ಮೈಸೂರು ನಗರ

ಸೈಟ್ ವಾಪಸ್ ಕೊಡಲಿಲ್ಲ ಅಂದ್ರೆ ಭ್ರಷ್ಟಾಚಾರ ನಿಮ್ಮ ಚಿರಸ್ಥಾಯಿಯಾಗಿ ಉಳಿಯುತ್ತೆ : ಸಿಎಂ ವಿರುದ್ಧ ಹಳ್ಳಿಹಕ್ಕಿ ವಾಗ್ದಾಳಿ

ಮೈಸೂರು: ಸಿಎಂ ಸಿದ್ದರಾಮಯ್ಯ ತಮಗೆ ೬೨ ಕೋಟಿ ಬರಬೇಕು ಅಂತಾರೆ ನನಗೆ ಅರ್ಥವಾಗ್ತಿಲ್ಲ. ಇದು ಯಾವ ತರಹದ ಲೆಕ್ಕ. ೬೨ ಕೋಟಿ ರೂ ಅನ್ನೋದು ಕಡ್ಲೆ ಕಾಯಿ ಬೀಜವಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌ ವಿಶ್ವನಾಥ್‌ ವಾಗ್ದಾಳಿ ನಡೆಸಿದರು.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಯಾಕೆ ಮಣ್ಣಿನ ಹಿಂದೆ ಹೋಗುತ್ತಿದ್ದಾರೆ ಗೊತ್ತಿಲ್ಲ. ಹಣಕಾಸು ಸಚಿವರಾದ್ರೂ ಹೀಗೆ ಮಾತನಾಡಿದ್ರೆ ಹೇಗೆ..? ಸಿಎಂ ಸಿದ್ದರಾಮಯ್ಯ ತಮಗೆ ಬಂದಿರುವ ಜಾಗವನ್ನು ಸರ್ಕಾರಕ್ಕೆ ವಾಪಸ್‌ ಕೊಡಲಿ. ಅದೇ ಜಾಗದಲ್ಲಿ ಒಂದು ಆಸ್ಪತ್ರೆ ಕಟ್ಟಿಸಿ ನಿಮ್ಮ ಹೆಸರು ಚಿರಸ್ಥಾಯಿಯಾಗಿ ಉಳಿಯುತ್ತದೆ. ಇಲ್ಲದೆ ಇದ್ದರೆ ನಿಮ್ಮ ಭ್ರಷ್ಟಾಚಾರ ಚಿರಸ್ಥಾಯಿಯಾಗಿ ಉಳಿಯುತ್ತೆ. ಯಾಕೆ ಮಾನ ಮರ್ಯಾದೆ ಬೀದಿ ಬೀದಿಯಲ್ಲಿ ಕಳೆದು ಕೊಳ್ತಾ ಇದ್ದೀರಾ. ಈ ಹಗರಣ  ನ್ಯಾಯಾಂಗ ತನಿಕೆಗೆ ಒಪ್ಪಿಸಿ ಅಂತ ನಿಮ್ಮ ಶಿಷ್ಯರು ಸಲಹೆ ಕೊಡುತ್ತಿದ್ದಾರೆ. ನ್ಯಾಯಾಂಗ ತನಿಖೆಯಿಂದ ಯಾವ ಪ್ರಯೋಜನವಿಲ್ಲ. ಈ ಹಗರಣ ಸಿಬಿಐಗೆ ಕೊಡಿ ಸಾವಿರಾರು ಕೋಟಿ ರೂ ಹಗರಣ ಇದು ಎಂದು ಆಗ್ರಹಿಸಿದರು.

ಸಿದ್ದರಾಮಯ್ಯ ಪತ್ನಿ ಖರೀದಿಸಿರುವ ದೇವನೂರು ಬಡಾವಣೆ ಜಾಗ ದಲಿತರಿಗೆ ಸೇರಿದ್ದು, ಜವರ ಎಂಬ ವ್ಯಕ್ತಿಗೆ ಸೇರಿದ ಜಮೀನು ಇದು. ಡಿನೋಟಿಫೈ ಆದ ಜಾಗವನ್ನು ಸಿಎಂ ಪತ್ನಿಯ ಅಣ್ಣ ಖರೀದಿ ಮಾಡಿದ್ದರಿ. ದಾನ ಪತ್ರವಾಗಿ ೨೦೧೦ ರಲ್ಲಿ ಸಿಎಂ ಪತ್ನಿ ಹೆಸರಿಗೆ ಬಂದಿದೆ. ಸಮಾಜವಾದಿ ಮನಸ್ಸಿನ ಸಿದ್ದರಾಮಯ್ಯ ಯಾಕೆ ಈ ರೀತಿ ಮಣ್ಣಿನ ಹಿಂದೆ ಹೋಗುವ  ರೀತಿ ಬದಲಾವಣೆ ಆದ್ರು..? ನೀವು ನಿಮ್ಮ ಅವಧಿಯಲ್ಲಿ ಒಂದು ಸೈಟ್‌ ಆದ್ರು ಜನಸಾಮಾನ್ಯರಿಗೆ ಕೊಡಿಸಿದ್ದೀರಾ ಎಂದು ಸಿಎಂ ವಿಶ್ವನಾಥ್‌ ಪ್ರಶ್ನೆ ಮಾಡಿದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಮಂಡ್ಯ | ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಬಂದಿದ್ದ ಕೈದಿ ಜನರ ಕೈಗೆ ಸಿಕ್ಕಿಬಿದ್ದ

ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…

42 mins ago

ದಸರಾ ಗಜಪಡೆ ವೀಕ್ಷಣೆ ಟಿಕೆಟ್‌ ರದ್ದು

ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…

1 hour ago

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…

2 hours ago

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

2 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

7 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

10 hours ago