ಮೈಸೂರು ನಗರ

ದೇಶ ಕಂಡ ಅತ್ಯಂತ ದುರ್ಬಲ ಪ್ರಧಾನಿ ನರೇಂದ್ರ ಮೋದಿ: ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್.ಉಗ್ರಪ್ಪ

ಮೈಸೂರು: ಈ ದೇಶ ಕಂಡ ಅತ್ಯಂತ ದುರ್ಬಲ ಪ್ರಧಾನಮಂತ್ರಿ ಎಂದರೆ ಅದು ನರೇಂದ್ರ ಮೋದಿ ಮಾತ್ರ ಎಂದು ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್.ಉಗ್ರಪ್ಪ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮೈಸೂರಿನ ಕಾಂಗ್ರೆಸ್‌ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ದೇಶ ಕಂಡಂತಹ ದುರ್ಬಲ ಪ್ರಧಾನಮಂತ್ರಿ ಅಂದ್ರೆ ಅದು ನರೇಂದ್ರ ಮೋದಿ. ಜನ ವಿರೋಧಿ ಪ್ರವೃತ್ತಿಯನ್ನು ಮೈಗೂಡಿಸಿಕೊಂಡಿದ್ದಾರೆ. ಕಳೆದ ಹತ್ತು ಹನ್ನೊಂದು ವರ್ಷಗಳಲ್ಲಿ ಈ ದೇಶದ ಸಾಲ ಸುಮಾರು 175 ಲಕ್ಷ ಕೋಟಿಗೆ ಹೋಗಿದೆ. ನಿಮ್ಮ ಆಡಳಿತ ಅವಧಿಯಲ್ಲಿ ಯಾವ ದೊಡ್ಡ ದೊಡ್ಡ ಯೋಜನೆಗಳನ್ನ ಮಾಡಿದ್ದೀರಿ ಎಂದು ಪ್ರಶ್ನೆ ಮಾಡಿದರು.

ಇನ್ನು ದೇಶದ ಜನರ ಮಧ್ಯೆ ಕಂದಕವನ್ನು ಸೃಷ್ಟಿ ಮಾಡಿ, ಇನ್ನೊಂದು ಕಡೆ ಜನರ ಬದುಕಿನ ಮೇಲೆ ಚಪ್ಪಡಿ ಕಲ್ಲು ಎಳೆಯುವ ಕೆಲಸ ಮಾಡುತ್ತಿದ್ದಾರೆ. ದೇಶದ ಉದ್ದಗಲಕ್ಕೂ ಬೆಲೆ ಏರಿಕೆಯಾಗಿದೆ. ಬಿಜೆಪಿಯವರು ಮೈಸೂರಿನಿಂದ ಜನಾಕ್ರೋಶ ಯಾತ್ರೆ ಮಾಡಿದ್ದಾರೆ. ಜನಾಕ್ರೋಶ ನಿಜವಾಗಿ ಇರೋದು ಕೇಂದ್ರ ಸರ್ಕಾರದ ಮೇಲೆ. ತಾಕತ್ತಿದ್ದರೆ ಬಿಜೆಪಿಯವರು ಸಾರ್ವಜನಿಕ ಚರ್ಚೆಗೆ ಬನ್ನಿ. ಬೆಲೆ ಏರಿಕೆ ಬಗ್ಗೆ ಯಾರು ಕಾರಣ ಎಂದು ಚರ್ಚೆ ಮಾಡೋಣ ಬನ್ನಿ ಎಂದು ಸವಾಲು ಹಾಕಿದರು.

ಇನ್ನು ಬೇರೆ ರಾಜ್ಯಗಳಿಗೆ ಹೋಲಿಸಿದ್ರೆ ನಮ್ಮ ರಾಜ್ಯದಲ್ಲಿ ಅಗತ್ಯ ವಸ್ತುಗಳ ಮೇಲಿನ ಬೆಲೆ ಕಡಿಮೆ ಇದೆ. ನಮ್ಮ ಸರ್ಕಾರದ ಮೇಲೆ ಆರೋಪ ಮಾಡುವುದಕ್ಕಿಂತ ನಿಮ್ಮ ಕೇಂದ್ರ ಸರ್ಕಾರದ ಮೇಲೆ ಒತ್ತಾಯ ಮಾಡಿ. ಗ್ಯಾಸ್ ಮೇಲೆ ದಿಢೀರನೇ 50 ರೂ ಹೆಚ್ಚಳ ಮಾಡಿರುವುದನ್ನು ಈ ಕೂಡಲೇ ವಾಪಸ್ ಪಡೆಯಬೇಕು. ವಿಜಯೇಂದ್ರ ಇನ್ನೂ ಎಳಸು ಇನ್ನೂ ಬಲಿತಿಲ್ಲ.
ನಮ್ಮ ವಿರುದ್ಧ ಜನಾಕ್ರೋಶ ಮಾಡುವ ಬದಲು ಕೇಂದ್ರ ಸರ್ಕಾರದ ವಿರುದ್ಧ ಮಾಡಿ ಮಿಸ್ಟರ್ ಅಶೋಕ್, ಮಿಸ್ಟರ್ ವಿಜಯೇಂದ್ರ ಎಂದು ಏಕವಚನ ವಾಗ್ದಾಳಿ ನಡೆಸಿದರು.
ಪ್ರಧಾನಿ ಮೋದಿ ಅವರು ಅಂದಾನಿ, ಅದಾನಿಗಳ ಸಾಲ ಮನ್ನಾ ಮಾಡ್ತಾರೆ. ಯಾಕೆ ನಮ್ಮ ರೈತರ ಸಾಲಮನ್ನಾ ಮಾಡ್ತಾ ಇಲ್ಲ ಎಂದು ಪ್ರಶ್ನೆ ಮಾಡಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ | ರಾಜ್ಯ ವಿಧಾನ ಮಂಡಲ ಅಧಿವೇಶನ ಸದ್ಬಳಕೆಗೆ ದಾರಿ ಯಾವುದಯ್ಯ!?

ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…

16 hours ago

ಓದುಗರ ಪತ್ರ | ಹಿಂದಿ ಶಿಕ್ಷಕರ ನೇಮಕಾತಿ ಏಕಿಲ್ಲ?

15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…

16 hours ago

ಓದುಗರ ಪತ್ರ | ಕನ್ನಡ ಚಿತ್ರ; ಟಿಕೆಟ್‌ಗಳಲ್ಲಿ ಆಂಗ್ಲ ಹೆಸರು !

ಮಲ್ಟಿಪ್ಲೆಕ್ಸ್‌ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್‌ನಲ್ಲಿ ಚಿತ್ರದ…

16 hours ago

ಓದುಗರ ಪತ್ರ | ಮತದಾರರ ಕರಡು ಪಟ್ಟಿಯ ತಪ್ಪುಗಳನ್ನು ಸರಿಪಡಿಸಿ

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್‌ಐಆರ್ ಬಗ್ಗೆ ಹಲವಾರು ಅನುಮಾನ…

16 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಕಳಚಿದ ಚಲನಚಿತ್ರ ಪತ್ರಿಕೋದ್ಯಮದ ಹಿರಿಯ ಕೊಂಡಿ ಶ್ರೀಕೃಪಾ

ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…

16 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 28  ಶುಕ್ರವಾರ

16 hours ago