ಮೈಸೂರು: ಸಿಎಂ ಸಿದ್ದರಾಮಯ್ಯ ತಮಗೆ ೬೨ ಕೋಟಿ ಬರಬೇಕು ಅಂತಾರೆ ನನಗೆ ಅರ್ಥವಾಗ್ತಿಲ್ಲ. ಇದು ಯಾವ ತರಹದ ಲೆಕ್ಕ. ೬೨ ಕೋಟಿ ರೂ ಅನ್ನೋದು ಕಡ್ಲೆ ಕಾಯಿ ಬೀಜವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ವಾಗ್ದಾಳಿ ನಡೆಸಿದರು.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಯಾಕೆ ಮಣ್ಣಿನ ಹಿಂದೆ ಹೋಗುತ್ತಿದ್ದಾರೆ ಗೊತ್ತಿಲ್ಲ. ಹಣಕಾಸು ಸಚಿವರಾದ್ರೂ ಹೀಗೆ ಮಾತನಾಡಿದ್ರೆ ಹೇಗೆ..? ಸಿಎಂ ಸಿದ್ದರಾಮಯ್ಯ ತಮಗೆ ಬಂದಿರುವ ಜಾಗವನ್ನು ಸರ್ಕಾರಕ್ಕೆ ವಾಪಸ್ ಕೊಡಲಿ. ಅದೇ ಜಾಗದಲ್ಲಿ ಒಂದು ಆಸ್ಪತ್ರೆ ಕಟ್ಟಿಸಿ ನಿಮ್ಮ ಹೆಸರು ಚಿರಸ್ಥಾಯಿಯಾಗಿ ಉಳಿಯುತ್ತದೆ. ಇಲ್ಲದೆ ಇದ್ದರೆ ನಿಮ್ಮ ಭ್ರಷ್ಟಾಚಾರ ಚಿರಸ್ಥಾಯಿಯಾಗಿ ಉಳಿಯುತ್ತೆ. ಯಾಕೆ ಮಾನ ಮರ್ಯಾದೆ ಬೀದಿ ಬೀದಿಯಲ್ಲಿ ಕಳೆದು ಕೊಳ್ತಾ ಇದ್ದೀರಾ. ಈ ಹಗರಣ ನ್ಯಾಯಾಂಗ ತನಿಕೆಗೆ ಒಪ್ಪಿಸಿ ಅಂತ ನಿಮ್ಮ ಶಿಷ್ಯರು ಸಲಹೆ ಕೊಡುತ್ತಿದ್ದಾರೆ. ನ್ಯಾಯಾಂಗ ತನಿಖೆಯಿಂದ ಯಾವ ಪ್ರಯೋಜನವಿಲ್ಲ. ಈ ಹಗರಣ ಸಿಬಿಐಗೆ ಕೊಡಿ ಸಾವಿರಾರು ಕೋಟಿ ರೂ ಹಗರಣ ಇದು ಎಂದು ಆಗ್ರಹಿಸಿದರು.
ಸಿದ್ದರಾಮಯ್ಯ ಪತ್ನಿ ಖರೀದಿಸಿರುವ ದೇವನೂರು ಬಡಾವಣೆ ಜಾಗ ದಲಿತರಿಗೆ ಸೇರಿದ್ದು, ಜವರ ಎಂಬ ವ್ಯಕ್ತಿಗೆ ಸೇರಿದ ಜಮೀನು ಇದು. ಡಿನೋಟಿಫೈ ಆದ ಜಾಗವನ್ನು ಸಿಎಂ ಪತ್ನಿಯ ಅಣ್ಣ ಖರೀದಿ ಮಾಡಿದ್ದರಿ. ದಾನ ಪತ್ರವಾಗಿ ೨೦೧೦ ರಲ್ಲಿ ಸಿಎಂ ಪತ್ನಿ ಹೆಸರಿಗೆ ಬಂದಿದೆ. ಸಮಾಜವಾದಿ ಮನಸ್ಸಿನ ಸಿದ್ದರಾಮಯ್ಯ ಯಾಕೆ ಈ ರೀತಿ ಮಣ್ಣಿನ ಹಿಂದೆ ಹೋಗುವ ರೀತಿ ಬದಲಾವಣೆ ಆದ್ರು..? ನೀವು ನಿಮ್ಮ ಅವಧಿಯಲ್ಲಿ ಒಂದು ಸೈಟ್ ಆದ್ರು ಜನಸಾಮಾನ್ಯರಿಗೆ ಕೊಡಿಸಿದ್ದೀರಾ ಎಂದು ಸಿಎಂ ವಿಶ್ವನಾಥ್ ಪ್ರಶ್ನೆ ಮಾಡಿದರು.
ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…
ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…
ಟೆಹ್ರಾನ್ : ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…
ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…
ವಾಷಿಂಗ್ಟನ್ : ಇರಾನ್ ವಿರುದ್ಧದ ಯುದ್ಧದ ನಡುವೆಯೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೊಸದಾಗಿ ಸುಂಕ ಸಮರ ಆರಂಭಿಸಿದ್ದಾರೆ.…
ಬೆಂಗಳೂರು : ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ರೆಜಿಸ್ಟ್ರೇಷನ್ ಪ್ಲೇಟ್ (HSRP) ಅಳವಡಿಸುವುದು ಇನ್ನು ಮುಂದೆ ಕಡ್ಡಾಯವಿರುವುದಿಲ್ಲ ಎಂದು ಕರ್ನಾಟಕ…