ಮೈಸೂರು ನಗರ

ಮೈಸೂರು: ಒಂಟಿಕೊಪ್ಪಲಿನಲ್ಲಿ ವಿಜೃಂಭಣೆಯಿಂದ ನಡೆದ ಊರ ಹಬ್ಬ

ಮೈಸೂರು: ನಗರದ ಒಂಟಿಕೊಪ್ಪಲಿನಲ್ಲಿ ಊರ ಹಬ್ಬ ಹಾಗೂ ಮಾರಮ್ಮ ಜಾತ್ರೆ ಇಂದು ಅತ್ಯಂತ ವಿಜೃಂಭಣೆಯಿಂದ ನಡೆಯಿತು.

ಹಬ್ಬದ ಅಂಗವಾಗಿ ಗ್ರಾಮದೇವತೆ ಶ್ರೀ ಮಾರಮ್ಮ ದೇವಸ್ಥಾನವನ್ನು ತಳಿರು-ತೋರಣ, ಹೂ ಹಾಗೂ ರಂಗೋಲಿಗಳಿಂದ ಅಲಂಕರಿಸಲಾಗಿತ್ತು. ಇಂದು ಮುಂಜಾನೆಯೇ ಮಾರಮ್ಮನಿಗೆ ಪುಣ್ಯಾಹಃ ಹಾಗೂ ವಿವಿಧ ಪೂಜಾ ಕಾರ್ಯಗಳು ನಡೆದವು. ಆಂಜನೇಯ ಸ್ವಾಮಿಗೆ ಸಂಜೆ ಬೆಲ್ಲದ ಆರತಿ, ತಂಬಿಟ್ಟಿನ ಪೂಜೆಯನ್ನು ಸಲ್ಲಿಸಲಾಯಿತು.

ಮಹಿಳೆಯರು ಹೊಂಬಾಳೆ, ಕನಕಾಂಬರ, ಮಲ್ಲಿಗೆ, ಗುಲಾಬಿ ಹೂಗಳಿಂದ ಸಿಂಗಾರ ಮಾಡಿದ ಆರತಿ, ತಂಬಿಟ್ಟು ಹೊತ್ತು ಸಾಗಿದರು. ಹರಕೆ ಹೊತ್ತವರು ದೇವಾಲಯದ ಮುಂಭಾಗ ಕೊಂಡ ಹಾಯ್ದು ದೇವಿಗೆ ಆರತಿ ಬೆಳಗಿದರು. ಜಾತ್ರಾ ಮಹೋತ್ಸವದ ಅಂಗವಾಗಿ ಗ್ರಾಮದ ಮನೆಗಳ ಮುಂದೆ ವಿದ್ಯುತ್ ದೀಪಾ ಲಂಕಾರ ಮಾಡಲಾಗಿತ್ತು. ನೆಂಟರಿಷ್ಟರು ಸಹ ಹಬ್ಬದಲ್ಲಿ ಪಾಲ್ಗೊಂಡಿದ್ದರು.

ಮೆರವಣಿಗೆ ತೆರಳುವ ರಸ್ತೆಗಳನ್ನು ತಳಿರು-ತೋರಣ, ವಿದ್ಯುತ್ ದೀಪಾಲಂಕಾರಗಳಿಂದ ಸಿಂಗರಿಸಲಾಗಿತ್ತು. ಮಂಗಳ ವಾದ್ಯ, ತಮಟೆ, ನಗಾರಿ ಮತ್ತಿತರ ಕುಣಿತಗಳು ಗ್ರಾಮಸ್ಥರನ್ನು ಆಕರ್ಷಿಸಿದವು. ಯುವಕರು, ಪುಟಾಣಿಗಳ ನರ್ತನ, ಖುಷಿಯ ಹೊನಲು, ಊರ ಹಬ್ಬ ಹಾಗೂ ಮಾರಮ್ಮ ಜಾತ್ರೆಯ ಸಂಭ್ರಮವನ್ನು ಹೆಚ್ಚಿಸಿತು. ಈ ಊರ ಹಬ್ಬವನ್ನು ಎಲ್ಲಾ ಸಮುದಾಯದವರು ಒಟ್ಟಾಗಿ ಸೇರಿ ಆಚರಿಸಿದ್ದು ವಿಶೇಷವಾಗಿತ್ತು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ

ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…

8 hours ago

ಭಾರತ-ಯುರೋಪ್‌ ಒಕ್ಕೂಟ ವ್ಯಾಪಾರ ಒಪ್ಪಂದಕ್ಕೆ ಸಹಿ

ನವದೆಹಲಿ: ಮದರ್‌ ಆಫ್‌ ಆಲ್‌ ಡೀಲ್ಸ್‌ ಎಂದೇ ಕರೆಯಲ್ಪಡುವ ಭಾರತ-ಯುರೋಪ್‌ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…

13 hours ago

ಶಿಡ್ಲಘಟ್ಟ ಕೇಸ್‌ನಲ್ಲಿ ಕಾನೂನಿನಂತೆ ಕ್ರಮ: ಸಚಿವ ಭೈರತಿ ಸುರೇಶ್‌

ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…

13 hours ago

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರ ಸಾವು

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…

13 hours ago

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…

14 hours ago

ಗುಂಡ್ಲುಪೇಟೆ: ಬೊಮ್ಮಲಾಪುರದಲ್ಲಿ ವಾಸದ ಮನೆಗೆ ನುಗ್ಗಿದ ಕಡವೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…

14 hours ago