ಮೈಸೂರು ನಗರ

ಸಿಎಂ ಸಿದ್ದರಾಮಯ್ಯ ಈಗ ಜಳ್ಳಾಗಿದ್ದಾರೆ: ವಾಟಾಳ್‌ ನಾಗರಾಜ್‌

ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಕುರಿತು ವಾಟಾಳ್‌ ನಾಗರಾಜ್‌ ಪ್ರತಿಕ್ರಿಯೆ ನೀಡಿದ್ದು, ಸಿದ್ದರಾಮಯ್ಯ ಈಗ ಜಳ್ಳಾಗಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯ ಸರ್ಕಾರದಲ್ಲಿ ಶಾಸಕರು ಹಾಗೂ ಸಚಿವರ ಕಿತ್ತಾಟ ಜೋರಾಗಿದೆ. ಅವರು ಏನಾದರೂ ಮಾಡಿಕೊಳ್ಳಲಿ. ಸರ್ಕಾರ ಬಂದು ಎರಡುವರೆ ವರ್ಷಗಳಾಗುತ್ತಿದೆ. ಇವರ ಕಿತ್ತಾಟವೇ ಇನ್ನೂ ಮುಗಿದಿಲ್ಲ. ಮಂತ್ರಿಗಳಂತೂ ಅವರ ಇಷ್ಟ ಬಂದ ಹಾಗೆ ಆಡ್ತಾ ಇದ್ದಾರೆ. ಸಿದ್ದರಾಮಯ್ಯ ಮೊದಲ ಸಿದ್ದರಾಮಯ್ಯ ಅಲ್ಲ ಈಗ ಜಳ್ಳಾಗೋಗಿದ್ದಾರೆ. ಬದಲಾವಣೆ ಅನ್ನೋದು ಕ್ರಾಂತಿ ಅಲ್ಲ. ಕಾಂಗ್ರೆಸ್ ಒಂದು ಕಾಲದಲ್ಲಿ ಕ್ರಾಂತಿ ಹೋರಾಟ ಮಾಡಿದಂತ ಪಕ್ಷ. ಸಿದ್ದರಾಮಯ್ಯ ತೆಗೆದು ಆ ಸ್ಥಾನಕ್ಕೆ ಮತ್ತೊಬ್ಬ ವ್ಯಕ್ತಿ ತರಲಿಕ್ಕೆ ಆಗೋದಿಲ್ಲ. ನಾನೇ ಐದು ವರ್ಷ ಸಿಎಂ ಎಂದು ಸಿದ್ದರಾಮಯ್ಯನವರೇ ಹೇಳಿದ್ದಾರೆ. ಅದೇನೋ ಈಗ ಸಿದ್ದರಾಮಯ್ಯವರಿಗೆ ಗಂಡಸ್ತನ ಬಂದಿದೆ. ಮಠಾಧಿಪತಿಗಳು ಯಾಕೆ ರಾಜಕೀಯದಲ್ಲಿ ಮೂಗು ತೂರಿಸುತ್ತಿದ್ದಾರೋ ಗೊತ್ತಿಲ್ಲ. ರಾಜ್ಯದ ಸಮಸ್ಯೆ ಸಾವಿರಾರು ಇವೆ. ಅದನ್ನ ಬಿಟ್ಟು ನೀವು ನೀವೇ ಕಿತ್ತಾಡಿದರೆ ಅದು ನಮ್ಮ ನಾಡಿಗೆ ಅಗೌರವ ಕೊಟ್ಟಂಗೆ ಎಂದು ಕಿಡಿಕಾರಿದರು.

ಇನ್ನು ಚಾಮುಂಡಿ ಬೆಟ್ಟದಲ್ಲಿ ದೇವಿ ದರ್ಶನಕ್ಕೆ 2000 ನಿಗದಿ ಮಾಡಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ ಅವರು, ಬೆಟ್ಟದಲ್ಲಿ ಸಾಮಾನ್ಯರು, ದೊಡ್ಡವರು, ಚಿಕ್ಕವರು ಎಂದು ದರ್ಶನಕ್ಕೆ ತಾರತಮ್ಯ ಮಾಡುವುದು ಸರಿಯಲ್ಲ. ಸರ್ಕಾರಕ್ಕೆ ನಾನು ಮನವಿ ಮಾಡುತ್ತೇನೆ. ನಿಮ್ಮ ದರ್ಬಾರ್ ನಿಲ್ಲಿಸಬೇಕು. ಇಲ್ಲ ಅಂದ್ರೆ ಚಾಮುಂಡಿ ಬೆಟ್ಟದಲ್ಲೇ ದೊಡ್ಡ ಮಟ್ಟದ ಹೋರಾಟ ಮಾಡಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಮೈಸೂರಿನಲ್ಲಿ 300 ಎಕರೆ ಜಮೀನಿನಲ್ಲಿ ಲೇಔಟ್‌ ನಿರ್ಮಾಣ: ಸಚಿವ ಭೈರತಿ ಸುರೇಶ್‌

ಬೆಳಗಾವಿ: ರಾಜಧಾನಿ ಬೆಂಗಳೂರನ್ನು ಹೊರತುಪಡಿಸಿದರೆ ಅತಿವೇಗವಾಗಿ ಬೆಳೆಯುತ್ತಿರುವ ಮೈಸೂರಿನಲ್ಲಿ ಸುಮಾರು 300 ಎಕರೆ ಜಮೀನಿನಲ್ಲಿ ಲೇಔಟ್ ನಿರ್ಮಾಣ ಮಾಡಿ ಸಾರ್ವಜನಿಕರಿಗೆ…

8 mins ago

ಋತುಚಕ್ರ ರಜೆ: ತಡೆಯಾಜ್ಞೆ ಮಾರ್ಪಡಿಸಿ ನಾಳೆಗೆ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರ್ಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿತ್ತು. ಆದರೆ ಈ…

29 mins ago

482 ಎಕರೆ ಅರಣ್ಯ ಭೂಮಿ ಕಬಳಿಕೆ ಯತ್ನ: ಸಿಐಡಿ ತನಿಖೆ ಕೋರಿ ಸಿಎಂಗೆ ಪತ್ರ ಬರೆದ ಈಶ್ವರ್‌ ಖಂಡ್ರೆ

ಬೆಳಗಾವಿ:  532 ಎಕರೆ ಅರಣ್ಯ, ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸಲ್ಲಿಸಿ ನ್ಯಾಯಾಲಯದಿಂದ ಆದೇಶ ಪಡೆದಿರುವ ವ್ಯಕ್ತಿಯ ಹಿಂದಿರುವವರ…

50 mins ago

ಟಾಕ್ಸಿಕ್‌ ಚಿತ್ರದ ಬಗ್ಗೆ ಬಿಗ್‌ ಅಪ್‌ಡೇಟ್‌ ಕೊಟ್ಟ ರಾಕಿಂಗ್‌ ಸ್ಟಾರ್‌ ಯಶ್‌

ರಾಕಿಂಗ್‌ ಸ್ಟಾರ್‌ ಯಶ್‌ ತಮ್ಮ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್‌ನ ಹೊಸ ಪೋಸ್ಟರ್‌ ಅನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಬಗ್ಗೆ…

59 mins ago

ಮೈಸೂರು: ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಜಾಗೃತಿ ರಥಯಾತ್ರೆಗೆ ಚಾಲನೆ

ಮೈಸೂರು: ಡ್ರಗ್ಸ್‌ ಮುಕ್ತ ಕರ್ನಾಟಕ ಅಭಿಯಾನ ಜನಜಾಗೃತಿ ಆಂದೋಲನದ ರಥಯಾತ್ರೆಗೆ ಮೈಸೂರಿನಲ್ಲಿ ಇಂದು ಚಾಲನೆ ದೊರೆಯಿತು. ಮೈಸೂರು ನಗರದ ಜೆ.ಕೆ…

1 hour ago

ರಾಜ್ಯದಲ್ಲಿ ಮತ್ತೆ ಟಿಪ್ಪು ಜಯಂತಿ: ಆಡಳಿತಾರೂಢ ಕಾಂಗ್ರೆಸ್‌ ನಡೆಗೆ ವಿಪಕ್ಷ ಬಿಜೆಪಿ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್‌ ಶಾಸಕ ಕಾಶಪ್ಪನವರ್‌…

3 hours ago