಲ್ಲರಿಗೂ ಗೊತ್ತಿದೆ. ಹಲವು ವಿವಿಗಳನ್ನು ಬಂದ್ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿಲುವು ಸರಿಯಾಗಿದೆ. ರಾಜ್ಯದಲ್ಲಿಗ ಅಕ್ಷರ, ಆರೋಗ್ಯ ಎರಡಕ್ಕೂ ಬೆಲೆ ಇಲ್ಲದಂತಾಗಿದೆ ಎಂದರು.
ಇನ್ನು ಬಜೆಟ್ ಪೂರ್ವಭಾವಿ ಸಭೆ ನಡೆಸುತ್ತಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ವಿಶ್ವನಾಥ್ ಅವರು, ಸಿದ್ದರಾಮಯ್ಯ ಸರ್ಕಾರದಲ್ಲಿ ಶಾಸಕಾಂಗಕ್ಕೆ ಬೆಲೆಯೇ ಇಲ್ಲದಂತಾಗಿದೆ. ಬಜೆಟ್ ಕುರಿತು ಶಾಸಕಾಂಗ ಒಪ್ಪಿಗೆ ನೀಡುತ್ತದೆ. ಆದರೆ ಸರ್ಕಾರ ಶಾಸಕಾಂಗ ಒಪ್ಪಿಗೆ ನೀಡಿದ ಬಜೆಟ್ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಏನು ಮಾಡಿದೆ.
ಕಳೆದ ಬಾರಿಯ ಬಜೆಟ್ ಏನಾಯಿತು ಎಂದು ಪ್ರಶ್ನಿಸಿದರು.
ಇನ್ನು ಪ್ರಯಾಗ್ ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳಕ್ಕೆ ಉತ್ತರ ಪ್ರದೇಶ ಸರ್ಕಾರ ಮಾಡಿರುವ ವ್ಯವಸ್ಥೆ ಅತ್ಯುತ್ತಮವಾಗಿದೆ. ಸಣ್ಣ ಪುಟ್ಟ ಘಟನೆ ಹೊರತು ಪಡಿಸಿ ಇಡೀ ಕುಂಭಮೇಳದ ವ್ಯವಸ್ಥೆ ಚನ್ನಾಗಿದೆ. ಒಂದು ಮನೆ ನಡೆಸೋದೇ ಕಷ್ಟ. ಕೋಟ್ಯಾಂತರ ಜನರು ಭಾಗಿಯಾಗಿರುವ ಕುಂಭಮೇಳ ಯಶಸ್ವಿಯಾಗಿ ನಡೆಯುತ್ತಿದೆ. ಇದಕ್ಕಾಗಿ ಉತ್ತರ ಪ್ರದೇಶ ಸರ್ಕಾರ ಸೂಕ್ತ ವ್ಯವಸ್ಥೆ ಮಾಡಿದೆ ಎಂದು ಉತ್ತರಪ್ರದೇಶ ಸರ್ಕಾರಕ್ಕೆ ಶಹಭಾಷ್ ಗಿರಿ ನೀಡಿದರು.
ಇನ್ನು ರಾಜ್ಯ ಸರ್ಕಾರದ ಗೃಹಲಕ್ಷ್ಮಿಯೋಜನೆಯ ಫಲಾನುಭವಿ ಮಹಿಳೆಯರು ಹಾಗು ಅನ್ನಭಾಗ್ಯ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಮ್ಮ ಹೆಂಡ್ತಿಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರ್ತಿಲ್ಲ ಎಂದು ಗಂಡಂದಿರು ಹೇಳ್ತಿದ್ದಾರೆ. ಇದರಿಂದ ಮನೆಗಳು ಮುರಿದು ಹೋಗುವ ಪರಿಸ್ಥಿತಿ ಬಂದಿದೆ ಎಂದು ಗ್ಯಾರಂಟಿ ಯೋಜನೆ ಘೋಷಣೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…