ಮೈಸೂರು: ನಗರದ ಒಂಟಿಕೊಪ್ಪಲಿನಲ್ಲಿ ಊರ ಹಬ್ಬ ಹಾಗೂ ಮಾರಮ್ಮ ಜಾತ್ರೆ ಇಂದು ಅತ್ಯಂತ ವಿಜೃಂಭಣೆಯಿಂದ ನಡೆಯಿತು.
ಹಬ್ಬದ ಅಂಗವಾಗಿ ಗ್ರಾಮದೇವತೆ ಶ್ರೀ ಮಾರಮ್ಮ ದೇವಸ್ಥಾನವನ್ನು ತಳಿರು-ತೋರಣ, ಹೂ ಹಾಗೂ ರಂಗೋಲಿಗಳಿಂದ ಅಲಂಕರಿಸಲಾಗಿತ್ತು. ಇಂದು ಮುಂಜಾನೆಯೇ ಮಾರಮ್ಮನಿಗೆ ಪುಣ್ಯಾಹಃ ಹಾಗೂ ವಿವಿಧ ಪೂಜಾ ಕಾರ್ಯಗಳು ನಡೆದವು. ಆಂಜನೇಯ ಸ್ವಾಮಿಗೆ ಸಂಜೆ ಬೆಲ್ಲದ ಆರತಿ, ತಂಬಿಟ್ಟಿನ ಪೂಜೆಯನ್ನು ಸಲ್ಲಿಸಲಾಯಿತು.
ಮಹಿಳೆಯರು ಹೊಂಬಾಳೆ, ಕನಕಾಂಬರ, ಮಲ್ಲಿಗೆ, ಗುಲಾಬಿ ಹೂಗಳಿಂದ ಸಿಂಗಾರ ಮಾಡಿದ ಆರತಿ, ತಂಬಿಟ್ಟು ಹೊತ್ತು ಸಾಗಿದರು. ಹರಕೆ ಹೊತ್ತವರು ದೇವಾಲಯದ ಮುಂಭಾಗ ಕೊಂಡ ಹಾಯ್ದು ದೇವಿಗೆ ಆರತಿ ಬೆಳಗಿದರು. ಜಾತ್ರಾ ಮಹೋತ್ಸವದ ಅಂಗವಾಗಿ ಗ್ರಾಮದ ಮನೆಗಳ ಮುಂದೆ ವಿದ್ಯುತ್ ದೀಪಾ ಲಂಕಾರ ಮಾಡಲಾಗಿತ್ತು. ನೆಂಟರಿಷ್ಟರು ಸಹ ಹಬ್ಬದಲ್ಲಿ ಪಾಲ್ಗೊಂಡಿದ್ದರು.
ಮೆರವಣಿಗೆ ತೆರಳುವ ರಸ್ತೆಗಳನ್ನು ತಳಿರು-ತೋರಣ, ವಿದ್ಯುತ್ ದೀಪಾಲಂಕಾರಗಳಿಂದ ಸಿಂಗರಿಸಲಾಗಿತ್ತು. ಮಂಗಳ ವಾದ್ಯ, ತಮಟೆ, ನಗಾರಿ ಮತ್ತಿತರ ಕುಣಿತಗಳು ಗ್ರಾಮಸ್ಥರನ್ನು ಆಕರ್ಷಿಸಿದವು. ಯುವಕರು, ಪುಟಾಣಿಗಳ ನರ್ತನ, ಖುಷಿಯ ಹೊನಲು, ಊರ ಹಬ್ಬ ಹಾಗೂ ಮಾರಮ್ಮ ಜಾತ್ರೆಯ ಸಂಭ್ರಮವನ್ನು ಹೆಚ್ಚಿಸಿತು. ಈ ಊರ ಹಬ್ಬವನ್ನು ಎಲ್ಲಾ ಸಮುದಾಯದವರು ಒಟ್ಟಾಗಿ ಸೇರಿ ಆಚರಿಸಿದ್ದು ವಿಶೇಷವಾಗಿತ್ತು.
ಚಿತ್ರದುರ್ಗ: ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಲೇಔಟ್ ನಿರ್ಮಾಣ ಮಾಡುವ ವೇಳೆ ರೇಣುಕಾಸ್ವಾಮಿ…
ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣ ಮಾಡಿದರೆ 3 ವರ್ಷ ಜೈಲು ಶಿಕ್ಷೆ ಫಿಕ್ಸ್ ಆಗಿದೆ. ವಿಧಾನಸಭೆಯಲ್ಲಿ ಇಂದು ಮಸೂದೆ ಮಂಡನೆ…
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಚಿನ್ನಯ್ಯ ಆರೋಪಿಸಿದ್ದ ಹಿನ್ನೆಲೆಯಲ್ಲಿ ಎಸ್ಐಟಿ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ. ಹಣದ…
ಬೆಳಗಾವಿ: ಗ್ಯಾರಂಟಿಗಳ ಬಗ್ಗೆ ಸಿಎಲ್ಪಿಯಲ್ಲಿ ಚರ್ಚೆಯೇ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಶಾಸಕರು…
ಬೆಳಗಾವಿ: ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ…
ಬೆಳಗಾವಿ: ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾರೂ ಕೂಡ ಗ್ಯಾರಂಟಿ ಯೋಜನೆಗಳನ್ನು ವಿರೋಧ ಮಾಡಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.…