ಮೈಸೂರು ನಗರ

ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಆರೋಗ್ಯ ಸೇವೆಯನ್ನು ಪಡೆದುಕೊಳ್ಳಿ : ಶಾಸಕ ಜಿ.ಟಿ.ಡಿ

ಮೈಸೂರು : ಆರೋಗ್ಯ ಕೇಂದ್ರವನ್ನು ಜನಸಾಮಾನ್ಯರ ಆರೋಗ್ಯದ ಹಿತದೃಷ್ಟಿಯಿಂದ ಹೆಚ್ಚುವರಿಯಾಗಿ ನಗರ ಪ್ರದೇಶದ ಹೊರವಲಯಕ್ಕೆ ಮಂಜೂರು ಮಾಡಲಾಗಿದ್ದು, ಏಕಲವ್ಯ ನಗರದ ಆರೋಗ್ಯ ಕೇಂದ್ರಕ್ಕೆ ಜನಸಾಮಾನ್ಯ ಭೇಟಿ ನೀಡಿ ಆರೋಗ್ಯ ಸೇವೆಯನ್ನು ಪಡೆದುಕೊಳ್ಳಬಹುದಾಗಿದೆ ಎಂದು ಚಾಮುಂಡೇಶ್ವರಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಜಿ.ಟಿ ದೇವೇಗೌಡ ತಿಳಿಸಿದರು.

ಮೈಸೂರು ಗ್ರಾಮಾಂತರ ತಾಲ್ಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಏಕಲವ್ಯ ನಗರದಲ್ಲಿ ನೂತನವಾಗಿ ಪ್ರಾರಂಭವಾದ “ನಮ್ಮ ಕ್ಲಿನಿಕ್”ನ್ನು ಶುಕ್ರವಾರ ದೀಪ ಬೆಳಗಿಸಿ ಉದ್ಘಾಟನೆ ಮಾಡುವುದರ ಮೂಲಕ ಕೇಂದ್ರಕ್ಕೆ ಚಾಲನೆ ನೀಡಿದರು.

ಇದನ್ನು ಓದಿ: Udupi | ಮೋದಿಗೆ ಭಾರತ ಭಾಗ್ಯ ವಿಧಾತ ಬಿರುದು ನೀಡಿ ಸನ್ಮಾನ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ಕುಮಾರಸ್ವಾಮಿ ಪಿ.ಸಿ ಅವರು ಮಾತನಾಡಿ ಜಿಲ್ಲೆಯಲ್ಲಿ ಈಗಾಗಲೇ 14 ಕೇಂದ್ರಗಳ ಪ್ರಾರಂಭವಾಗಿದ್ದು, ಈ ನಿಟ್ಟಿನಲ್ಲಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸಾರ್ವಜನಿಕ ಅನುಕೂಲಕ್ಕೆ ಅನುಗುಣವಾಗಿ ‘ನಮ್ಮ ಕ್ಲಿನಿಕ್’ಗಳನ್ನು ಪ್ರಾರಂಬಿಸಲಾಗುತ್ತಿದೆ ಹಾಗೂ ಸದರಿ ನಮ್ಮ ಕ್ಲಿನಿಕ್ ನಲ್ಲಿ ಮಾರ್ಗಸೂಚಿ ಅನುಸಾರ ಸುಮಾರ 12 ವಿವಿಧ ಆರೋಗ್ಯ ಸೇವೆಗಳನ್ನು ನೀಡಲಾಗುವುದು ಎಂದು ತಿಳಿಸಿ ಸಾರ್ವಜನಿಕರ ಇದರ ಸದುಪಯೋಗ ಪಡೆದುಕೊಳ್ಳಲು ತಿಳಿಸಿದರು.

ಕಾರ್ಯಕ್ರಮದಲ್ಲಿ ಕ್ಷೇತ್ರದ ಜನಪ್ರತಿನಿಧಿಗಳು, ಸ್ಥಳೀಯ ಮುಖಂಡರು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿಗಳು ಭಾಗವಹಿಸಿದರು.

ಆಂದೋಲನ ಡೆಸ್ಕ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

3 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

5 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

6 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

8 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

14 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

20 hours ago