ಮೈಸೂರು ನಗರ

ವಿವಿಗಳನ್ನು ಬಂದ್ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿಲುವು ಸರಿಯಾಗಿದೆ: ಎಂಎಲ್‌ಸಿ ಎಚ್.ವಿಶ್ವನಾಥ್‌

ಮೈಸೂರು: ರಾಜ್ಯದ ಹಲವು ವಿಶ್ವವಿದ್ಯಾನಿಲಯಗಳನ್ನು ಮುಚ್ಚಲು ನಿರ್ಧಾರ ಮಾಡಿರುವ ರಾಜ್ಯ ಸರ್ಕಾರದ ನಿಲುವು ಸರಿಯಾಗಿದೆ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಸರ್ಕಾರದ ಪರ ಬ್ಯಾಟ್‌ ಬೀಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಲವು ವಿವಿಗಳನ್ನು ಮುಚ್ಚಲು ಮುಂದಾಗಿರುವುದು ಒಳ್ಳೆಯ ನಿರ್ಧಾರ. ವಿಶ್ವವಿದ್ಯಾಲಯದ ಕುಲಪತಿ ಹುದ್ದೆ ಪಡೆಯಲು 5 ಕೋಟಿ ಫಿಕ್ಸ್ ಮಾಡಿದ್ದೇ ಈ ಹಿಂದಿನ ಬಿಜೆಪಿ ಸರ್ಕಾರ. ಅದು ಈಗಲೂ ಮುಂದುವರಿದಿದೆ. ಈ ವಿಚಾರ ಎಲ್ಲರಿಗೂ ಗೊತ್ತಿದೆ. ಹಲವು ವಿವಿಗಳನ್ನು ಬಂದ್ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿಲುವು ಸರಿಯಾಗಿದೆ. ರಾಜ್ಯದಲ್ಲಿಗ ಅಕ್ಷರ, ಆರೋಗ್ಯ ಎರಡಕ್ಕೂ ಬೆಲೆ ಇಲ್ಲದಂತಾಗಿದೆ ಎಂದರು.

ಇನ್ನು ಬಜೆಟ್ ಪೂರ್ವಭಾವಿ ಸಭೆ ನಡೆಸುತ್ತಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ವಿಶ್ವನಾಥ್‌ ಅವರು, ಸಿದ್ದರಾಮಯ್ಯ ಸರ್ಕಾರದಲ್ಲಿ ಶಾಸಕಾಂಗಕ್ಕೆ ಬೆಲೆಯೇ ಇಲ್ಲದಂತಾಗಿದೆ. ಬಜೆಟ್ ಕುರಿತು ಶಾಸಕಾಂಗ ಒಪ್ಪಿಗೆ ನೀಡುತ್ತದೆ. ಆದರೆ ಸರ್ಕಾರ ಶಾಸಕಾಂಗ ಒಪ್ಪಿಗೆ ನೀಡಿದ ಬಜೆಟ್ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಏನು ಮಾಡಿದೆ.
ಕಳೆದ ಬಾರಿಯ ಬಜೆಟ್ ಏನಾಯಿತು ಎಂದು ಪ್ರಶ್ನಿಸಿದರು.

ಇನ್ನು ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳಕ್ಕೆ ಉತ್ತರ ಪ್ರದೇಶ ಸರ್ಕಾರ ಮಾಡಿರುವ ವ್ಯವಸ್ಥೆ ಅತ್ಯುತ್ತಮವಾಗಿದೆ. ಸಣ್ಣ ಪುಟ್ಟ ಘಟನೆ ಹೊರತು ಪಡಿಸಿ ಇಡೀ ಕುಂಭಮೇಳದ ವ್ಯವಸ್ಥೆ ಚನ್ನಾಗಿದೆ. ಒಂದು ಮನೆ ನಡೆಸೋದೇ ಕಷ್ಟ. ಕೋಟ್ಯಾಂತರ ಜನರು ಭಾಗಿಯಾಗಿರುವ ಕುಂಭಮೇಳ ಯಶಸ್ವಿಯಾಗಿ ‌ನಡೆಯುತ್ತಿದೆ. ಇದಕ್ಕಾಗಿ ಉತ್ತರ ಪ್ರದೇಶ ಸರ್ಕಾರ ಸೂಕ್ತ ವ್ಯವಸ್ಥೆ ಮಾಡಿದೆ ಎಂದು ಉತ್ತರಪ್ರದೇಶ ಸರ್ಕಾರಕ್ಕೆ ಶಹಭಾಷ್ ಗಿರಿ ನೀಡಿದರು.

ಇನ್ನು ರಾಜ್ಯ ಸರ್ಕಾರದ ಗೃಹಲಕ್ಷ್ಮಿಯೋಜನೆಯ ಫಲಾನುಭವಿ ಮಹಿಳೆಯರು ಹಾಗು ಅನ್ನಭಾಗ್ಯ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಮ್ಮ ಹೆಂಡ್ತಿಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರ್ತಿಲ್ಲ ಎಂದು ಗಂಡಂದಿರು ಹೇಳ್ತಿದ್ದಾರೆ. ಇದರಿಂದ ಮನೆಗಳು ಮುರಿದು ಹೋಗುವ ಪರಿಸ್ಥಿತಿ ಬಂದಿದೆ ಎಂದು ಗ್ಯಾರಂಟಿ ಯೋಜನೆ ಘೋಷಣೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಬಯಲುಸೀಮೆಗೆ ಭದ್ರಾ ಜೀವಜಲ : ನವೆಂಬರ್ ಅಂತ್ಯಕ್ಕೆ ಎಲ್ಲ ಕೆರೆಗಳಿಗೂ ನೀರು ; ಸಚಿವ ಚಲುವರಾಯಸ್ವಾಮಿ ಭರವಸೆ*

ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…

2 hours ago

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

10 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

10 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

10 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

10 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

10 hours ago