ಮೈಸೂರು: ಚಾಮುಂಡಿಬೆಟ್ಟದ ಅನ್ನದಾಸೋಹ ಭವನಕ್ಕೆ ವಿ-ಗಾರ್ಡ್ ಕಂಪನಿಯಿಂದ ಉಚಿತ ಶುದ್ಧ ಕುಡಿಯುವ ನೀರಿನ ಘಟಕದ ಆರ್ಓ ಪ್ಲಾಂಟ್ನ್ನು ಸಮರ್ಪಣೆ ಮಾಡಲಾಯಿತು.
ಚಾಮುಂಡಿಬೆಟ್ಟಕ್ಕೆ ಆಗಮಿಸುವ ಸಾರ್ವಜನಿಕರು ಹಾಗೂ ಪ್ರವಾಸಿಗರ ಅನುಕೂಲಕ್ಕಾಗಿ ಶುದ್ಧ ಕುಡಿಯುವ ನೀರಿನ ಘಟಕದ ಅವಶ್ಯಕತೆಯಿತ್ತು. ಹೀಗಾಗಿ ಇದನ್ನು ಮನಗಂಡ ವಿ-ಗಾರ್ಡ್ ಕಂಪನಿ ಇಂದು ಅನ್ನದಾಸೋಹ ಭವನಕ್ಕೆ ಉಚಿತವಾಗಿ ಶುದ್ಧ ನೀರಿನ ಘಟಕವನ್ನು ಸಮರ್ಪಣೆ ಮಾಡಿದೆ.
ಚಾಮುಂಡೇಶ್ವರಿ ಕೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರು, ಚಾಮುಂಡಿ ಬೆಟ್ಟಕ್ಕೆ ಮೂಲಭೂತ ಸೌಕರ್ಯಗಳನ್ನು ಶಾಶ್ವತವಾಗಿ ಒದಗಿಸುವಂತೆ ಖಾಸಗಿ ಕಂಪನಿಯವರಿಗೆ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿದ ವಿ-ಗಾರ್ಡ್ ಆರ್ಓ ಪ್ಲಾಂಟ್ ಶುದ್ಧ ಕುಡಿಯುವ ನೀರಿನ ಘಟಕವನ್ನು ವಿ-ಗಾರ್ಡ್ ಕಂಪನಿಯ ಉಪಾಧ್ಯಕ್ಷ ಸೂರ್ಯಪ್ರಕಾಶ್, ಶಾಖೆ ವ್ಯವಸ್ಥಾಪಕ ಹರ್ಷೇಂದ್ರ ಪ್ರಸಾದ್ ಅವರು ಹಸ್ತಾಂತರಿಸಿದರು.
ಬಳಿಕ ಚಾಮುಂಡೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕರಾದ ಡಾ.ಶಶಿಶೇಖರ್ ದೀಕ್ಷಿತ್ ಅವರು, ಹೊಸ ಕುಡಿಯುವ ನೀರಿನ ಘಟಕಕ್ಕೆ ಪೂಜೆ ಸಲ್ಲಿಸಿ ವಿ ಗಾರ್ಡ್ ಕಂಪನಿಗೆ ಹಾರೈಸಿದರು.
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…