ಮೈಸೂರು : ಸ್ವಾಮಿ ವಿವೇಕಾನಂದರು ಭಾರತೀಯ ಸಂಸ್ಕೃತಿಯ ಚಿಂತನೆಯನ್ನು ಸಾಗರದಾಜೆಗೂ ತಲುಪಿಸಿ ದರು ಎಂದು ಪೇಜಾವರ ಅಧೋಕ್ಷಜ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದರು.
ಶ್ರೀ ರಾಮಕೃಷ್ಣ ಆಶ್ರಮದ ಶತಮಾನೋತ್ಸವದ ಅಂಗವಾಗಿ ಆಶ್ರಮದ ಆವರಣದಲ್ಲಿ ಶುಕ್ರವಾರ 300 ಪೌರಕಾರ್ಮಿಕರಿಗೆ ನಾರಾಯಣ ಪೂಜೆ ಸಲ್ಲಿಸುವ ಸಮಾರಂಭದಲ್ಲಿ ಮಾತನಾಡಿದ ಅವರು, ಭಾರತದ ಸಂಸ್ಕೃತಿ, ಸಂಸ್ಕಾರ ಹಾಗೂ ಚಿಂತನೆಗಳನ್ನು ವಿದೇಶಿ ನೆಲದಲ್ಲೂ ವಿವೇಕಾನಂದರು ಬಿತ್ತರಿಸಿದರು. ‘ವಸುದೈ ವ ಕುಟುಂಬಕಂ’ ಎನ್ನುವುದು ಭಾರತೀಯರ ಮಂತ್ರ. ಭೂಮಿ ಮೇಲಿನ ಎಲ್ಲರೂ ನಮ್ಮವರು ಎಂಬುದೇ ನಮ್ಮ ಸಂಸ್ಕೃತಿ. ಇಂತಹ ಭಾರತೀಯ ಉದಾರತೆ ಮನೋಭಾವವನ್ನೇ ವಿವೇಕಾನಂದರು ವಿದೇಶಿಗರಿಗೆ ತೋರಿಸಿಕೊಟ್ಟರು ಎಂದು ಹೇಳಿದರು.
ನಿತ್ಯ ನಮ್ಮ ಕಾರ್ಯದಲ್ಲಿ ವಿಜಯ ಸಂಪಾದನೆಗೆ ಭಗವದ್ಗೀತೆಯ ‘ಯತ್ರ ಯೋಗೇಶ್ವರ ಕೃಷ್ಣೋ ಯತ್ರ ಪಾರ್ಥೋ ಧನುರ್ಧರಃ’ ಮುಖ್ಯ. ಅಂದರೆ ಕೃಷ್ಣ ಮತ್ತು ಪಾರ್ಥ ಇಬ್ಬರೂ ನಮಗೆ ಬೇಕು. ಭಗವಂತನ ಪೂಜಿಸುವ ನಾವೆಲ್ಲರೂ ಆಸ್ತಿಕರು. ಹಾಗಾಗಿ ನಾವು ಮಾಡುವ ಎಲ್ಲ ಕಾರ್ಯಗಳಲ್ಲೂ ದೇವರ ಅನುಗ್ರಹ ವಿದ್ದರೆ ಮಾತ್ರ ಯಶಸ್ಸು ಸಿಗುತ್ತದೆ ಎಂದು ನಂಬಿದವರು ನಾವು ಎಂದು ಹೇಳಿದರು.
ಇದನ್ನೂ ಓದಿ:-ಅಮಿತ್ ಶಾ ಭೇಟಿಯಾದ ರಾಜಣ್ಣ ಪುತ್ರ
ಶಾಸಕ ಜಿ.ಟಿ.ದೇವೇಗೌಡ ಮಾತನಾಡಿ, ರಾಮಕೃಷ್ಣ ಆಶ್ರಮ ಶತಮಾನದ ತನ್ನ ನಡಿಗೆಯಲ್ಲಿ ಸಾವಿರಾರು ಮಕ್ಕಳ ಬಾಳಲ್ಲಿ ವಿದ್ಯಾಬೆಳಕು ಹರಿಸಿದ ಮಹೋನ್ನತ ಸೇವಾ ಕೇಂದ್ರವಾಗಿದೆ. ಪರಿಸರ ಸಂರಕ್ಷಣೆ, ಮುಕ್ತ ಶಿಕ್ಷಣ, ವಯಸ್ಕರ ಶಿಕ್ಷಣ, ಜೈಲು ಕೈದಿಗಳಿಗೆ ಮೌಲ್ಯಯುತ ಶಿಕ್ಷಣ, ಗ್ರಾಮೀಣಾಭಿವೃದ್ಧಿಯಂತಹ ಹಲವು ಸಾಮಾಜಿಕ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವುದು ನಾಡಿನ ಹೆಮ್ಮೆ ಎಂದು ತಿಳಿಸಿದರು.
ಮೈಸೂರಿನ ಶ್ರೀರಾಮಕೃಷ್ಣ ಆಶ್ರಮದ ಅಧ್ಯಕ್ಷ ಶ್ರೀ ಸ್ವಾಮಿ ಮುಕ್ತಿದಾನಂದ ಮಾತನಾಡಿ, ಮೈಸೂರಿನ ಸ್ವಚ್ಛತೆ ಕಾಪಾಡುವಲ್ಲಿ ಪೌರಕಾರ್ಮಿಕರ ಪಾತ್ರ ದೊಡ್ಡದು. ಪೌರಕಾರ್ಮಿಕರು ತಮ್ಮ ಕಾಯಕದ ಮೂಲಕ ಭಗ ವಂತನಿಗೆ ಪುಷ್ಪ ಸಮರ್ಪಿಸುತ್ತಿದ್ದಾರೆ. ಎಲ್ಲರನ್ನೂ ದೇವರು ಎಂದು ಪೂಜಿಸುವ ಭಾವವನ್ನು ಸ್ವಾಮಿ ವಿವೇಕಾನಂದರು, ಶಾರದಾ ಮಾತೆ ತಿಳಿಸಿದ್ದಾರೆ. ಆದರ್ಶ ಸಮಾಜ ಹಾಗೂ ಸರ್ವಜನಾಂಗದ ಶಾಂತಿಯ ತೋಟವನ್ನು ನಾವು ಪ್ರಾಯೋಗಿಕವಾಗಿ ಕಟ್ಟಬೇಕು ಎಂದರು.
ಕಡಪ ರಾಮಕೃಷ್ಣ ಮಿಷನ್ ಕಾರ್ಯದರ್ಶಿ ಸ್ವಾಮಿ ಅನುಪಮಾನಂದ ಮಾತನಾಡಿದರು. ಹಲಸೂರು ರಾಮಕೃಷ್ಣ ಆಶ್ರಮದ ಅಧ್ಯಕ್ಷ ಸ್ವಾಮಿ ಬೋಧಸ್ವರೂಪಾನಂದ, ಬಿಳಿಗಿರಿರಂಗನಬೆಟ್ಟದ ವಿವೇಕಾನಂದ ಗಿರಿಜನ ಕಲ್ಯಾಣ ಕೇಂದ್ರದ ಗೌರವ ಕಾರ್ಯದರ್ಶಿ ಡಾ.ಎಚ್.ಸುದರ್ಶನ್, ನಗರಪಾಲಿಕೆ ಮಾಜಿ ಸದಸ್ಯ ಡಿ.ನಾಗಭೂಷಣ್, ಕನ್ನಡ ಪರಿಚಾರಕ ಅರವಿಂದ ಶರ್ಮ ಹಾಜರಿದ್ದರು. ಇದೇ ವೇಳೆ ರಾಮಕೃಷ್ಣ ಆಶ್ರಮದ ಆವರಣದಲ್ಲಿ ೩೦೦ ಪೌರಕಾರ್ಮಿಕರಿಗೆ ನಾರಾಯಣಪೂಜೆ ಸಲ್ಲಿಸುವ ಮೂಲಕ ಆಶ್ರಮದ ಶತಮಾನೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಬೆಂಗಳೂರು: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬೆಂಗಳೂರಿನ ಕೆ.ಪಿ.ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗೋವಿಂದರಾಜು ಅವರನ್ನು ಸೇವೆಯಿಂದ ಅಮಾನತುಗೊಳಿಸಿ…
ಮೈಸೂರು: ಪಾರಂಪರಿಕ ಕಟ್ಟಡದ ಬಳಿ ಸಿಗರೇಟ್ ಸೇದುತ್ತಾ ರಜತ್ ಫೋಟೋಶೂಟ್ ಮಾಡಿಸಿದ್ದು, ಬಿಗ್ಬಾಸ್ ಹುಡುಗನ ಹುಚ್ಚಾಟಕ್ಕೆ ನೆಟ್ಟಿಗರು ತೀವ್ರ ಆಕ್ರೋಶ…
ಮೈಸೂರು: ಆದಾಯಕ್ಕಿಂತ ಹೆಚ್ಚು ಹಣ ಸಂಪಾದಿಸಿದ್ದಾರೆ ಎಂಬ ಆರೋಪದ ಮೇರೆಗೆ ಲೋಕಾಯುಕ್ತ ಪೊಲೀಸರು ಏಕಕಾಲದಲ್ಲಿ ಏಳು ಕಡೆ ದಾಳಿ ನಡೆಸಿದ್ದಾರೆ.…
ಸರಗೂರು: ಬಹುರ್ದೆಸೆಗೆಂದು ಬಯಲಿಗೆ ತೆರಳಿದ್ದ ವ್ಯಕ್ತಿಯ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ವ್ಯಕ್ತಿಯ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು…
ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ಅರಸಿನಕೆರೆ ಗ್ರಾಮದಲ್ಲಿ ವಾಲ್ಮೀಕಿ ಭವನ ನಿರ್ಮಾಣವಾಗಿ ಎರಡು ವರ್ಷ ಕಳೆದಿದ್ದರೂ ಉದ್ಘಾಟನೆಯಾಗದೇ ಇರುವುದರಿಂದ ಸಾರ್ವಜನಿಕರು…
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ರಸ್ತೆ ಹಾಳಾಗಿದ್ದು, ಮಳೆಗಾಲದಲ್ಲಿ ಗ್ರಾಮಸ್ಥರು ಓಡಾಡಲು ಸಾಧ್ಯವಾಗುತ್ತಿಲ್ಲ. ಗ್ರಾಮದ ಹೊಸ ಬಡಾವಣೆಗಳಿಗೆ…