ಮೈಸೂರು ನಗರ

ಸಂವಿಧಾನದ ಮೇಲೆ ಗೌರವವಿದ್ದರೆ ಮೋಹನ್‌ ಭಾಗವತ್‌ ಮೇಲೆ ಕ್ರಮ ಜರುಗಿಸಿ: ವಿ.ಎಸ್‌. ಉಗ್ರಪ್ಪ ಸವಾಲು

ಮೈಸೂರು: ಶ್ರೀರಾಮ ಮಂದಿರ ನಿರ್ಮಿಸಿದ ಮೇಲೆ ನಮಗೆ ಸ್ವಾತಂತ್ರ್ಯ ಬಂದಿದೆ ಎಂದು ಹೇಳಿಕೆ ನೀಡಿದ್ದ ಮೋಹನ್‌ ಭಾಗವತ್‌ ಮೇಲೆ ಕ್ರಮ ಜರುಗಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್‌ ಶಾ ಅವರಿಗೆ ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್.‌ ಉಗ್ರಪ್ಪ ಸವಾಲು ಹಾಕಿದ್ದಾರೆ.

ನಗರದಲ್ಲಿ ಇಂದು(ಜನವರಿ.17) ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್‌.ಉಗ್ರಪ್ಪ ಹಾಗೂ ಜಿ.ಎನ್‌.ನಂಜುಡಸ್ವಾಮಿ ಅವರ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಹುಲ್‌ ಗಾಂಧಿ ಹೇಳಿಕೆ ನೀಡಿದಾಗ ಅವರ ವಿರುದ್ಧ ಅಪಾರ್ಥ ಕಲ್ಪಿಸಿ ದೂರು ನೀಡಿ ಪ್ರಕರಣ ದಾಖಲಿಸುವ ಕಾರ್ಯವನ್ನು ಬಿಜೆಪಿ ಮಾಡುತ್ತದೆ. ಆದರೆ ಕೇಂದ್ರ ಸರ್ಕಾರ ಮೋಹನ್‌ ಭಾಗವತ್‌, ಅಮಿತ್‌ ಶಾ ಅವರು ಭಾರತದ ಸಂವಿಧಾನ, ಸ್ವಾತಂತ್ರ್ಯ ಹಾಗೂ ಅಂಬೇಡ್ಕರ್‌ ಅವರ ಬಗ್ಗೆ ಮಾತನಾಡಿದರು ಯಾವುದೇ ಕಾನೂನು ಕ್ರಮ ತೆಗೆದುಕೊಂಡಿಲ್ಲ ಎಂದು ವಾಗ್ದಾಳಿ ನಡೆಸಿದರು.

ಕೇಂದ್ರ ಸರ್ಕಾರಕ್ಕೆ ಸಂವಿಧಾನದ ಮೇಲೆ ಗೌರವವಿದ್ದರೆ ಮೋಹನ್‌ ಭಾಗವತ್‌ ಮೇಲೆ ಕ್ರಮ ಕೈಗೊಳ್ಳಲಿ. ಸ್ವಾತಂತ್ರ್ಯ ಚಳುವಳಿಯಲ್ಲಿ ಆರ್‌ಎಸ್ಎಸ್ ಪಾತ್ರ ಏನು? ತ್ಯಾಗ ಬಲಿದಾನದ ಮೂಲಕ ಬಂದಿರುವ ಸ್ವಾತಂತ್ರ್ಯವನ್ನು ಅಣಕು ಮಾಡಿತ್ತೀರಲ್ಲ ನಿಮಗೆ ಬುದ್ದಿ ಭ್ರಮಣೆ ಆಗಿದೆಯಾ? ಎಂದು ಪ್ರಶ್ನಿಸಿದರು. ಇನ್ನೂ ಆರ್‌ಎಸ್‌ಎಸ್‌ ಹಾಗೂ ಬಿಜೆಪಿಯವರು, ಈ ದೇಶದ ಇತಿಹಾಸ ಮತ್ತು ಸ್ವಾತಂತ್ರ್ಯವನ್ನು ತಿರುಚುವ ಕಾರ್ಯ ಮಾಡುತ್ತಿದೆ. ಇದನ್ನು ಸಾರ್ವಜನಿಕರಿಗೆ ತಿಳಿಸುವ ಕಾರ್ಯವನ್ನು ನಾವು ಮಾಡುತ್ತೇವೆ ಎಂದು ಹೇಳಿದರು.

 

 

ಅರ್ಚನ ಎಸ್‌ ಎಸ್

Recent Posts

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

3 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

3 hours ago

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

6 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

6 hours ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

6 hours ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

6 hours ago