ಮೈಸೂರು: ಶ್ರೀರಾಮ ಮಂದಿರ ನಿರ್ಮಿಸಿದ ಮೇಲೆ ನಮಗೆ ಸ್ವಾತಂತ್ರ್ಯ ಬಂದಿದೆ ಎಂದು ಹೇಳಿಕೆ ನೀಡಿದ್ದ ಮೋಹನ್ ಭಾಗವತ್ ಮೇಲೆ ಕ್ರಮ ಜರುಗಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್. ಉಗ್ರಪ್ಪ ಸವಾಲು ಹಾಕಿದ್ದಾರೆ.
ನಗರದಲ್ಲಿ ಇಂದು(ಜನವರಿ.17) ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್.ಉಗ್ರಪ್ಪ ಹಾಗೂ ಜಿ.ಎನ್.ನಂಜುಡಸ್ವಾಮಿ ಅವರ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಹುಲ್ ಗಾಂಧಿ ಹೇಳಿಕೆ ನೀಡಿದಾಗ ಅವರ ವಿರುದ್ಧ ಅಪಾರ್ಥ ಕಲ್ಪಿಸಿ ದೂರು ನೀಡಿ ಪ್ರಕರಣ ದಾಖಲಿಸುವ ಕಾರ್ಯವನ್ನು ಬಿಜೆಪಿ ಮಾಡುತ್ತದೆ. ಆದರೆ ಕೇಂದ್ರ ಸರ್ಕಾರ ಮೋಹನ್ ಭಾಗವತ್, ಅಮಿತ್ ಶಾ ಅವರು ಭಾರತದ ಸಂವಿಧಾನ, ಸ್ವಾತಂತ್ರ್ಯ ಹಾಗೂ ಅಂಬೇಡ್ಕರ್ ಅವರ ಬಗ್ಗೆ ಮಾತನಾಡಿದರು ಯಾವುದೇ ಕಾನೂನು ಕ್ರಮ ತೆಗೆದುಕೊಂಡಿಲ್ಲ ಎಂದು ವಾಗ್ದಾಳಿ ನಡೆಸಿದರು.
ಕೇಂದ್ರ ಸರ್ಕಾರಕ್ಕೆ ಸಂವಿಧಾನದ ಮೇಲೆ ಗೌರವವಿದ್ದರೆ ಮೋಹನ್ ಭಾಗವತ್ ಮೇಲೆ ಕ್ರಮ ಕೈಗೊಳ್ಳಲಿ. ಸ್ವಾತಂತ್ರ್ಯ ಚಳುವಳಿಯಲ್ಲಿ ಆರ್ಎಸ್ಎಸ್ ಪಾತ್ರ ಏನು? ತ್ಯಾಗ ಬಲಿದಾನದ ಮೂಲಕ ಬಂದಿರುವ ಸ್ವಾತಂತ್ರ್ಯವನ್ನು ಅಣಕು ಮಾಡಿತ್ತೀರಲ್ಲ ನಿಮಗೆ ಬುದ್ದಿ ಭ್ರಮಣೆ ಆಗಿದೆಯಾ? ಎಂದು ಪ್ರಶ್ನಿಸಿದರು. ಇನ್ನೂ ಆರ್ಎಸ್ಎಸ್ ಹಾಗೂ ಬಿಜೆಪಿಯವರು, ಈ ದೇಶದ ಇತಿಹಾಸ ಮತ್ತು ಸ್ವಾತಂತ್ರ್ಯವನ್ನು ತಿರುಚುವ ಕಾರ್ಯ ಮಾಡುತ್ತಿದೆ. ಇದನ್ನು ಸಾರ್ವಜನಿಕರಿಗೆ ತಿಳಿಸುವ ಕಾರ್ಯವನ್ನು ನಾವು ಮಾಡುತ್ತೇವೆ ಎಂದು ಹೇಳಿದರು.
ಜೀಪ್ ವ್ಯವಸ್ಥೆ ಮಾಡುವಂತೆ ತಹಸಿಲ್ದಾರ್ಗೆ ಮನವಿ ಮಾಡಿದ ಬಿಇಒ ಹನೂರು: ಹನೂರು ಶೈಕ್ಷಣಿಕ ವಲಯದ ಪಚ್ಚೆದೊಡ್ಡಿ ಗ್ರಾಮದ ಶಾಲೆಗೆ ಕ್ಷೇತ್ರ…
ಮಂಜು ಕೋಟೆ ಪ್ರತಿನಿತ್ಯ ಅಧಿಕಾರಿಗಳ ಬಳಿ ಅಲೆದಾಡುತ್ತಿರುವ ನೌಕರರು; ಕುಟುಂಬ ನಿರ್ವಹಣೆಗೆ ಪರದಾಟ ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಪೌರಕಾರ್ಮಿಕರು ಮತ್ತು…
ಪುಸ್ತಕ ಪ್ರಿಯರಿಗಾಗಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮೈಸೂರು: ವಿಶ್ವಕೋಶ, ಶಬ್ಧಕೋಶ, ಇಂಗ್ಲಿಷ್-ಕನ್ನಡ ನಿಘಂಟು, ಕನ್ನಡ-ಇಂಗ್ಲಿಷ್ ನಿಘಂಟು, ಕನ್ನಡ ಗ್ರಂಥಮಾಲೆ,…
ಕೆ.ಬಿ.ರಮೇಶನಾಯಕ ಅಕ್ಟೋಬರ್ ತಿಂಗಳ ಅಂತ್ಯಕ್ಕೆ ಶೇ.೮೨.೯೭ರಷ್ಟು ತೆರಿಗೆ ಸಂಗ್ರಹ ಮೈಸೂರು: ಗುತ್ತಿಗೆದಾರರಿಗೆ ಹಣ ಪಾವತಿಸಲಾಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಮೈಸೂರು…
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…