prathap simha
ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯಸಚಿವ ವಿ.ಸೋಮಣ್ಣ ಅವರಿಗೆ ಮಾಜಿ ಸಂಸದ ಪ್ರತಾಪ್ ಸಿಂಹ ಮನವಿ ಸಲ್ಲಿಸಿದರು.
ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕರ ಕಚೇರಿ ಸಭಾಂಗಣದಲ್ಲಿ ಕೇಂದ್ರ ಸಚಿವರುಗಳಾದ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿ.ಸೋಮಣ್ಣ ಜಂಟಿ ಸುದ್ದಿಗೋಷ್ಠಿ ನಡೆಸಿದ ಸಂದರ್ಭದಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಮ್ಮುಖದಲ್ಲಿ ಮನವಿ ಸಲ್ಲಿಸಿದ ಪ್ರತಾಪ್ ಸಿಂಹ, ಆದ್ಯತೆಯಾಗಿ ಪರಿಗಣಿಸುವಂತೆ ಕೋರಿದರು.
ನಗರದ ಕೆ.ಜಿ.ಕೊಪ್ಪಲಿನ ರೈಲ್ವೆ ಅಂಡರ್ ಬ್ರಿಡ್ಜ್ ಕಿರಿದಾಗಿರುವುದರಿಂದ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದ್ದು, ಕೂಡಲೇ ರೈಲ್ವೆ ಅಂಡರ್ ಬ್ರಿಡ್ಜ್ ಅನ್ನು ವಿಸ್ತರಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಅಶೋಕಪುರಂ ರೈಲ್ವೆ ನಿಲ್ದಾಣವನ್ನು ಅಮೃತ ಭಾರತ ರೈಲ್ವೆ ನಿಲ್ದಾಣ ಯೋಜನೆಯಡಿ ಅಭಿವೃದ್ಧಿಪಡಿಸಬೇಕು ಹಾಗೂ ಯಶವಂತಪುರ-ಬಾರ್ಮೆರ್ ಸಾಪ್ತಾಹಿಕ ರೈಲು(ರೈಲು ಸಂಖ್ಯೆ ೧೪೮೦೫/೦೬) ಸಂಚಾರವನ್ನು ಮೈಸೂರಿನವರೆಗೆ ವಿಸ್ತರಿಸಲು ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಶಾಸಕ ಜಿ.ಡಿ.ಹರೀಶ್ ಗೌಡ, ವಿಧಾನಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ನಗರ ಬಿಜೆಪಿ ಅಧ್ಯಕ್ಷ ಎಲ್.ನಾಗೇಂದ್ರ, ಮಾಜಿ ಸಂಸದ ಸಿ.ಎಸ್. ಪುಟ್ಟರಾಜು ಹಾಜರಿದ್ದರು.
ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…
ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…
ಸಿ.ಎಂ.ನರಸಿಂಹಮೂರ್ತಿ ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…
ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…
ನವೀನ್ ಡಿಸೋಜ ಕೊಡಗಿನಲ್ಲಿ ಮಳೆಗಾಲದಲ್ಲಿ ಎದುರಾಗುವ ವಿದ್ಯುತ್ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಬೇಕಿದೆ ಬಹುದೊಡ್ಡ ಮೊತ್ತ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕರ್ನಾಟಕ-ಕೇರಳ ಗಡಿಭಾಗದಲ್ಲಿರುವ ಬಂಡೀಪುರ ಸಮೀಪದ ಮೂಲೆಹೊಳೆ ಚೆಕ್ಪೋಸ್ಟ್ನಲ್ಲಿ ಸರಕು ಸಾಗಣೆ ವಾಹನಗಳಿಂದ ಅಕ್ರಮವಾಗಿ ಹಣ ವಸೂಲಿ…