ಮೈಸೂರು: ಶ್ರೀರಾಮ ಮಂದಿರ ನಿರ್ಮಿಸಿದ ಮೇಲೆ ನಮಗೆ ಸ್ವಾತಂತ್ರ್ಯ ಬಂದಿದೆ ಎಂದು ಹೇಳಿಕೆ ನೀಡಿದ್ದ ಮೋಹನ್ ಭಾಗವತ್ ಮೇಲೆ ಕ್ರಮ ಜರುಗಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್. ಉಗ್ರಪ್ಪ ಸವಾಲು ಹಾಕಿದ್ದಾರೆ.
ನಗರದಲ್ಲಿ ಇಂದು(ಜನವರಿ.17) ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್.ಉಗ್ರಪ್ಪ ಹಾಗೂ ಜಿ.ಎನ್.ನಂಜುಡಸ್ವಾಮಿ ಅವರ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಹುಲ್ ಗಾಂಧಿ ಹೇಳಿಕೆ ನೀಡಿದಾಗ ಅವರ ವಿರುದ್ಧ ಅಪಾರ್ಥ ಕಲ್ಪಿಸಿ ದೂರು ನೀಡಿ ಪ್ರಕರಣ ದಾಖಲಿಸುವ ಕಾರ್ಯವನ್ನು ಬಿಜೆಪಿ ಮಾಡುತ್ತದೆ. ಆದರೆ ಕೇಂದ್ರ ಸರ್ಕಾರ ಮೋಹನ್ ಭಾಗವತ್, ಅಮಿತ್ ಶಾ ಅವರು ಭಾರತದ ಸಂವಿಧಾನ, ಸ್ವಾತಂತ್ರ್ಯ ಹಾಗೂ ಅಂಬೇಡ್ಕರ್ ಅವರ ಬಗ್ಗೆ ಮಾತನಾಡಿದರು ಯಾವುದೇ ಕಾನೂನು ಕ್ರಮ ತೆಗೆದುಕೊಂಡಿಲ್ಲ ಎಂದು ವಾಗ್ದಾಳಿ ನಡೆಸಿದರು.
ಕೇಂದ್ರ ಸರ್ಕಾರಕ್ಕೆ ಸಂವಿಧಾನದ ಮೇಲೆ ಗೌರವವಿದ್ದರೆ ಮೋಹನ್ ಭಾಗವತ್ ಮೇಲೆ ಕ್ರಮ ಕೈಗೊಳ್ಳಲಿ. ಸ್ವಾತಂತ್ರ್ಯ ಚಳುವಳಿಯಲ್ಲಿ ಆರ್ಎಸ್ಎಸ್ ಪಾತ್ರ ಏನು? ತ್ಯಾಗ ಬಲಿದಾನದ ಮೂಲಕ ಬಂದಿರುವ ಸ್ವಾತಂತ್ರ್ಯವನ್ನು ಅಣಕು ಮಾಡಿತ್ತೀರಲ್ಲ ನಿಮಗೆ ಬುದ್ದಿ ಭ್ರಮಣೆ ಆಗಿದೆಯಾ? ಎಂದು ಪ್ರಶ್ನಿಸಿದರು. ಇನ್ನೂ ಆರ್ಎಸ್ಎಸ್ ಹಾಗೂ ಬಿಜೆಪಿಯವರು, ಈ ದೇಶದ ಇತಿಹಾಸ ಮತ್ತು ಸ್ವಾತಂತ್ರ್ಯವನ್ನು ತಿರುಚುವ ಕಾರ್ಯ ಮಾಡುತ್ತಿದೆ. ಇದನ್ನು ಸಾರ್ವಜನಿಕರಿಗೆ ತಿಳಿಸುವ ಕಾರ್ಯವನ್ನು ನಾವು ಮಾಡುತ್ತೇವೆ ಎಂದು ಹೇಳಿದರು.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್ಆರ್ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…