ಮೈಸೂರು ನಗರ

ಕರ್ನಾಟಕದಿಂದ ಕಮಲ್‌ ಹಾಸನ್‌ ಬಹಿಷ್ಕರಿಸಬೇಕು: ವಾಟಾಳ್‌ ನಾಗರಾಜ್‌ ಆಗ್ರಹ

ಮೈಸೂರು: ಕನ್ನಡದ ಬಗ್ಗೆ ವಿವಾದಿತ ಹೇಳಿಕೆ ನೀಡಿದ್ದ ನಟ ಕಮಲ್‌ ಹಾಸನ್‌ನನ್ನು ಕರ್ನಾಟಕದಿಂದ ಬಹಿಷ್ಕರಿಸಬೇಕು ಎಂದು ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಆಗ್ರಹಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ನಟ ಕಮಲ್‌ ಹಾಸನ್‌ ವಿಚಾರದಲ್ಲಿ ಕನ್ನಡ ಚಿತ್ರರಂಗ ಗಂಭೀರ ಚಿಂತನೆ ಮಾಡಬೇಕಿದೆ. ಕಮಲ್ ಹಾಸನ್ ಚಿತ್ರ ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಬಿಡುಗಡೆಯಾಗಬಾರದು. ರಾಜ್ಯದ ಜನರು ಕ್ಷಮೆ ಕೇಳಬೇಕೆಂದು ಅಗ್ರಹಿಸುತ್ತಿದ್ದಾರೆ. ಕಮಲ್ ಹಾಸನ್‌ ವಿರುದ್ಧ ಸಿಎಂ‌ ಸಿದ್ದರಾಮಯ್ಯ ಮೊಕದ್ದಮೆ ಹಾಕಬೇಕು. ಕರ್ನಾಟಕ ಹೈಕೋರ್ಟ್‌ಗೆ ಕರೆದುಕೊಂಡು ಬಂದು ರಾಜ್ಯದ ಜೈಲಿನಲ್ಲಿ ಹಾಕಬೇಕು. ಈ ವಿಚಾರದಲ್ಲಿ ರಾಜಕಾರಣಿಗಳು, ನಟರು ಬೀದಿಗೆ ಬರಬೇಕು. ಒಂದು ವೇಳೆ ಕಮಲ್ ಸಿನಿಮಾ ಬಿಡುಗಡೆಯಾದರೆ ರಾಜ್ಯದಲ್ಲಿ ತೀವ್ರ ಹೋರಾಟ ಮಾಡಬೇಕಾಗುತ್ತದೆ. ಎಲ್ಲಾ ಕನ್ನಡಪರ ಸಂಘಟನೆಗಳು ಸೇರಿ ಕರ್ನಾಟಕ ಬಂದ್ ಮಾಡುತ್ತೇವೆ. ತಮಿಳುನಾಡಿನ ಎಲ್ಲಾ ರಾಜಕೀಯ ಪಕ್ಷಗಳು ಇದನ್ನು ಖಂಡಿಸಬೇಕು. ಸಾಹಿತಿಗಳು, ಬರಹಗಾರರು ಈಗ ಕನ್ನಡದ ಪರ ನಿಲ್ಲಬೇಕು. ಕೇವಲ ಶಿವರಾಜ್ ಕುಮಾರ್ ಮಾತ್ರವಲ್ಲ, ಎಲ್ಲಾ ನಟರು ಕನ್ನಡದ ಪರ ನಿಲ್ಲಬೇಕು ಎಂದು ಆಗ್ರಹಿಸಿದರು.

ಆಂದೋಲನ ಡೆಸ್ಕ್

Recent Posts

ಬಯಲುಸೀಮೆಗೆ ಭದ್ರಾ ಜೀವಜಲ : ನವೆಂಬರ್ ಅಂತ್ಯಕ್ಕೆ ಎಲ್ಲ ಕೆರೆಗಳಿಗೂ ನೀರು ; ಸಚಿವ ಚಲುವರಾಯಸ್ವಾಮಿ ಭರವಸೆ*

ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…

5 hours ago

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

13 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

13 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

13 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

13 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

13 hours ago