ಮೈಸೂರು ನಗರ

ಶಿಕ್ಷಣದಿಂದ ಮಾತ್ರ ಅವೈಜ್ಞಾನಿಕತೆ ಹೋಗಲಾಡಿಗಿಸಲು ಸಾಧ್ಯ: ಸಚಿವ ಡಾ. ಎಚ್‌.ಸಿ. ಮಹದೇವಪ್ಪ

ಮೈಸೂರು: ಇಂದಿನ ಯುವ ಪೀಳಿಗೆಯು ಸಾಮಾಜಿಕ ಜಾಲತಾಣದಲ್ಲಿ ಮುಳುಗಿ ತಮ್ಮ ಶಕ್ತಿಯನ್ನು ಕಳೆದುಕೊಳ್ಳುತ್ತಿದ್ದಾರೆ. ಆದರಿಂದ ಹೊರ ಬಂದು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಪುಸ್ತಕ ಓದುವುದರಿಂದ ಭೌದ್ದಿಕವಾಗಿ ಬಲಾಢ್ಯರಾಗಲು ಸಾಧ್ಯವಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್‌.ಸಿ. ಮಹದೇವಪ್ಪ ತಿಳಿಸಿದ್ದಾರೆ.

ಇಂದು (ಫೆ.3) ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಹಮ್ಮಿಕೊಂಡಿದ್ದ ಪ್ರೊ.ಎನ್‌.ಲಕ್ಷ್ಮೀ ಅವರ ಅಭಿನಂದನಾ ಸಮಾರಂಭ ಉದ್ಘಾಟಿಸಿ, ʼಅರಿವಿನ ಸಿರಿʼ ಅಭಿನಂದನಾ ಗ್ರಂಥ ಲೋಕಾರ್ಪಣೆ ಮಾಡಿ ಮಾತನಾಡಿದರು.

ನಮ್ಮ ದೇಶದಲ್ಲಿರುವ ಅವೈಜ್ಞಾನಿಕತೆಯನ್ನು ತೊಲಗಿಸಲು ಶಿಕ್ಷಣ ಬಹಳ ಮುಖ್ಯವಿದೆ. ಮೂಢನಂಬಿಕೆ, ಅನಾಗರಿಕತೆ, ಹಾಗೂ ಶೋಷಣೆಯನ್ನು ಶಿಕ್ಷಣದಿಂದ ಮಾತ್ರ ತೊಡೆದು ಹಾಕಲು ಸಾದ್ಯ. ಈ ನಿಟ್ಟಿನಲ್ಲಿ ಯುವ ಸಮೂಹವು ಶಿಕ್ಷಣದ ಕಡೆಗೆ ಹೆಚ್ಚು ಗಮನ ನೀಡಬೇಕು ಎಂದು ಹೇಳಿದರು.

ʼಶಿಕ್ಷಣವು ಹುಲಿಯ ಹಾಲಿನಂತೆ ಅದನ್ನು ಕುಡಿದವರು ಘರ್ಜಿಸಲೇಬೇಕುʼ ಎಂಬ ಡಾ. ಬಿ.ಆರ್.‌ ಅಂಬೇಡ್ಕರ್‌ ಅವರ ಮಾತಿನಂತೆ ಬಡತನದಿಂದ ಬಂದ ಪ್ರೊ.ಎನ್‌.ಲಕ್ಷ್ಮೀ ಅವರು ವಿದ್ಯಾವಂತರಾಗಿ ಪ್ರಾಧ್ಯಾಪಕರ ವೃತ್ತಿಯಲ್ಲಿ ಸೇವೆ ಸಲ್ಲಿಸಿ, ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ ಎಂದು ಶ್ಲಾಘನೆ ಮಾಡಿದರು.

 

ಆಂದೋಲನ ಡೆಸ್ಕ್

Recent Posts

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

12 mins ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

3 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

3 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

4 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

4 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

4 hours ago