ಮೈಸೂರು ನಗರ

ಕರ್ನಾಟಕದಿಂದ ಕಮಲ್‌ ಹಾಸನ್‌ ಬಹಿಷ್ಕರಿಸಬೇಕು: ವಾಟಾಳ್‌ ನಾಗರಾಜ್‌ ಆಗ್ರಹ

ಮೈಸೂರು: ಕನ್ನಡದ ಬಗ್ಗೆ ವಿವಾದಿತ ಹೇಳಿಕೆ ನೀಡಿದ್ದ ನಟ ಕಮಲ್‌ ಹಾಸನ್‌ನನ್ನು ಕರ್ನಾಟಕದಿಂದ ಬಹಿಷ್ಕರಿಸಬೇಕು ಎಂದು ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಆಗ್ರಹಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ನಟ ಕಮಲ್‌ ಹಾಸನ್‌ ವಿಚಾರದಲ್ಲಿ ಕನ್ನಡ ಚಿತ್ರರಂಗ ಗಂಭೀರ ಚಿಂತನೆ ಮಾಡಬೇಕಿದೆ. ಕಮಲ್ ಹಾಸನ್ ಚಿತ್ರ ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಬಿಡುಗಡೆಯಾಗಬಾರದು. ರಾಜ್ಯದ ಜನರು ಕ್ಷಮೆ ಕೇಳಬೇಕೆಂದು ಅಗ್ರಹಿಸುತ್ತಿದ್ದಾರೆ. ಕಮಲ್ ಹಾಸನ್‌ ವಿರುದ್ಧ ಸಿಎಂ‌ ಸಿದ್ದರಾಮಯ್ಯ ಮೊಕದ್ದಮೆ ಹಾಕಬೇಕು. ಕರ್ನಾಟಕ ಹೈಕೋರ್ಟ್‌ಗೆ ಕರೆದುಕೊಂಡು ಬಂದು ರಾಜ್ಯದ ಜೈಲಿನಲ್ಲಿ ಹಾಕಬೇಕು. ಈ ವಿಚಾರದಲ್ಲಿ ರಾಜಕಾರಣಿಗಳು, ನಟರು ಬೀದಿಗೆ ಬರಬೇಕು. ಒಂದು ವೇಳೆ ಕಮಲ್ ಸಿನಿಮಾ ಬಿಡುಗಡೆಯಾದರೆ ರಾಜ್ಯದಲ್ಲಿ ತೀವ್ರ ಹೋರಾಟ ಮಾಡಬೇಕಾಗುತ್ತದೆ. ಎಲ್ಲಾ ಕನ್ನಡಪರ ಸಂಘಟನೆಗಳು ಸೇರಿ ಕರ್ನಾಟಕ ಬಂದ್ ಮಾಡುತ್ತೇವೆ. ತಮಿಳುನಾಡಿನ ಎಲ್ಲಾ ರಾಜಕೀಯ ಪಕ್ಷಗಳು ಇದನ್ನು ಖಂಡಿಸಬೇಕು. ಸಾಹಿತಿಗಳು, ಬರಹಗಾರರು ಈಗ ಕನ್ನಡದ ಪರ ನಿಲ್ಲಬೇಕು. ಕೇವಲ ಶಿವರಾಜ್ ಕುಮಾರ್ ಮಾತ್ರವಲ್ಲ, ಎಲ್ಲಾ ನಟರು ಕನ್ನಡದ ಪರ ನಿಲ್ಲಬೇಕು ಎಂದು ಆಗ್ರಹಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

20 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

20 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

20 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

20 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

20 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

23 hours ago