ಮೈಸೂರು ನಗರ

ಶಿಕ್ಷಣದಿಂದ ಮಾತ್ರ ಅವೈಜ್ಞಾನಿಕತೆ ಹೋಗಲಾಡಿಗಿಸಲು ಸಾಧ್ಯ: ಸಚಿವ ಡಾ. ಎಚ್‌.ಸಿ. ಮಹದೇವಪ್ಪ

ಮೈಸೂರು: ಇಂದಿನ ಯುವ ಪೀಳಿಗೆಯು ಸಾಮಾಜಿಕ ಜಾಲತಾಣದಲ್ಲಿ ಮುಳುಗಿ ತಮ್ಮ ಶಕ್ತಿಯನ್ನು ಕಳೆದುಕೊಳ್ಳುತ್ತಿದ್ದಾರೆ. ಆದರಿಂದ ಹೊರ ಬಂದು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಪುಸ್ತಕ ಓದುವುದರಿಂದ ಭೌದ್ದಿಕವಾಗಿ ಬಲಾಢ್ಯರಾಗಲು ಸಾಧ್ಯವಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್‌.ಸಿ. ಮಹದೇವಪ್ಪ ತಿಳಿಸಿದ್ದಾರೆ.

ಇಂದು (ಫೆ.3) ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಹಮ್ಮಿಕೊಂಡಿದ್ದ ಪ್ರೊ.ಎನ್‌.ಲಕ್ಷ್ಮೀ ಅವರ ಅಭಿನಂದನಾ ಸಮಾರಂಭ ಉದ್ಘಾಟಿಸಿ, ʼಅರಿವಿನ ಸಿರಿʼ ಅಭಿನಂದನಾ ಗ್ರಂಥ ಲೋಕಾರ್ಪಣೆ ಮಾಡಿ ಮಾತನಾಡಿದರು.

ನಮ್ಮ ದೇಶದಲ್ಲಿರುವ ಅವೈಜ್ಞಾನಿಕತೆಯನ್ನು ತೊಲಗಿಸಲು ಶಿಕ್ಷಣ ಬಹಳ ಮುಖ್ಯವಿದೆ. ಮೂಢನಂಬಿಕೆ, ಅನಾಗರಿಕತೆ, ಹಾಗೂ ಶೋಷಣೆಯನ್ನು ಶಿಕ್ಷಣದಿಂದ ಮಾತ್ರ ತೊಡೆದು ಹಾಕಲು ಸಾದ್ಯ. ಈ ನಿಟ್ಟಿನಲ್ಲಿ ಯುವ ಸಮೂಹವು ಶಿಕ್ಷಣದ ಕಡೆಗೆ ಹೆಚ್ಚು ಗಮನ ನೀಡಬೇಕು ಎಂದು ಹೇಳಿದರು.

ʼಶಿಕ್ಷಣವು ಹುಲಿಯ ಹಾಲಿನಂತೆ ಅದನ್ನು ಕುಡಿದವರು ಘರ್ಜಿಸಲೇಬೇಕುʼ ಎಂಬ ಡಾ. ಬಿ.ಆರ್.‌ ಅಂಬೇಡ್ಕರ್‌ ಅವರ ಮಾತಿನಂತೆ ಬಡತನದಿಂದ ಬಂದ ಪ್ರೊ.ಎನ್‌.ಲಕ್ಷ್ಮೀ ಅವರು ವಿದ್ಯಾವಂತರಾಗಿ ಪ್ರಾಧ್ಯಾಪಕರ ವೃತ್ತಿಯಲ್ಲಿ ಸೇವೆ ಸಲ್ಲಿಸಿ, ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ ಎಂದು ಶ್ಲಾಘನೆ ಮಾಡಿದರು.

 

ಆಂದೋಲನ ಡೆಸ್ಕ್

Recent Posts

ವರ್ತನೆ ತಪ್ಪಿದರೆ ದಾಳಿ ನಿಶ್ಚಿತ : ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ

ವಾಷಿಂಗ್ಟನ್ : ಇರಾನ್ ತಪ್ಪು ವರ್ತನೆ ತೋರಿದರೆ ಮತ್ತೆ ಸೇನಾ ದಾಳಿ ಆರಂಭವಾಗಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

5 hours ago

ನಿಗದಿಗಿಂತ ಮುನ್ನವೇ ಮುಂಗಾರು ಮಳೆ : ಮೇ ಅಂತ್ಯಕ್ಕೆ ಕೇರಳ ಪ್ರವೇಶ

ಬೆಂಗಳೂರು : ಬಿರುಬೇಸಿಗೆಯಿಂದಾಗಿ ಬಳಲಿ ಬೆಂಡಾಗಿರುವ ಜನತೆಗೆ ಕೇಂದ್ರ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿ ನಿಗದಿಗಿಂತ ಮುಂಚಿತವಾಗಿಯೇ…

5 hours ago

ಬೆಟ್ಟದಪುರ | ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶ ; ಬಾಲಕ ಸಾವು

ಬೆಟ್ಟದಪುರ : ಪಿರಿಯಾಪಟ್ಟಣ ತಾಲ್ಲೂಕಿನ ಬಿ.ಟಿ.ಎಂ. ಕೊಪ್ಪಲು ಗ್ರಾಮದಲ್ಲಿ ಮನೆಯ ಹಿಂದೆ ಕ್ರಿಕೆಟ್ ಆಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ…

7 hours ago

ಚಿಪ್ಪುಹಂದಿ ಬೇಟೆಯಾಡಿ ಮಾರಾಟಕ್ಕೆ ಯತ್ನ: ಓರ್ವ ಬಂಧನ

ಮೈಸೂರು : ಕಾಡುಪ್ರಾಣಿ ಬೇಟೆ ಹಾಗೂ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ…

8 hours ago

ʼದೃಷ್ಟಿ ಉಪಗ್ರಹʼ ಉಡಾವಣೆ ಯಶಸ್ವಿ

ಬೆಂಗಳೂರು : ಮೋಡ, ಕತ್ತಲೆ, ಮಳೆ... ಯಾವುದಕ್ಕೂ ಜಗ್ಗದ ಕಣ್ಣು ಹೊಂದಿರುವ ಭಾರತದ ಮೊದಲ ಖಾಸಗಿ ಉಪಗ್ರಹ ‘ದೃಷ್ಟಿ’ ಇಂದು…

9 hours ago

ಮೇ.6ರಂದು ಯಸಳೂರಿನ ಅರ್ಜುನ ಆನೆ ಸಮಾಧಿ ಸ್ಥಳದ ಸ್ಮಾರಕ ಉದ್ಘಾಟನೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…

11 hours ago