ಮೈಸೂರು ನಗರ

ಮೈಸೂರು: ಒಂಟಿಕೊಪ್ಪಲಿನಲ್ಲಿ ವಿಜೃಂಭಣೆಯಿಂದ ನಡೆದ ಊರ ಹಬ್ಬ

ಮೈಸೂರು: ನಗರದ ಒಂಟಿಕೊಪ್ಪಲಿನಲ್ಲಿ ಊರ ಹಬ್ಬ ಹಾಗೂ ಮಾರಮ್ಮ ಜಾತ್ರೆ ಇಂದು ಅತ್ಯಂತ ವಿಜೃಂಭಣೆಯಿಂದ ನಡೆಯಿತು.

ಹಬ್ಬದ ಅಂಗವಾಗಿ ಗ್ರಾಮದೇವತೆ ಶ್ರೀ ಮಾರಮ್ಮ ದೇವಸ್ಥಾನವನ್ನು ತಳಿರು-ತೋರಣ, ಹೂ ಹಾಗೂ ರಂಗೋಲಿಗಳಿಂದ ಅಲಂಕರಿಸಲಾಗಿತ್ತು. ಇಂದು ಮುಂಜಾನೆಯೇ ಮಾರಮ್ಮನಿಗೆ ಪುಣ್ಯಾಹಃ ಹಾಗೂ ವಿವಿಧ ಪೂಜಾ ಕಾರ್ಯಗಳು ನಡೆದವು. ಆಂಜನೇಯ ಸ್ವಾಮಿಗೆ ಸಂಜೆ ಬೆಲ್ಲದ ಆರತಿ, ತಂಬಿಟ್ಟಿನ ಪೂಜೆಯನ್ನು ಸಲ್ಲಿಸಲಾಯಿತು.

ಮಹಿಳೆಯರು ಹೊಂಬಾಳೆ, ಕನಕಾಂಬರ, ಮಲ್ಲಿಗೆ, ಗುಲಾಬಿ ಹೂಗಳಿಂದ ಸಿಂಗಾರ ಮಾಡಿದ ಆರತಿ, ತಂಬಿಟ್ಟು ಹೊತ್ತು ಸಾಗಿದರು. ಹರಕೆ ಹೊತ್ತವರು ದೇವಾಲಯದ ಮುಂಭಾಗ ಕೊಂಡ ಹಾಯ್ದು ದೇವಿಗೆ ಆರತಿ ಬೆಳಗಿದರು. ಜಾತ್ರಾ ಮಹೋತ್ಸವದ ಅಂಗವಾಗಿ ಗ್ರಾಮದ ಮನೆಗಳ ಮುಂದೆ ವಿದ್ಯುತ್ ದೀಪಾ ಲಂಕಾರ ಮಾಡಲಾಗಿತ್ತು. ನೆಂಟರಿಷ್ಟರು ಸಹ ಹಬ್ಬದಲ್ಲಿ ಪಾಲ್ಗೊಂಡಿದ್ದರು.

ಮೆರವಣಿಗೆ ತೆರಳುವ ರಸ್ತೆಗಳನ್ನು ತಳಿರು-ತೋರಣ, ವಿದ್ಯುತ್ ದೀಪಾಲಂಕಾರಗಳಿಂದ ಸಿಂಗರಿಸಲಾಗಿತ್ತು. ಮಂಗಳ ವಾದ್ಯ, ತಮಟೆ, ನಗಾರಿ ಮತ್ತಿತರ ಕುಣಿತಗಳು ಗ್ರಾಮಸ್ಥರನ್ನು ಆಕರ್ಷಿಸಿದವು. ಯುವಕರು, ಪುಟಾಣಿಗಳ ನರ್ತನ, ಖುಷಿಯ ಹೊನಲು, ಊರ ಹಬ್ಬ ಹಾಗೂ ಮಾರಮ್ಮ ಜಾತ್ರೆಯ ಸಂಭ್ರಮವನ್ನು ಹೆಚ್ಚಿಸಿತು. ಈ ಊರ ಹಬ್ಬವನ್ನು ಎಲ್ಲಾ ಸಮುದಾಯದವರು ಒಟ್ಟಾಗಿ ಸೇರಿ ಆಚರಿಸಿದ್ದು ವಿಶೇಷವಾಗಿತ್ತು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಕೆಪಿಎಸ್ ಶಾಲೆ ಯೋಜನೆ ಸರ್ಕಾರದ ಜಾಣ ನಡೆ!

ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…

2 hours ago

ಓದುಗರ ಪತ್ರ: ಸರ್ಕಾರಿ ಶಾಲೆ ದತ್ತು ಪಡೆಯುವ ಪ್ರಕ್ರಿಯೆ ಆರಂಭವಾಗಲಿ

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…

2 hours ago

ಓದುಗರ ಪತ್ರ: ತಮಿಳುನಾಡು ಮುಖ್ಯಮಂತ್ರಿ ನಡೆ ಶ್ಲಾಘನೀಯ

ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…

2 hours ago

ಪ್ರಾಕೃತಿಕ ವಿಕೋಪ ಎದುರಿಸಲು ಪೊಲೀಸ್ ಇಲಾಖೆ ಸಜ್ಜು

ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್‌ಗಳನ್ನು ಚಾಲನೆ ಮಾಡುವ ಬಗ್ಗೆ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ.  ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…

5 hours ago