ಮೈಸೂರು ನಗರ

ದೇಶ ಕಂಡ ಅತ್ಯಂತ ದುರ್ಬಲ ಪ್ರಧಾನಿ ನರೇಂದ್ರ ಮೋದಿ: ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್.ಉಗ್ರಪ್ಪ

ಮೈಸೂರು: ಈ ದೇಶ ಕಂಡ ಅತ್ಯಂತ ದುರ್ಬಲ ಪ್ರಧಾನಮಂತ್ರಿ ಎಂದರೆ ಅದು ನರೇಂದ್ರ ಮೋದಿ ಮಾತ್ರ ಎಂದು ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್.ಉಗ್ರಪ್ಪ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮೈಸೂರಿನ ಕಾಂಗ್ರೆಸ್‌ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ದೇಶ ಕಂಡಂತಹ ದುರ್ಬಲ ಪ್ರಧಾನಮಂತ್ರಿ ಅಂದ್ರೆ ಅದು ನರೇಂದ್ರ ಮೋದಿ. ಜನ ವಿರೋಧಿ ಪ್ರವೃತ್ತಿಯನ್ನು ಮೈಗೂಡಿಸಿಕೊಂಡಿದ್ದಾರೆ. ಕಳೆದ ಹತ್ತು ಹನ್ನೊಂದು ವರ್ಷಗಳಲ್ಲಿ ಈ ದೇಶದ ಸಾಲ ಸುಮಾರು 175 ಲಕ್ಷ ಕೋಟಿಗೆ ಹೋಗಿದೆ. ನಿಮ್ಮ ಆಡಳಿತ ಅವಧಿಯಲ್ಲಿ ಯಾವ ದೊಡ್ಡ ದೊಡ್ಡ ಯೋಜನೆಗಳನ್ನ ಮಾಡಿದ್ದೀರಿ ಎಂದು ಪ್ರಶ್ನೆ ಮಾಡಿದರು.

ಇನ್ನು ದೇಶದ ಜನರ ಮಧ್ಯೆ ಕಂದಕವನ್ನು ಸೃಷ್ಟಿ ಮಾಡಿ, ಇನ್ನೊಂದು ಕಡೆ ಜನರ ಬದುಕಿನ ಮೇಲೆ ಚಪ್ಪಡಿ ಕಲ್ಲು ಎಳೆಯುವ ಕೆಲಸ ಮಾಡುತ್ತಿದ್ದಾರೆ. ದೇಶದ ಉದ್ದಗಲಕ್ಕೂ ಬೆಲೆ ಏರಿಕೆಯಾಗಿದೆ. ಬಿಜೆಪಿಯವರು ಮೈಸೂರಿನಿಂದ ಜನಾಕ್ರೋಶ ಯಾತ್ರೆ ಮಾಡಿದ್ದಾರೆ. ಜನಾಕ್ರೋಶ ನಿಜವಾಗಿ ಇರೋದು ಕೇಂದ್ರ ಸರ್ಕಾರದ ಮೇಲೆ. ತಾಕತ್ತಿದ್ದರೆ ಬಿಜೆಪಿಯವರು ಸಾರ್ವಜನಿಕ ಚರ್ಚೆಗೆ ಬನ್ನಿ. ಬೆಲೆ ಏರಿಕೆ ಬಗ್ಗೆ ಯಾರು ಕಾರಣ ಎಂದು ಚರ್ಚೆ ಮಾಡೋಣ ಬನ್ನಿ ಎಂದು ಸವಾಲು ಹಾಕಿದರು.

ಇನ್ನು ಬೇರೆ ರಾಜ್ಯಗಳಿಗೆ ಹೋಲಿಸಿದ್ರೆ ನಮ್ಮ ರಾಜ್ಯದಲ್ಲಿ ಅಗತ್ಯ ವಸ್ತುಗಳ ಮೇಲಿನ ಬೆಲೆ ಕಡಿಮೆ ಇದೆ. ನಮ್ಮ ಸರ್ಕಾರದ ಮೇಲೆ ಆರೋಪ ಮಾಡುವುದಕ್ಕಿಂತ ನಿಮ್ಮ ಕೇಂದ್ರ ಸರ್ಕಾರದ ಮೇಲೆ ಒತ್ತಾಯ ಮಾಡಿ. ಗ್ಯಾಸ್ ಮೇಲೆ ದಿಢೀರನೇ 50 ರೂ ಹೆಚ್ಚಳ ಮಾಡಿರುವುದನ್ನು ಈ ಕೂಡಲೇ ವಾಪಸ್ ಪಡೆಯಬೇಕು. ವಿಜಯೇಂದ್ರ ಇನ್ನೂ ಎಳಸು ಇನ್ನೂ ಬಲಿತಿಲ್ಲ.
ನಮ್ಮ ವಿರುದ್ಧ ಜನಾಕ್ರೋಶ ಮಾಡುವ ಬದಲು ಕೇಂದ್ರ ಸರ್ಕಾರದ ವಿರುದ್ಧ ಮಾಡಿ ಮಿಸ್ಟರ್ ಅಶೋಕ್, ಮಿಸ್ಟರ್ ವಿಜಯೇಂದ್ರ ಎಂದು ಏಕವಚನ ವಾಗ್ದಾಳಿ ನಡೆಸಿದರು.
ಪ್ರಧಾನಿ ಮೋದಿ ಅವರು ಅಂದಾನಿ, ಅದಾನಿಗಳ ಸಾಲ ಮನ್ನಾ ಮಾಡ್ತಾರೆ. ಯಾಕೆ ನಮ್ಮ ರೈತರ ಸಾಲಮನ್ನಾ ಮಾಡ್ತಾ ಇಲ್ಲ ಎಂದು ಪ್ರಶ್ನೆ ಮಾಡಿದರು.

ಆಂದೋಲನ ಡೆಸ್ಕ್

Recent Posts

ತುಮಕೂರಿನಲ್ಲಿ ಸರ್ಕಾರದ ಸಾಧನಾ ಸಮಾವೇಶ

ತುಮಕೂರು: 2023ರಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ, 4ನೇ ವರ್ಷಕ್ಕೆ ಪಾದಾರ್ಪಣೆ…

45 mins ago

ಅಗತ್ಯವಿದ್ದರೆ ಹುಚ್ಚು ಬೀದಿ ನಾಯಿಗಳನ್ನು ಕೊಲ್ಲಿ: ಸುಪ್ರೀಂಕೋರ್ಟ್‌ ಅನುಮತಿ

ನವದೆಹಲಿ: ಬೀದಿ ನಾಯಿಗಳ ನಿಯಂತ್ರಣಕ್ಕೆ ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಲು ಆದೇಶಿಸಿದ್ದ ಸುಪ್ರೀಂಕೋರ್ಟ್‌ ತನ್ನ ಆದೇಶವನ್ನು ಹಿಂಪಡೆಯುವುದಿಲ್ಲ ಎಂದು ಹೇಳಿದೆ.…

1 hour ago

ಉಸಿರು ಚೆಲ್ಲಿದ ದುಬಾರೆಯ ಮಾರ್ತಾಂಡ ಆನೆ

ಕೊಡಗು: ಜಿಲ್ಲೆಯ ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಸ್ನಾನ ಮಾಡುವ ವೇಳೆ ಕಂಜನ್‌ ಆನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ…

3 hours ago

ಸಾರಿಗೆ ಮುಷ್ಕರಕ್ಕೆ ಹೈಕೋರ್ಟ್‌ ಬ್ರೇಕ್

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ ಸಾರಿಗೆ ಸಂಘಟನೆಗಳು ಮೇ.20ರಂದು ಕರೆ ನೀಡಿದ್ದ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ಅಂಕುಶ ಹಾಕಿದೆ.…

3 hours ago

ನಾಳೆ ರಾಜ್ಯಾದ್ಯಂತ ಮೆಡಿಕಲ್‌ ಶಾಪ್‌ಗಳು ಬಂದ್‌

ಬೆಂಗಳೂರು: ಆನ್‌ಲೈನ್‌ ಮೂಲಕ ಔಷಧಿಗಳ ಖರೀದಿ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ನಾಳೆ ರಾಜ್ಯದಾದ್ಯಂತ ಮೆಡಿಕಲ್‌ ಶಾಪ್‌ಗಳು ಬಂದ್‌ ಆಗಲಿವೆ. ಅಖಿಲ…

4 hours ago

ಓದುಗರ ಪತ್ರ: ನೀಟು…. ಘಾಟು !

ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…

6 hours ago