ಪ್ರಶಾಂತ್ ಎನ್ ಮಲ್ಲಿಕ್
ಮೈಸೂರು: ನಾಡಿನಾದ್ಯಂತ ರಾಮನವಮಿಯ ಅಂಗವಾಗಿ ರಾಮನಿಗೆ ವಿವಿಧ ಪೂಜಾ ಕೈಂಕರ್ಯಗಳು ಮುಂಜಾನೆಯಿಂದಲೂ ಜರುಗುತ್ತಿವೆ. ರಾಮನವಮಿ ಎಂದ ಕ್ಷಣ ಮಜ್ಜಿಗೆ, ಪಾನಕ, ಹೆಸರುಬೇಳೆ ಕೋಸಂಬರಿಯನ್ನು ವಿತರಣೆ ಮಾಡುವುದು ವಿಶೇಷವಾಗಿರುತ್ತದೆ. ಆಂಜನೇಯ ದೇವಸ್ಥಾನ ಹಾಗೂ ರಾಮನ ಮೂರ್ತಿ ದೇವಸ್ಥಾನಗಳಲ್ಲಿ ಇಂದು ವಿಶೇಷ ಪೂಜೆಗಳು ಅದ್ದೂರಿಯಾಗಿ ಜರುಗಿದೆ. ಸಾರ್ವಜನಿಕರು ದೇವರ ದರ್ಶನವನ್ನು ಪಡೆದು ಮಜ್ಜಿಗೆ ಪಾನಕ ಸೇವಿಸಿ ದೇವರ ಕೃಪೆಗೆ ಪಾತ್ರರಾಗಿದ್ದಾರೆ.
ಮೈಸೂರಿನ ಹತ್ತನೇ ತರಗತಿ ವಿದ್ಯಾರ್ಥಿ ಹಾಗೂ ಮೈಸೂರುನ ಬಾಲಕ ವಿಶ್ರುತ್ ಎ ಧನ್ಯ ಅವರು ರಾಮನವಮಿ ಅಂಗವಾಗಿ ಸ್ಯಾಕ್ಸೋಫೋನ್ ಮೂಲಕ ಶ್ರೀ ತ್ಯಾಗರಾಜರ ರಚನೆಯ “ರಾಮನಾಮಂ ಭಜರೆ ಮಾನಸ” ಮಧ್ಯಮಾವತಿ ರಾಗ, ಆದಿ ತಾಳ ಹಾಗೂ ಶ್ರೀ ತ್ಯಾಗರಾಜರ ರಚನೆ “ಬಂಟುರೀತಿ’ ಹಂಸನಾದ ರಾಗ ಆದಿತಾಳ ಸಂಗೀತವನ್ನು ನುಡಿಸಿ ಸಂಗೀತದ ಮೂಲಕವೇ ರಾಮನಿಗೆ ನಮನ ಸಲ್ಲಿಸಿದ್ದಾರೆ. ಸಂಗೀತವಂತೂ ಅದ್ಭುತವಾಗಿ ಮೂಡಿಬಂದಿದೆ.
ವಿಶ್ರುತ್ ಅವರು ಸಂಗೀತ ಮಾತ್ರವಲ್ಲ ಯಕ್ಷಗಾನ, ತಬಲಾ, ಕರ್ನಾಟಕ ಶಾಸ್ತ್ರೀಯ ಸಂಗೀತ ಕಲಿತು ಕಾರ್ಯಕ್ರಮಗಳಿಗೂ ಸಹ ಪ್ರದರ್ಶನ ಮಾಡಿದ್ದಾರೆ. ಎಂಟು ವರ್ಷಗಳಿಂದ ಸ್ಯಾಕ್ಸೋಫೋನ್ ಮ್ಯೂಸಿಕ್ ಅನ್ನು ಸಹ ಕಲಿತು ನುಡಿಸುತ್ತಿದ್ದಾರೆ.
ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…
ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…
ಗೋಣಿಕೊಪ್ಪ : ಇಲ್ಲಿಗೆ ಸಮೀಪದ ಬಿ.ಶೆಟ್ಟಿಗೇರಿಯಲ್ಲಿ ಇಂದು(ಮೇ.6) ಬೆಳಿಗ್ಗೆ ಹುಲಿ ದಾಳಿಗೆ ಹಸು ಬಲಿಯಾಗಿರುವ ಘಟನೆ ನಡೆದಿದೆ. ಬಿ.ಶೆಟ್ಟಿಗೇರಿ ಗ್ರಾಮದ…
ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂʼಗೆ (ಟಿವಿಕೆ)…
ಚೆನ್ನೈ : ತಮಿಳುನಾಡಿನಲ್ಲಿ ನೂತನ ಸರ್ಕಾರ ರಚನೆಗೆ ಸಿದ್ಧತೆ ಭರದಿಂದ ಸಾಗಿದೆ. ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಬೀಗಿರುವ ನಟ…
ಹನೂರು : ಪಟ್ಟಣದಿಂದ ಹೂಗ್ಯಂಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ರಾಮಪುರ…