ಮೈಸೂರು ನಗರ

ಮ್ಯೂಸಿಕ್ ಮೂಲಕ ರಾಮನಿಗೆ ನಮನ ಸಲ್ಲಿಸಿದ ವಿಶ್ರುತ್

ಪ್ರಶಾಂತ್‌ ಎನ್‌ ಮಲ್ಲಿಕ್‌

ಮೈಸೂರು: ನಾಡಿನಾದ್ಯಂತ ರಾಮನವಮಿಯ ಅಂಗವಾಗಿ ರಾಮನಿಗೆ ವಿವಿಧ ಪೂಜಾ ಕೈಂಕರ್ಯಗಳು ಮುಂಜಾನೆಯಿಂದಲೂ ಜರುಗುತ್ತಿವೆ. ರಾಮನವಮಿ ಎಂದ ಕ್ಷಣ ಮಜ್ಜಿಗೆ, ಪಾನಕ, ಹೆಸರುಬೇಳೆ ಕೋಸಂಬರಿಯನ್ನು ವಿತರಣೆ ಮಾಡುವುದು ವಿಶೇಷವಾಗಿರುತ್ತದೆ. ಆಂಜನೇಯ ದೇವಸ್ಥಾನ ಹಾಗೂ ರಾಮನ ಮೂರ್ತಿ ದೇವಸ್ಥಾನಗಳಲ್ಲಿ ಇಂದು ವಿಶೇಷ ಪೂಜೆಗಳು ಅದ್ದೂರಿಯಾಗಿ ಜರುಗಿದೆ. ಸಾರ್ವಜನಿಕರು ದೇವರ ದರ್ಶನವನ್ನು ಪಡೆದು ಮಜ್ಜಿಗೆ ಪಾನಕ ಸೇವಿಸಿ ದೇವರ ಕೃಪೆಗೆ ಪಾತ್ರರಾಗಿದ್ದಾರೆ.

ಮೈಸೂರಿನ ಹತ್ತನೇ ತರಗತಿ ವಿದ್ಯಾರ್ಥಿ ಹಾಗೂ ಮೈಸೂರುನ ಬಾಲಕ ವಿಶ್ರುತ್ ಎ ಧನ್ಯ ಅವರು ರಾಮನವಮಿ ಅಂಗವಾಗಿ ಸ್ಯಾಕ್ಸೋಫೋನ್ ಮೂಲಕ ಶ್ರೀ ತ್ಯಾಗರಾಜರ ರಚನೆಯ “ರಾಮನಾಮಂ ಭಜರೆ ಮಾನಸ” ಮಧ್ಯಮಾವತಿ ರಾಗ, ಆದಿ ತಾಳ ಹಾಗೂ ಶ್ರೀ ತ್ಯಾಗರಾಜರ ರಚನೆ “ಬಂಟುರೀತಿ’ ಹಂಸನಾದ ರಾಗ ಆದಿತಾಳ ಸಂಗೀತವನ್ನು ನುಡಿಸಿ ಸಂಗೀತದ ಮೂಲಕವೇ ರಾಮನಿಗೆ ನಮನ ಸಲ್ಲಿಸಿದ್ದಾರೆ. ಸಂಗೀತವಂತೂ ಅದ್ಭುತವಾಗಿ ಮೂಡಿಬಂದಿದೆ.

ವಿಶ್ರುತ್ ಅವರು ಸಂಗೀತ ಮಾತ್ರವಲ್ಲ ಯಕ್ಷಗಾನ, ತಬಲಾ, ಕರ್ನಾಟಕ ಶಾಸ್ತ್ರೀಯ ಸಂಗೀತ ಕಲಿತು ಕಾರ್ಯಕ್ರಮಗಳಿಗೂ ಸಹ ಪ್ರದರ್ಶನ ಮಾಡಿದ್ದಾರೆ. ಎಂಟು ವರ್ಷಗಳಿಂದ ಸ್ಯಾಕ್ಸೋಫೋನ್ ಮ್ಯೂಸಿಕ್ ಅನ್ನು ಸಹ ಕಲಿತು ನುಡಿಸುತ್ತಿದ್ದಾರೆ.

 

 

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

4 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

7 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

11 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

13 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

14 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

15 hours ago