ಮೈಸೂರು: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ ಎಂದು ಪ್ರತಿಭಟನೆ ನಡೆಸುತ್ತಿರುವುದು ಖಂಡನಾರ್ಹ ಎಂದು ಕಾಂಗ್ರೆಸ್ ಅಹಿಂದ ಮುಖಂಡ ಕೆ.ಎಸ್.ಶಿವರಾಂ ಕಿಡಿಕಾರಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಈ ಹಿಂದೆ ಮೈಸೂರಿನಲ್ಲಿ ಕೆಡಿಪಿ ಸಭೆಯನ್ನು ಮುಂದೂಡಲಾಗಿತ್ತು. ಹಾಗಾಗಿ ಇಂದು ಸಿಎಂ ಸಿದ್ದರಾಮಯ್ಯ ಅವರು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಬೇಕಾಗಿದೆ. ಈ ನಡುವೆ ರಾಜಕೀಯ ಕೆಸರೆರೆಚಾಟದಿಂದ ಬಿಜೆಪಿಯವರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕೆಡಿಪಿ ಸಭೆಗೆ ಅಡ್ಡಿ ಪಡಿಸಲು ಯತ್ನಿಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
ಕೆಡಿಪಿ ಸಭೆಯನ್ನು ಮಾಡುತ್ತಿರುವುದು ಜಿಲ್ಲೆಯನ್ನು ಅಭಿವೃದ್ಧಿ ಪಡಿಸಿ, ಅಭಿವೃದ್ಧಿ ಕಾರ್ಯ ಯೋಜನೆಗಳನ್ನು ಜಾರಿಗೆ ತರಲು. ಆದರೆ ಬಿಜೆಪಿಯವರು ಸಭೆ ನಡೆಯದಂತೆ ಮಾಡಿ ನೀತಿಗೆಟ್ಟ ರಾಜಕಾರಣ ಮಾಡುತ್ತಿದ್ದಾರೆ. ಬಿಜೆಪಿ ಪಕ್ಷದಲ್ಲೇ ಸ್ವತಃ ಭ್ರಷ್ಟಾಚಾರದ ಪಿತಾಮಹಾರನ್ನು ಇಟ್ಟುಕೊಂಡಿದ್ದಾರೆ. ರಾಜಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೇ ಭ್ರಷ್ಟಾಚಾರಿಗಳಾಗಿದ್ದಾರೆ. ಅವರೇ ಬೇನಾಮಿ ಆಸ್ತಿಗಳನ್ನು ಮಾಡಿಕೊಂಡಿದ್ದಾರೆ. ಇದಕ್ಕೆ ಮೈಸೂರಿನಲ್ಲಿ ಬೆಂಬಲ ನೀಡಿದವರು ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಮಹದೇವ್ ಸ್ವಾಮಿ. ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ನಂದೀಶ್ ಹಂಚ್ಯಾ. ಈ ಇಬ್ಬರ ಹೆಸರಿನಲ್ಲಿಯೇ ಬೇನಾಮಿ ಆಸ್ತಿಗಳನ್ನು ಮಾಡಿದ್ದಾರೆ ಎಂದು ಈ ಹಿಂದೆ ಮಾಡಿದ್ದ ಪತ್ರಿಕಾಗೋಷ್ಠಿಗಳಲ್ಲಿ ನಿರೂಪಿದ್ದೇನೆ ಎಂದು ಹೇಳಿದರು.
ಒಬ್ಬ ನೀತಿಗೆಟ್ಟ ಭ್ರಷ್ಠಾಚಾರ ಪಿತಾಮಹರಾದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಅವರ ಪಕ್ಷದವರಿಗೆ ಯಾರಿಗಾದರೂ ಸಿಎಂ ಸಿದ್ದರಾಮಯ್ಯ ಅವರನ್ನು ರಾಜೀನಾಮೆ ನೀಡಬೇಕು ಎಂದು ಕೇಳುವ ಯಾವ ನೈತಿಕತೆ ಇಲ್ಲ. ರಾಜಕಾರಣದಲ್ಲಿ ಸಿದ್ದರಾಮಯ್ಯ ಅವರನ್ನು ನೇರವಾಗಿ ಟಾರ್ಗೆಟ್ ಮಾಡಲಾಗುತ್ತಿದೆ. ಏಕೆಂದರೆ ಸಿಎಂ ರಾಜ್ಯದಲ್ಲಿ ಜಾತಿ ಗಣತಿಯನ್ನು ಸ್ವೀಕಾರ ಮಾಡಿ, ಪಂಚ ಗ್ಯಾರಂಟಿಗಳನ್ನು ಜಾರಿಗೆ ತಂದು 2ನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದಾರೆ. ಹೀಗಾಗಿ ಇದನ್ನು ಅಂತ್ಯಗೊಳಿಸಲು ಬಿಜೆಪಿ ಹಾಗೂ ಜಾ.ದಳ ಪಕ್ಷಗಳು ಹುನ್ನಾರ ಮಾಡಿ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸುವ ಹುನ್ನಾರ ಮಾಡಿದ್ದಾರೆ ಎಂದು ಆರೋಪಿಸಿದರು.
ಮುಂಬೈ : ನೀಟ್ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…