ಮೈಸೂರು ನಗರ

ಮೈಸೂರು | ವಿವಿಧೆಡೆ ವಿಷ್ಣುವರ್ಧನ್‌ ಅವರ ಪುಣ್ಯ ಸ್ಮರಣೆ

ಮೈಸೂರು : ಕರ್ನಾಟಕ ರತ್ನ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ 16 ನೇ ವರ್ಷದ ಸ್ಮರಣೆಯನ್ನು ನಗರದ ವಿವಿಧೆಡೆ ವಿಷ್ಣುವರ್ಧನ್ ಅಭಿಮಾನಿಗಳು ಆಚರಿಸಿದರು.

ಡಾ.ವಿಷ್ಣುವರ್ಧನ್ ಅಭಿಮಾನಿಗಳ ಒಕ್ಕೂಟದ ವತಿಯಿಂದ ಅರಮನೆಯ ಮುಂಭಾಗದ ಡಾ.ವಿಷ್ಣುವರ್ಧನ್ ಉದ್ಯಾನವನದಲ್ಲಿ ವಿಷ್ಣುವರ್ಧನ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮೇರು ನಟನನ್ನು ಸ್ಮರಿಸಲಾಯಿತು.

ಈ ವೇಳೆ ವಿಷ್ಣುವರ್ಧನ್ ಅಭಿಮಾನಿಗಳ ಒಕ್ಕೂಟದ ಅಧ್ಯಕ್ಷ ಎಂ.ಡಿ.ಪಾರ್ಥ ಸಾರಥಿ ಮಾತನಾಡಿ, ಅರಮನೆ ಮುಂಭಾಗದ ಡಾ.ವಿಷ್ಣುವರ್ಧನ್‌ ಉದ್ಯಾನವನ್ನು ರಾಜ್ಯ ಸರ್ಕಾರ ಮತ್ತು ನಗರಪಾಲಿಕೆ ಅಧಿಕೃತವಾಗಿ ಘೋಷಿಸಿ ಅಭಿವೃದ್ಧಿ ಮಾಡಬೇಕು. ಉದ್ಯಾನವನದಲ್ಲಿ ವಿಷ್ಣುವರ್ಧನ್ ಅವರ ಪ್ರತಿಮೆ ಸ್ಥಾಪಿಸಬೇಕು. ಲಕ್ಷಾಂತರ ಮಂದಿ ಪ್ರವಾಸಿಗರು ಮೈಸೂರಿಗೆ ಬರುತ್ತಾರೆ. ವಿಷ್ಣುವರ್ಧನ್ ವಿಶ್ವವಿಖ್ಯಾತರಾಗಿರುವ ಕಾರಣ ಉದ್ಯಾನವನಕ್ಕೆ ಭೇಟಿ ಕೊಡುತ್ತಾರೆ. ಇದರಿಂದ ಸರ್ಕಾರಕ್ಕೂ ಆದಾಯ ಬರುತ್ತದೆ. ಪ್ರವಾಸೋದ್ಯಮಕ್ಕೆ ಸಹಕಾರಿಯಾಗಿ ನೂರಾರು ಮಂದಿಗೆ ಕೆಲಸ ಸಿಗುತ್ತದೆ ಎಂದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಸತೀಶ್, ಆಲ್ವಿನ್, ಮಹದೇವ್, ಬಸವರಾಜು, ಲಕ್ಷ್ಮಣ, ಕುಮಾರ, ರಮೇಶ್ ಇನ್ನಿತರರು ಹಾಜರಿದ್ದರು.

ಜನ ಮಾನಸದಲ್ಲಿ ಅಚ್ಚಹಸಿರು:
ನಗರದ ದೇವರಾಜ ಅರಸು ರಸ್ತೆಯಲ್ಲಿ ಅಲಯನ್ಸ್ ಕ್ಲಬ್ ಅಫ್ ಮೈಸೂರು ನಾಲ್ವಡಿ ವತಿಯಿಂದ ಡಾ.ವಿಷ್ಣುವರ್ಧನ್ 16ನೇ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ವಿಷ್ಣುವರ್ಧನ್ ಭಾವಚಿತ್ರಕ್ಕೆ ಪುಷ್ಪ ನಮನ ಸಲಿಸಲಾಯಿತು.

ಈ ವೇಳೆ ಮಾತನಾಡಿದ ಮಾಜಿ ಸಂಸದ ಪ್ರತಾಪ್ ಸಿಂಹ, ಸಾಹಸಸಿಂಹ, ಕನ್ನಡಿಗರ ಕಣ್ಮಣಿ ಡಾ.ವಿಷ್ಣುವರ್ಧನ್ ಮಾನವೀಯ ಮೌಲ್ಯಗಳ ಹರಿಕಾರರಾಗಿ, ಉತ್ತಮ ನಟನೆಯ ಮೂಲಕ ಜನ ಮಾನಸದಲ್ಲಿ ಇನ್ನು ಅಚ್ಚ ಹಸಿರಾಗಿದ್ದಾರೆ. ಕನ್ನಡ ಚಿತ್ರರಂಗದ ದಂತಕಥೆಯಾಗಿದ್ದಾರೆ ಎಂದರು.

ವಾಣಿಜ್ಯ ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಕೆ.ಬಿ.ಲಿಂಗರಾಜು, ಅಲಯನ್ಸ್ ಕ್ಲಬ್ ಅಫ್ ಮೈಸೂರು ನಾಲ್ವಡಿ ಬೆಟ್ಟೇಗೌಡ, ಚಾಮರಾಜ ಕ್ಷೇತ್ರದ ಬಿಜೆಪಿ ಅಧ್ಯಕ್ಷ ದಿನೇಶ್ ಗೌಡ, ನರಸಿಂಹರಾಜ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಮಂಜು, ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ನಿರೂಪಕ ಅಜಯ್ ಶಾಸ್ತ್ರಿ, ಸಂದೇಶ್ ಪವಾರ್, ವಸಂತ ಮನೀಶ್, ಮೋಹಿತ್ ಗೌಡ, ಉಮೇಶ್, ಯಶವಂತ್, ವಿನೋದ್ ಅರಸ್, ಪ್ರಕಾಶ್, ಶ್ರೀನಿವಾಸ್, ಗೋಪಾಲ್ ಇದ್ದರು.

ಮೈಸೂರಿನ ಹೊರಹೊಲಯದಲ್ಲಿರುವ ವಿಷ್ಣು ಸ್ಮಾರಕದಲ್ಲೂ ವಿಶೇಷ ಪೂಜೆ ಮಾಡಿ ಸ್ಮರಿಸಲಾಯಿತು. ಇನ್ನೂ ನಗರದದ್ಯಾಂತ ವಿಶೇಷ ಪೂಜೆ, ರಕ್ತದಾನ ಮತ್ತು ಅನ್ನದಾನ ಶಿಬಿರಗಳು ನಡೆದವು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

1 hour ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

1 hour ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

1 hour ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

1 hour ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

1 hour ago