ಮೈಸೂರು ನಗರ

ಯುಪಿಎಸ್‌ಸಿ ಪರೀಕ್ಷೆಗೆ ಕಠಿಣ ಪರಿಶ್ರಮ ಅಗತ್ಯ : ಕಿರಣ ಕಮತೆ

ಮೈಸೂರು : ಯುಪಿಎಸ್‌ ಪರೀಕ್ಷೆ ಭೇದಿಸುವುದು ಸುಲಭವಲ್ಲ. ಅದಕ್ಕೆ ಕಠಿಣ ಪರಿಶ್ರಮ, ಸ್ಥಿರತೆ ಮತ್ತು ಸ್ಮಾರ್ಟ್ ಓದು ಅಗತ್ಯ ಎಂದು ಯುಪಿಎಸ್‌ಸಿ  ಪರೀಕ್ಷೆಯಲ್ಲಿ 53ನೇ ರ‍್ಯಾಂಕ್ ಪಡೆದು ಐಎಎಸ್‌ಗೆ ಆಯ್ಕೆಯಾಗಿರುವ ಕಿರಣ್ ಕಮತೆ ಅವರು ಯುವ ಅಭ್ಯರ್ಥಿಗಳಿಗೆ ಕಿವಿಮಾತು ಹೇಳಿದರು.

ಕೆಎಸ್‌ಓಯುನ ಸ್ಮರ್ಧಾತ್ಮಕ ಪರೀಕ್ಷಾ ಕೇಂದ್ರದಲ್ಲಿ ನಡೆಯುತ್ತಿರುವ ಐಎಎಸ್‌,ಕೆಎಎಸ್‌ ತರಬೇತಿ ಶಿಬಿರದ ವಿಶೇಷ ತರಬೇತಿ ಕಾರ್ಯಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಚಿಕ್ಕೋಡಿ ತಾಲ್ಲೂಕು ಹತ್ತರವಾಟ ಎಂಬ ಚಿಕ್ಕಗ್ರಾಮದಲ್ಲಿ ಹುಟ್ಟಿನ ನಾನು, ಈ ಹಿಂದೆ ಪಿಡಬ್ಲ್ಯೂಡಿ ಇಂಜಿನಿಯರ್ ಆಗಿದೆ. ಆದರೆ ಯುಪಿಎಸ್‌ಸಿ ಓದುವ ಹಂಬಲವಿತ್ತು. ಹೀಗಾಗಿ ತಯಾರಿ ಆರಂಭಿಸಿದೆ. ಆರು ಬಾರಿ ಪ್ರಯತ್ನಿಸಿದೆ ಕೊನೆಯಲ್ಲಿ ಯಶಸ್ಸು ಸಿಕ್ಕಿದೆ. ಇದಕ್ಕೆ ಕಠಿಣ ಪರಿಶ್ರಮ ಇರಬೇಕು ಎಂದರು.

ದಿನಕ್ಕೆ ಕನಿಷ್ಠ 9 ರಿಂದ 10 ಗಂಟೆ ಸತತ ಓದು ಅನಿವಾರ್ಯ. ಆದರೆ ಸುಮ್ಮನೆ ಓದಿದರೆ ಸಾಲದು, ಸ್ಮಾರ್ಟ್ ಓದು ಬೇಕು” ಎಂದು ಒತ್ತಿ ಹೇಳಿದ ಅವರು, ಯುಪಿಎಸ್‌ಸಿ ಪರೀಕ್ಷೆ ತಯಾರಿಗೆ ಎನ್‌ಸಿಇಆರ್‌ಟಿ ಪುಸ್ತಕಗಳನ್ನು ಓದಬೇಕು. ಜತೆಗೆ ‘ದಿ ಹಿಂದೂ’, ‘ಇಂಡಿಯನ್ ಎಕ್ಸ್‌ಪ್ರೆಸ್’ ಪ್ರಜಾವಾಣಿ ಪತ್ರಿಕೆಗಳನ್ನು ದಿನನಿತ್ಯ ಓದುವುದು ಅತ್ಯಂತ ಮುಖ್ಯ. ಪ್ರಸ್ತುತ ವಿದ್ಯಮಾನಗಳನ್ನು ಟಿಪ್ಪಣಿ ಮಾಡುವುದು, ಪ್ರಿಲಿಮ್ಸ್‌ಗೆ MCQ ಪ್ರ್ಯಾಕ್ಟಿಸ್, ಮೇನ್ಸ್‌ಗೆ ಉತ್ತರ ಬರೆಯುವ ಅಭ್ಯಾಸ ಮತ್ತು ನಿಯಮಿತ ಮಾಕ್ ಟೆಸ್ಟ್‌ಗಳು ಅಗತ್ಯ ಎಂದು ಅವರು ಸಲಹೆ ನೀಡಿದರು.

ಕೆಪಿಎಸ್‌ಸಿ ಪರೀಕ್ಷೆಗೆ ಕರ್ನಾಟಕದ ಇತಿಹಾಸ, ಭೂಗೋಳ, ಆರ್ಥಿಕತೆ, ರಾಜ್ಯ ವಿಶೇಷ ವಿಷಯಗಳ ಮೇಲೆ ಹೆಚ್ಚು ಗಮನ ಹರಿಸಬೇಕು. ರಾಜ್ಯ ಪತ್ರಿಕೆಗಳು ಮತ್ತು ಕೆಪಿಎಸ್‌ಸಿ ಮಾದರಿ ಪ್ರಶ್ನೆಪತ್ರಿಕೆಗಳನ್ನು ಅಭ್ಯಾಸ ಮಾಡಿದರೆ ಸಹಾಯವಾಗುತ್ತದೆ ಎಂದು ತಿಳಿಸಿದರು.

ಲಕ್ಷಾಂತರ ಅಭ್ಯರ್ಥಿಗಳು ಲೋಕಸೇವಾ ಆಯೋಗದ ನಾಗರೀಕ ಸೇವೆಗಳ ಪರೀಕ್ಷೆ ಬರೆಯುತ್ತಾರೆ. ಆದರೆ ಆಯ್ಕೆ ಆಗುವುದು ಮಾತ್ರ ಸಾವಿರ ಅಭ್ಯರ್ಥಿಗಳಷ್ಟು. ಕಾರಣ ಈ ಪರೀಕ್ಷೆಯ ಕಠಿಣತೆ ಅಷ್ಟರಮಟ್ಟಿಗೆ ಇರುತ್ತದೆ. ಕೆಲವರು ಒಂದು ವರ್ಷದ ಶ್ರಮದಿಂದಲೇ ಯುಪಿಎಸ್‌ಸಿ ಪರೀಕ್ಷೆ ಗೆದ್ದರೆ, ಇನ್ನು ಕೆಲವರು ನಾಲ್ಕೈದು ವರ್ಷಕ್ಕೆ ಯಶಸ್ಸನ್ನು ಮುಟ್ಟುತ್ತಾರೆ. ಇನ್ನು ಕೆಲವರು ಎರಡು-ಮೂರು ಪ್ರಯತ್ನಗಳಲ್ಲಿ ಗೆಲ್ಲುವವರು ಇದ್ದಾರೆ, ಹಾಗೆಯೇ ನಿರಂತರ ಪ್ರಯತ್ನವಿದ್ದರೂ ಗೆಲ್ಲದೇ ಯುಪಿಎಸ್‌ಸಿ ಪರೀಕ್ಷೆಯಿಂದ ಹಿಮ್ಮುಖಗೊಂಡವರು ಇದ್ದಾರೆ ಎಂದರು.

ಐಎಎಸ್‌ ಕನಸು ಕಾಣುವುದು ಸುಲಭ, ಆದರೆ ಅದನ್ನು ಸಾಕಾರಗೊಳಿಸಲು ಕಠಿಣ ಪರಿಶ್ರಮವೇ ಏಕೈಕ ಮಾರ್ಗ ಎಂದ ಅವರು ಯುಪಿಎಸ್‌ಸಿ ಹಾಗೂ ಕೆಪಿಎಸ್‌ಸಿ ಪರೀಕ್ಷೆಗಳಲ್ಲಿ ಜಯಗಳಿಸಲು ಅಗತ್ಯವಾದ ತಯಾರಿ ವಿಧಾನಗಳ ಬಗ್ಗೆ ವಿವರಿಸಿದರು.

ಕುಲಪತಿ ಶರಣಪ್ಪ ಹಲಸೆ, ಸಂಯೋಜನಾಧಿಕಾರಿ ಸತ್ಯನಾರಯಣಗೌಡ ಸೇರಿದಂತೆ ಇನ್ನಿತರರು ಇದ್ದರು.

ಆಂದೋಲನ ಡೆಸ್ಕ್

Recent Posts

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

50 mins ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

55 mins ago

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

4 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

4 hours ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

4 hours ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

4 hours ago