ಮೈಸೂರು : ಡ್ರಗ್ಸ್ ಮುಕ್ತ ಮೈಸೂರು ಮಾಡಲು ಮುಂದಾಗಿರುವ ಮೈಸೂರು ನಗರ ಪೊಲೀಸರು ‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ ಹೆಜ್ಜೆ ಎಂಬ ಕಾರ್ಯಕ್ರಮ ಜಾರಿ ಮಾಡಿದ್ದಾರೆ.
ಇದರ ಅಡಿ ಪೊಲೀಸ್ ಇಲಾಖೆಯ 8277948080 ಎಂಬ ವಾಟ್ಸ್ ಆಪ್ ನಂಬರ್ ಕಾರ್ಯ ನಿರ್ವಹಿಸಲಿದೆ. ಸಾರ್ವಜನಿಕರು ತಮ್ಮ ಸುತ್ತ ಮುತ್ತ ನಡೆಯುತ್ತಿರುವ ಮಾದಕ ವಸ್ತು ಸೇವನೆ ಮತ್ತು ಮಾರಾಟದ ಮಾಹಿತಿಯನ್ನು ಸದರಿ ನಂಬರ್ಗೆ ವಾಟ್ಸ್ ಆಪ್ ಮಾಡಬಹುದು. ಸದರಿ ಮಾಹಿತಿ ಮೇಲೆ ಪೊಲೀಸರು ಕ್ರಮ ವಹಿಸಲಿದ್ದಾರೆ. ಮಾಹಿತಿ ನೀಡಿದ ಮಾಹಿತಿದಾರರ ಗುರುತನ್ನು ರಹಸ್ಯವಾಗಿರಿಸಲು ಪೊಲೀಸರು ತೀರ್ಮಾನಿಸಿದ್ದಾರೆ.
ಸಿದ್ದಾರ್ಥ ನಗರ ಸಂಚಾರ ಪೊಲೀಸ್ ಠಾಣೆಯ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಈ ಹೊಸ ಕಾರ್ಯಕ್ರಮದ ಪೋಸ್ಟರ್ನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಬಿಡುಗಡೆ ಮಾಡುವ ಮೂಲಕ ಚಾಲನೆ ನೀಡಿದರು. ಆ ಮೂಲಕ ಡ್ರಗ್ಸ್ ಮುಕ್ತ ಮೈಸೂರಿಗೆ ಮುನ್ನುಡಿ ಬರೆದರು.
ಸಾರ್ವಜನಿಕರು ಸಹಕರಿಸಬೇಕು : ಲಾಟ್ಕರ್
‘ಡ್ರಗ್ಸ್ ಮುಕ್ತ ಮೈಸೂರು ಮಾಡುವ ಸಂಬಂಧ ನಮ್ಮ ಇಲಾಖೆ ವತಿಯಿಂದ ಮೈಸೂರು ನಗರದಲ್ಲಿ ಅನೇಕ ಅರಿವು ಕಾರ್ಯಕ್ರಮ ಮಾಡಿದ್ದೇವೆ. ಸಾರ್ವಜನಿಕರು ಕೂಡ ನಮ್ಮೊಂದಿಗೆ ಕೈ ಜೋಡಿಸಬೇಕು. ಪಾಲಕರು, ಶಿಕ್ಷಕರು ಮಕ್ಕಳ ಬಗ್ಗೆ ನಿಗಾವಹಿಸಬೇಕು. ನಿತ್ಯ ಅವರ ಚಲನವಲನದ ಬಗ್ಗೆ ಗಮನಿಸಬೇಕು. ಡ್ರಗ್ಸ್ನಿಂದ ಅನೇಕರು ಬಲಿಯಾಗಿದ್ದಾರೆ. ಈ ಸಂಬಂಧ ನಮ್ಮ ಇಲಾಖೆಯಿಂದ ಒಂದು ವಾಟ್ಸ್ ಆಪ್ ನಂಬರ್ ಕಾರ್ಯ ನಿರ್ವಹಿಸಲಿದ್ದು, ಸಾರ್ವಜನಿಕರು ಡ್ರಗ್ಸ್ ಸಂಬಂಧ ಸದರಿ ನಂಬರ್ ಮೂಲಕ ಮಾಹಿತಿ ನೀಡಬುದಾಗಿದೆ. ಎಲ್ಲರೂ ಸಹ ಪೊಲೀಸ್ ಇಲಾಖೆ ಜೊತೆ ಕೈ ಜೋಡಿಸಬೇಕು’ ಎಂದು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಹೇಳಿದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…