ಮೈಸೂರು ನಗರ

ವಿಜಯೇಂದ್ರ ಭ್ರಷ್ಟಾಚಾರದ ಪಿತಾಮಹ ಎಂದ ಕೆ.ಎಸ್.ಶಿವರಾಂ

ಮೈಸೂರು: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ ಎಂದು ಪ್ರತಿಭಟನೆ ನಡೆಸುತ್ತಿರುವುದು ಖಂಡನಾರ್ಹ ಎಂದು ಕಾಂಗ್ರೆಸ್‌ ಅಹಿಂದ ಮುಖಂಡ ಕೆ.ಎಸ್‌.ಶಿವರಾಂ ಕಿಡಿಕಾರಿದ್ದಾರೆ.

ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಈ ಹಿಂದೆ ಮೈಸೂರಿನಲ್ಲಿ ಕೆಡಿಪಿ ಸಭೆಯನ್ನು ಮುಂದೂಡಲಾಗಿತ್ತು. ಹಾಗಾಗಿ ಇಂದು ಸಿಎಂ ಸಿದ್ದರಾಮಯ್ಯ ಅವರು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಬೇಕಾಗಿದೆ. ಈ ನಡುವೆ ರಾಜಕೀಯ ಕೆಸರೆರೆಚಾಟದಿಂದ ಬಿಜೆಪಿಯವರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕೆಡಿಪಿ ಸಭೆಗೆ ಅಡ್ಡಿ ಪಡಿಸಲು ಯತ್ನಿಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಕೆಡಿಪಿ ಸಭೆಯನ್ನು ಮಾಡುತ್ತಿರುವುದು ಜಿಲ್ಲೆಯನ್ನು ಅಭಿವೃದ್ಧಿ ಪಡಿಸಿ, ಅಭಿವೃದ್ಧಿ ಕಾರ್ಯ ಯೋಜನೆಗಳನ್ನು ಜಾರಿಗೆ ತರಲು. ಆದರೆ ಬಿಜೆಪಿಯವರು ಸಭೆ ನಡೆಯದಂತೆ ಮಾಡಿ ನೀತಿಗೆಟ್ಟ ರಾಜಕಾರಣ ಮಾಡುತ್ತಿದ್ದಾರೆ. ಬಿಜೆಪಿ ಪಕ್ಷದಲ್ಲೇ ಸ್ವತಃ ಭ್ರಷ್ಟಾಚಾರದ ಪಿತಾಮಹಾರನ್ನು ಇಟ್ಟುಕೊಂಡಿದ್ದಾರೆ. ರಾಜಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೇ ಭ್ರಷ್ಟಾಚಾರಿಗಳಾಗಿದ್ದಾರೆ. ಅವರೇ ಬೇನಾಮಿ ಆಸ್ತಿಗಳನ್ನು ಮಾಡಿಕೊಂಡಿದ್ದಾರೆ. ಇದಕ್ಕೆ ಮೈಸೂರಿನಲ್ಲಿ ಬೆಂಬಲ ನೀಡಿದವರು ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಮಹದೇವ್‌ ಸ್ವಾಮಿ. ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ನಂದೀಶ್‌ ಹಂಚ್ಯಾ. ಈ ಇಬ್ಬರ ಹೆಸರಿನಲ್ಲಿಯೇ ಬೇನಾಮಿ ಆಸ್ತಿಗಳನ್ನು ಮಾಡಿದ್ದಾರೆ ಎಂದು ಈ ಹಿಂದೆ ಮಾಡಿದ್ದ ಪತ್ರಿಕಾಗೋಷ್ಠಿಗಳಲ್ಲಿ ನಿರೂಪಿದ್ದೇನೆ ಎಂದು ಹೇಳಿದರು.

ಒಬ್ಬ ನೀತಿಗೆಟ್ಟ ಭ್ರಷ್ಠಾಚಾರ ಪಿತಾಮಹರಾದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಅವರ ಪಕ್ಷದವರಿಗೆ ಯಾರಿಗಾದರೂ ಸಿಎಂ ಸಿದ್ದರಾಮಯ್ಯ ಅವರನ್ನು ರಾಜೀನಾಮೆ ನೀಡಬೇಕು ಎಂದು ಕೇಳುವ ಯಾವ ನೈತಿಕತೆ ಇಲ್ಲ. ರಾಜಕಾರಣದಲ್ಲಿ ಸಿದ್ದರಾಮಯ್ಯ ಅವರನ್ನು ನೇರವಾಗಿ ಟಾರ್ಗೆಟ್‌ ಮಾಡಲಾಗುತ್ತಿದೆ. ಏಕೆಂದರೆ ಸಿಎಂ ರಾಜ್ಯದಲ್ಲಿ ಜಾತಿ ಗಣತಿಯನ್ನು ಸ್ವೀಕಾರ ಮಾಡಿ, ಪಂಚ ಗ್ಯಾರಂಟಿಗಳನ್ನು ಜಾರಿಗೆ ತಂದು 2ನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದಾರೆ. ಹೀಗಾಗಿ ಇದನ್ನು ಅಂತ್ಯಗೊಳಿಸಲು ಬಿಜೆಪಿ ಹಾಗೂ ಜಾ.ದಳ ಪಕ್ಷಗಳು ಹುನ್ನಾರ ಮಾಡಿ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸುವ ಹುನ್ನಾರ ಮಾಡಿದ್ದಾರೆ ಎಂದು ಆರೋಪಿಸಿದರು.

 

 

ಆಂದೋಲನ ಡೆಸ್ಕ್

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

4 mins ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

4 hours ago