ಮೈಸೂರು ನಗರ

ಕರ್ನಾಟಕದಿಂದ ಕಮಲ್‌ ಹಾಸನ್‌ ಬಹಿಷ್ಕರಿಸಬೇಕು: ವಾಟಾಳ್‌ ನಾಗರಾಜ್‌ ಆಗ್ರಹ

ಮೈಸೂರು: ಕನ್ನಡದ ಬಗ್ಗೆ ವಿವಾದಿತ ಹೇಳಿಕೆ ನೀಡಿದ್ದ ನಟ ಕಮಲ್‌ ಹಾಸನ್‌ನನ್ನು ಕರ್ನಾಟಕದಿಂದ ಬಹಿಷ್ಕರಿಸಬೇಕು ಎಂದು ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಆಗ್ರಹಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ನಟ ಕಮಲ್‌ ಹಾಸನ್‌ ವಿಚಾರದಲ್ಲಿ ಕನ್ನಡ ಚಿತ್ರರಂಗ ಗಂಭೀರ ಚಿಂತನೆ ಮಾಡಬೇಕಿದೆ. ಕಮಲ್ ಹಾಸನ್ ಚಿತ್ರ ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಬಿಡುಗಡೆಯಾಗಬಾರದು. ರಾಜ್ಯದ ಜನರು ಕ್ಷಮೆ ಕೇಳಬೇಕೆಂದು ಅಗ್ರಹಿಸುತ್ತಿದ್ದಾರೆ. ಕಮಲ್ ಹಾಸನ್‌ ವಿರುದ್ಧ ಸಿಎಂ‌ ಸಿದ್ದರಾಮಯ್ಯ ಮೊಕದ್ದಮೆ ಹಾಕಬೇಕು. ಕರ್ನಾಟಕ ಹೈಕೋರ್ಟ್‌ಗೆ ಕರೆದುಕೊಂಡು ಬಂದು ರಾಜ್ಯದ ಜೈಲಿನಲ್ಲಿ ಹಾಕಬೇಕು. ಈ ವಿಚಾರದಲ್ಲಿ ರಾಜಕಾರಣಿಗಳು, ನಟರು ಬೀದಿಗೆ ಬರಬೇಕು. ಒಂದು ವೇಳೆ ಕಮಲ್ ಸಿನಿಮಾ ಬಿಡುಗಡೆಯಾದರೆ ರಾಜ್ಯದಲ್ಲಿ ತೀವ್ರ ಹೋರಾಟ ಮಾಡಬೇಕಾಗುತ್ತದೆ. ಎಲ್ಲಾ ಕನ್ನಡಪರ ಸಂಘಟನೆಗಳು ಸೇರಿ ಕರ್ನಾಟಕ ಬಂದ್ ಮಾಡುತ್ತೇವೆ. ತಮಿಳುನಾಡಿನ ಎಲ್ಲಾ ರಾಜಕೀಯ ಪಕ್ಷಗಳು ಇದನ್ನು ಖಂಡಿಸಬೇಕು. ಸಾಹಿತಿಗಳು, ಬರಹಗಾರರು ಈಗ ಕನ್ನಡದ ಪರ ನಿಲ್ಲಬೇಕು. ಕೇವಲ ಶಿವರಾಜ್ ಕುಮಾರ್ ಮಾತ್ರವಲ್ಲ, ಎಲ್ಲಾ ನಟರು ಕನ್ನಡದ ಪರ ನಿಲ್ಲಬೇಕು ಎಂದು ಆಗ್ರಹಿಸಿದರು.

ಆಂದೋಲನ ಡೆಸ್ಕ್

Recent Posts

ಭಾರತ-ಯುರೋಪ್‌ ಒಕ್ಕೂಟ ವ್ಯಾಪಾರ ಒಪ್ಪಂದಕ್ಕೆ ಸಹಿ

ನವದೆಹಲಿ: ಮದರ್‌ ಆಫ್‌ ಆಲ್‌ ಡೀಲ್ಸ್‌ ಎಂದೇ ಕರೆಯಲ್ಪಡುವ ಭಾರತ-ಯುರೋಪ್‌ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…

3 hours ago

ಶಿಡ್ಲಘಟ್ಟ ಕೇಸ್‌ನಲ್ಲಿ ಕಾನೂನಿನಂತೆ ಕ್ರಮ: ಸಚಿವ ಭೈರತಿ ಸುರೇಶ್‌

ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…

3 hours ago

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರ ಸಾವು

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…

3 hours ago

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…

3 hours ago

ಗುಂಡ್ಲುಪೇಟೆ: ಬೊಮ್ಮಲಾಪುರದಲ್ಲಿ ವಾಸದ ಮನೆಗೆ ನುಗ್ಗಿದ ಕಡವೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…

4 hours ago

ಶಿಕ್ಷಣದಿಂದ ಮಾತ್ರ ಮುಖ್ಯವಾಹಿನಿಗೆ ಬರಲು ಸಾಧ್ಯ: ಡಾ.ಕುಮಾರ

ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…

4 hours ago