ಮೈಸೂರು: ಸಿಎಂ ಸಿದ್ದರಾಮಯ್ಯ ತಮಗೆ ೬೨ ಕೋಟಿ ಬರಬೇಕು ಅಂತಾರೆ ನನಗೆ ಅರ್ಥವಾಗ್ತಿಲ್ಲ. ಇದು ಯಾವ ತರಹದ ಲೆಕ್ಕ. ೬೨ ಕೋಟಿ ರೂ ಅನ್ನೋದು ಕಡ್ಲೆ ಕಾಯಿ ಬೀಜವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ವಾಗ್ದಾಳಿ ನಡೆಸಿದರು.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಯಾಕೆ ಮಣ್ಣಿನ ಹಿಂದೆ ಹೋಗುತ್ತಿದ್ದಾರೆ ಗೊತ್ತಿಲ್ಲ. ಹಣಕಾಸು ಸಚಿವರಾದ್ರೂ ಹೀಗೆ ಮಾತನಾಡಿದ್ರೆ ಹೇಗೆ..? ಸಿಎಂ ಸಿದ್ದರಾಮಯ್ಯ ತಮಗೆ ಬಂದಿರುವ ಜಾಗವನ್ನು ಸರ್ಕಾರಕ್ಕೆ ವಾಪಸ್ ಕೊಡಲಿ. ಅದೇ ಜಾಗದಲ್ಲಿ ಒಂದು ಆಸ್ಪತ್ರೆ ಕಟ್ಟಿಸಿ ನಿಮ್ಮ ಹೆಸರು ಚಿರಸ್ಥಾಯಿಯಾಗಿ ಉಳಿಯುತ್ತದೆ. ಇಲ್ಲದೆ ಇದ್ದರೆ ನಿಮ್ಮ ಭ್ರಷ್ಟಾಚಾರ ಚಿರಸ್ಥಾಯಿಯಾಗಿ ಉಳಿಯುತ್ತೆ. ಯಾಕೆ ಮಾನ ಮರ್ಯಾದೆ ಬೀದಿ ಬೀದಿಯಲ್ಲಿ ಕಳೆದು ಕೊಳ್ತಾ ಇದ್ದೀರಾ. ಈ ಹಗರಣ ನ್ಯಾಯಾಂಗ ತನಿಕೆಗೆ ಒಪ್ಪಿಸಿ ಅಂತ ನಿಮ್ಮ ಶಿಷ್ಯರು ಸಲಹೆ ಕೊಡುತ್ತಿದ್ದಾರೆ. ನ್ಯಾಯಾಂಗ ತನಿಖೆಯಿಂದ ಯಾವ ಪ್ರಯೋಜನವಿಲ್ಲ. ಈ ಹಗರಣ ಸಿಬಿಐಗೆ ಕೊಡಿ ಸಾವಿರಾರು ಕೋಟಿ ರೂ ಹಗರಣ ಇದು ಎಂದು ಆಗ್ರಹಿಸಿದರು.
ಸಿದ್ದರಾಮಯ್ಯ ಪತ್ನಿ ಖರೀದಿಸಿರುವ ದೇವನೂರು ಬಡಾವಣೆ ಜಾಗ ದಲಿತರಿಗೆ ಸೇರಿದ್ದು, ಜವರ ಎಂಬ ವ್ಯಕ್ತಿಗೆ ಸೇರಿದ ಜಮೀನು ಇದು. ಡಿನೋಟಿಫೈ ಆದ ಜಾಗವನ್ನು ಸಿಎಂ ಪತ್ನಿಯ ಅಣ್ಣ ಖರೀದಿ ಮಾಡಿದ್ದರಿ. ದಾನ ಪತ್ರವಾಗಿ ೨೦೧೦ ರಲ್ಲಿ ಸಿಎಂ ಪತ್ನಿ ಹೆಸರಿಗೆ ಬಂದಿದೆ. ಸಮಾಜವಾದಿ ಮನಸ್ಸಿನ ಸಿದ್ದರಾಮಯ್ಯ ಯಾಕೆ ಈ ರೀತಿ ಮಣ್ಣಿನ ಹಿಂದೆ ಹೋಗುವ ರೀತಿ ಬದಲಾವಣೆ ಆದ್ರು..? ನೀವು ನಿಮ್ಮ ಅವಧಿಯಲ್ಲಿ ಒಂದು ಸೈಟ್ ಆದ್ರು ಜನಸಾಮಾನ್ಯರಿಗೆ ಕೊಡಿಸಿದ್ದೀರಾ ಎಂದು ಸಿಎಂ ವಿಶ್ವನಾಥ್ ಪ್ರಶ್ನೆ ಮಾಡಿದರು.
ಮೈಸೂರು : ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುವ ಆಸೆ ಇದೆ. ಹೈಕಮಾಂಡ್ ಏನೇ ತೀರ್ಮಾನ ಮಾಡಿದರೂ…
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ.ಸತ್ಯವರ ಗ್ರಾಮದ ಸಮೀಪದ ಹೊಸಕೋಟೆ-ದಾಬಸ್ಪೇಟೆ ರಾಷ್ಟ್ರೀಯ ಹೆದ್ದಾರಿ (NH-648) ಮತ್ತು…
ಮೈಸೂರಿನ ರಾಮಕೃಷ್ಣ ನಗರದಲ್ಲಿರುವ, ರಾಮಕೃಷ್ಣ ವೃತ್ತದಿಂದ (ಆಂದೋಲನ ಸರ್ಕಲ್), ಕುವೆಂಪು ನಗರದ ಕಾಂಪ್ಲೆಕ್ ತನಕದ ಸುಮಾರು ಒಂದು ಕಿ.ಮೀ. ದೂರದ…
ಹನೂರು : ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆ.14 ರಿಂದ 18 ರವರೆಗೆ ಐದು ದಿನಗಳ…
ಮುಂಬೈ : ಲಂಡನ್ನಿನಲ್ಲಿ ಇದ್ದುಕೊಂಡು ದೇಶ ಭ್ರಷ್ಟ ಆರ್ಥಿಕ ಅಪರಾಧಿಗಳ ಕಾಯ್ದೆಯ (ಎಫ್ಇಒ) ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸುವ ಬದಲು, ಭಾರತಕ್ಕೆ…
ಚುನಾವಣೆ ಕಳೆದು ಚಲನಚಿತ್ರ ವಾಣಿಜ್ಯ ಮಂಡಳಿಗೆ ಹೊಸ ಭಾರವಾಹಿಗಳ ಆಯ್ಕೆ ಆಗಿದೆ. ನಟ, ನಿರ್ಮಾಪಕಿ ಜಯಮಾಲ ನೇತೃತ್ವದ ಆಡಳಿತ ಮಂಡಳಿ…