ಮೈಸೂರು ನಗರ

ಸಾಗರದಾಜೆಗೊ ಸಂಸ್ಕೃತಿ ಪಸರಿಸಿದ್ದೇ ವಿವೇಕಾನಂದರು : ಪೇಜಾವರಿ ಶ್ರೀ

ಮೈಸೂರು : ಸ್ವಾಮಿ ವಿವೇಕಾನಂದರು ಭಾರತೀಯ ಸಂಸ್ಕೃತಿಯ ಚಿಂತನೆಯನ್ನು ಸಾಗರದಾಜೆಗೂ ತಲುಪಿಸಿ ದರು ಎಂದು ಪೇಜಾವರ ಅಧೋಕ್ಷಜ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದರು.

ಶ್ರೀ ರಾಮಕೃಷ್ಣ ಆಶ್ರಮದ ಶತಮಾನೋತ್ಸವದ ಅಂಗವಾಗಿ ಆಶ್ರಮದ ಆವರಣದಲ್ಲಿ ಶುಕ್ರವಾರ 300 ಪೌರಕಾರ್ಮಿಕರಿಗೆ ನಾರಾಯಣ ಪೂಜೆ ಸಲ್ಲಿಸುವ ಸಮಾರಂಭದಲ್ಲಿ ಮಾತನಾಡಿದ ಅವರು, ಭಾರತದ ಸಂಸ್ಕೃತಿ, ಸಂಸ್ಕಾರ ಹಾಗೂ ಚಿಂತನೆಗಳನ್ನು ವಿದೇಶಿ ನೆಲದಲ್ಲೂ ವಿವೇಕಾನಂದರು ಬಿತ್ತರಿಸಿದರು. ‘ವಸುದೈ ವ ಕುಟುಂಬಕಂ’ ಎನ್ನುವುದು ಭಾರತೀಯರ ಮಂತ್ರ. ಭೂಮಿ ಮೇಲಿನ ಎಲ್ಲರೂ ನಮ್ಮವರು ಎಂಬುದೇ ನಮ್ಮ ಸಂಸ್ಕೃತಿ. ಇಂತಹ ಭಾರತೀಯ ಉದಾರತೆ ಮನೋಭಾವವನ್ನೇ ವಿವೇಕಾನಂದರು ವಿದೇಶಿಗರಿಗೆ ತೋರಿಸಿಕೊಟ್ಟರು ಎಂದು ಹೇಳಿದರು.

ನಿತ್ಯ ನಮ್ಮ ಕಾರ್ಯದಲ್ಲಿ ವಿಜಯ ಸಂಪಾದನೆಗೆ ಭಗವದ್ಗೀತೆಯ ‘ಯತ್ರ ಯೋಗೇಶ್ವರ ಕೃಷ್ಣೋ ಯತ್ರ ಪಾರ್ಥೋ ಧನುರ್ಧರಃ’ ಮುಖ್ಯ. ಅಂದರೆ ಕೃಷ್ಣ ಮತ್ತು ಪಾರ್ಥ ಇಬ್ಬರೂ ನಮಗೆ ಬೇಕು. ಭಗವಂತನ ಪೂಜಿಸುವ ನಾವೆಲ್ಲರೂ ಆಸ್ತಿಕರು. ಹಾಗಾಗಿ ನಾವು ಮಾಡುವ ಎಲ್ಲ ಕಾರ್ಯಗಳಲ್ಲೂ ದೇವರ ಅನುಗ್ರಹ ವಿದ್ದರೆ ಮಾತ್ರ ಯಶಸ್ಸು ಸಿಗುತ್ತದೆ ಎಂದು ನಂಬಿದವರು ನಾವು ಎಂದು ಹೇಳಿದರು.

ಇದನ್ನೂ ಓದಿ:-ಅಮಿತ್‌ ಶಾ ಭೇಟಿಯಾದ ರಾಜಣ್ಣ ಪುತ್ರ

ಶಾಸಕ ಜಿ.ಟಿ.ದೇವೇಗೌಡ ಮಾತನಾಡಿ, ರಾಮಕೃಷ್ಣ ಆಶ್ರಮ ಶತಮಾನದ ತನ್ನ ನಡಿಗೆಯಲ್ಲಿ ಸಾವಿರಾರು ಮಕ್ಕಳ ಬಾಳಲ್ಲಿ ವಿದ್ಯಾಬೆಳಕು ಹರಿಸಿದ ಮಹೋನ್ನತ ಸೇವಾ ಕೇಂದ್ರವಾಗಿದೆ. ಪರಿಸರ ಸಂರಕ್ಷಣೆ, ಮುಕ್ತ ಶಿಕ್ಷಣ, ವಯಸ್ಕರ ಶಿಕ್ಷಣ, ಜೈಲು ಕೈದಿಗಳಿಗೆ ಮೌಲ್ಯಯುತ ಶಿಕ್ಷಣ, ಗ್ರಾಮೀಣಾಭಿವೃದ್ಧಿಯಂತಹ ಹಲವು ಸಾಮಾಜಿಕ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವುದು ನಾಡಿನ ಹೆಮ್ಮೆ ಎಂದು ತಿಳಿಸಿದರು.

ಮೈಸೂರಿನ ಶ್ರೀರಾಮಕೃಷ್ಣ ಆಶ್ರಮದ ಅಧ್ಯಕ್ಷ ಶ್ರೀ ಸ್ವಾಮಿ ಮುಕ್ತಿದಾನಂದ ಮಾತನಾಡಿ, ಮೈಸೂರಿನ ಸ್ವಚ್ಛತೆ ಕಾಪಾಡುವಲ್ಲಿ ಪೌರಕಾರ್ಮಿಕರ ಪಾತ್ರ ದೊಡ್ಡದು. ಪೌರಕಾರ್ಮಿಕರು ತಮ್ಮ ಕಾಯಕದ ಮೂಲಕ ಭಗ ವಂತನಿಗೆ ಪುಷ್ಪ ಸಮರ್ಪಿಸುತ್ತಿದ್ದಾರೆ. ಎಲ್ಲರನ್ನೂ ದೇವರು ಎಂದು ಪೂಜಿಸುವ ಭಾವವನ್ನು ಸ್ವಾಮಿ ವಿವೇಕಾನಂದರು, ಶಾರದಾ ಮಾತೆ ತಿಳಿಸಿದ್ದಾರೆ. ಆದರ್ಶ ಸಮಾಜ ಹಾಗೂ ಸರ್ವಜನಾಂಗದ ಶಾಂತಿಯ ತೋಟವನ್ನು ನಾವು ಪ್ರಾಯೋಗಿಕವಾಗಿ ಕಟ್ಟಬೇಕು ಎಂದರು.

ಕಡಪ ರಾಮಕೃಷ್ಣ ಮಿಷನ್ ಕಾರ್ಯದರ್ಶಿ ಸ್ವಾಮಿ ಅನುಪಮಾನಂದ ಮಾತನಾಡಿದರು. ಹಲಸೂರು ರಾಮಕೃಷ್ಣ ಆಶ್ರಮದ ಅಧ್ಯಕ್ಷ ಸ್ವಾಮಿ ಬೋಧಸ್ವರೂಪಾನಂದ, ಬಿಳಿಗಿರಿರಂಗನಬೆಟ್ಟದ ವಿವೇಕಾನಂದ ಗಿರಿಜನ ಕಲ್ಯಾಣ ಕೇಂದ್ರದ ಗೌರವ ಕಾರ್ಯದರ್ಶಿ ಡಾ.ಎಚ್.ಸುದರ್ಶನ್, ನಗರಪಾಲಿಕೆ ಮಾಜಿ ಸದಸ್ಯ ಡಿ.ನಾಗಭೂಷಣ್, ಕನ್ನಡ ಪರಿಚಾರಕ ಅರವಿಂದ ಶರ್ಮ ಹಾಜರಿದ್ದರು. ಇದೇ ವೇಳೆ ರಾಮಕೃಷ್ಣ ಆಶ್ರಮದ ಆವರಣದಲ್ಲಿ ೩೦೦ ಪೌರಕಾರ್ಮಿಕರಿಗೆ ನಾರಾಯಣಪೂಜೆ ಸಲ್ಲಿಸುವ ಮೂಲಕ ಆಶ್ರಮದ ಶತಮಾನೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಆಂದೋಲನ ಡೆಸ್ಕ್

Recent Posts

ಹನೂರು| ಆಟೋ ಹಾಗೂ ಕಾರಿನ ನಡುವೆ ಡಿಕ್ಕಿ: ಮೂವರಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ‌ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…

2 hours ago

ನೀಟ್‌ ಪರೀಕ್ಷೆಯ ರದ್ದು, ಕೇಂದ್ರ ಸರ್ಕಾರದ ಬಹು ದೊಡ್ಡ ಹಗರಣ: ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…

3 hours ago

ಪಾಕಿಸ್ತಾನದಲ್ಲಿ ಭೀಕರ ಬಾಂಬ್‌ ಸ್ಫೋಟ: 9 ಮಂದಿ ಸಾವು

ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್‌ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…

3 hours ago

ನಾಳೆಯಿಂದ ಎರಡು ದಿನ ಸಿದ್ದರಾಮಯ್ಯ ಮೈಸೂರು ಪ್ರವಾಸ

ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…

3 hours ago

ವನ್ಯಜೀವಿ ಸಂಚಾರವಿರುವ ಚಾರಣಪಥ, ಸಂಚಾರಪಥ ಸ್ಥಗಿತಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…

3 hours ago

ನಾಗಮಲೆ ಗ್ರಾಮದಲ್ಲಿ ಎರಡು ಮೇಕೆ ಹೊತ್ತೊಯ್ದ ಚಿರತೆ: ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…

3 hours ago