Mysore
24
overcast clouds

Social Media

ಗುರುವಾರ, 27 ಆಗಸ್ಟ್ 2026
Light
Dark

ವಾಹನ ದಟ್ಟನೆ : ಸುಗಮ ಸಂಚಾರಕ್ಕೆ ರೈಲ್ವೆ ಅಂಡರ್‌ ಬ್ರಿಡ್ಜ್‌ ವಿಸ್ತರಿಸಲು ಮನವಿ

prathap simha

ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯಸಚಿವ ವಿ.ಸೋಮಣ್ಣ ಅವರಿಗೆ ಮಾಜಿ ಸಂಸದ ಪ್ರತಾಪ್ ಸಿಂಹ ಮನವಿ ಸಲ್ಲಿಸಿದರು.

ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕರ ಕಚೇರಿ ಸಭಾಂಗಣದಲ್ಲಿ ಕೇಂದ್ರ ಸಚಿವರುಗಳಾದ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿ.ಸೋಮಣ್ಣ ಜಂಟಿ ಸುದ್ದಿಗೋಷ್ಠಿ ನಡೆಸಿದ ಸಂದರ್ಭದಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಮ್ಮುಖದಲ್ಲಿ ಮನವಿ ಸಲ್ಲಿಸಿದ ಪ್ರತಾಪ್ ಸಿಂಹ, ಆದ್ಯತೆಯಾಗಿ ಪರಿಗಣಿಸುವಂತೆ ಕೋರಿದರು.

ನಗರದ ಕೆ.ಜಿ.ಕೊಪ್ಪಲಿನ ರೈಲ್ವೆ ಅಂಡರ್ ಬ್ರಿಡ್ಜ್ ಕಿರಿದಾಗಿರುವುದರಿಂದ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದ್ದು, ಕೂಡಲೇ ರೈಲ್ವೆ ಅಂಡರ್ ಬ್ರಿಡ್ಜ್ ಅನ್ನು ವಿಸ್ತರಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಅಶೋಕಪುರಂ ರೈಲ್ವೆ ನಿಲ್ದಾಣವನ್ನು ಅಮೃತ ಭಾರತ ರೈಲ್ವೆ ನಿಲ್ದಾಣ ಯೋಜನೆಯಡಿ ಅಭಿವೃದ್ಧಿಪಡಿಸಬೇಕು ಹಾಗೂ ಯಶವಂತಪುರ-ಬಾರ್ಮೆರ್ ಸಾಪ್ತಾಹಿಕ ರೈಲು(ರೈಲು ಸಂಖ್ಯೆ ೧೪೮೦೫/೦೬) ಸಂಚಾರವನ್ನು ಮೈಸೂರಿನವರೆಗೆ ವಿಸ್ತರಿಸಲು ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಶಾಸಕ ಜಿ.ಡಿ.ಹರೀಶ್ ಗೌಡ, ವಿಧಾನಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ನಗರ ಬಿಜೆಪಿ ಅಧ್ಯಕ್ಷ ಎಲ್.ನಾಗೇಂದ್ರ, ಮಾಜಿ ಸಂಸದ ಸಿ.ಎಸ್. ಪುಟ್ಟರಾಜು ಹಾಜರಿದ್ದರು.

 

Tags:
error: Content is protected !!