ಮೈಸೂರು ನಗರ

ಸಾಗರದಾಜೆಗೊ ಸಂಸ್ಕೃತಿ ಪಸರಿಸಿದ್ದೇ ವಿವೇಕಾನಂದರು : ಪೇಜಾವರಿ ಶ್ರೀ

ಮೈಸೂರು : ಸ್ವಾಮಿ ವಿವೇಕಾನಂದರು ಭಾರತೀಯ ಸಂಸ್ಕೃತಿಯ ಚಿಂತನೆಯನ್ನು ಸಾಗರದಾಜೆಗೂ ತಲುಪಿಸಿ ದರು ಎಂದು ಪೇಜಾವರ ಅಧೋಕ್ಷಜ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದರು.

ಶ್ರೀ ರಾಮಕೃಷ್ಣ ಆಶ್ರಮದ ಶತಮಾನೋತ್ಸವದ ಅಂಗವಾಗಿ ಆಶ್ರಮದ ಆವರಣದಲ್ಲಿ ಶುಕ್ರವಾರ 300 ಪೌರಕಾರ್ಮಿಕರಿಗೆ ನಾರಾಯಣ ಪೂಜೆ ಸಲ್ಲಿಸುವ ಸಮಾರಂಭದಲ್ಲಿ ಮಾತನಾಡಿದ ಅವರು, ಭಾರತದ ಸಂಸ್ಕೃತಿ, ಸಂಸ್ಕಾರ ಹಾಗೂ ಚಿಂತನೆಗಳನ್ನು ವಿದೇಶಿ ನೆಲದಲ್ಲೂ ವಿವೇಕಾನಂದರು ಬಿತ್ತರಿಸಿದರು. ‘ವಸುದೈ ವ ಕುಟುಂಬಕಂ’ ಎನ್ನುವುದು ಭಾರತೀಯರ ಮಂತ್ರ. ಭೂಮಿ ಮೇಲಿನ ಎಲ್ಲರೂ ನಮ್ಮವರು ಎಂಬುದೇ ನಮ್ಮ ಸಂಸ್ಕೃತಿ. ಇಂತಹ ಭಾರತೀಯ ಉದಾರತೆ ಮನೋಭಾವವನ್ನೇ ವಿವೇಕಾನಂದರು ವಿದೇಶಿಗರಿಗೆ ತೋರಿಸಿಕೊಟ್ಟರು ಎಂದು ಹೇಳಿದರು.

ನಿತ್ಯ ನಮ್ಮ ಕಾರ್ಯದಲ್ಲಿ ವಿಜಯ ಸಂಪಾದನೆಗೆ ಭಗವದ್ಗೀತೆಯ ‘ಯತ್ರ ಯೋಗೇಶ್ವರ ಕೃಷ್ಣೋ ಯತ್ರ ಪಾರ್ಥೋ ಧನುರ್ಧರಃ’ ಮುಖ್ಯ. ಅಂದರೆ ಕೃಷ್ಣ ಮತ್ತು ಪಾರ್ಥ ಇಬ್ಬರೂ ನಮಗೆ ಬೇಕು. ಭಗವಂತನ ಪೂಜಿಸುವ ನಾವೆಲ್ಲರೂ ಆಸ್ತಿಕರು. ಹಾಗಾಗಿ ನಾವು ಮಾಡುವ ಎಲ್ಲ ಕಾರ್ಯಗಳಲ್ಲೂ ದೇವರ ಅನುಗ್ರಹ ವಿದ್ದರೆ ಮಾತ್ರ ಯಶಸ್ಸು ಸಿಗುತ್ತದೆ ಎಂದು ನಂಬಿದವರು ನಾವು ಎಂದು ಹೇಳಿದರು.

ಇದನ್ನೂ ಓದಿ:-ಅಮಿತ್‌ ಶಾ ಭೇಟಿಯಾದ ರಾಜಣ್ಣ ಪುತ್ರ

ಶಾಸಕ ಜಿ.ಟಿ.ದೇವೇಗೌಡ ಮಾತನಾಡಿ, ರಾಮಕೃಷ್ಣ ಆಶ್ರಮ ಶತಮಾನದ ತನ್ನ ನಡಿಗೆಯಲ್ಲಿ ಸಾವಿರಾರು ಮಕ್ಕಳ ಬಾಳಲ್ಲಿ ವಿದ್ಯಾಬೆಳಕು ಹರಿಸಿದ ಮಹೋನ್ನತ ಸೇವಾ ಕೇಂದ್ರವಾಗಿದೆ. ಪರಿಸರ ಸಂರಕ್ಷಣೆ, ಮುಕ್ತ ಶಿಕ್ಷಣ, ವಯಸ್ಕರ ಶಿಕ್ಷಣ, ಜೈಲು ಕೈದಿಗಳಿಗೆ ಮೌಲ್ಯಯುತ ಶಿಕ್ಷಣ, ಗ್ರಾಮೀಣಾಭಿವೃದ್ಧಿಯಂತಹ ಹಲವು ಸಾಮಾಜಿಕ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವುದು ನಾಡಿನ ಹೆಮ್ಮೆ ಎಂದು ತಿಳಿಸಿದರು.

ಮೈಸೂರಿನ ಶ್ರೀರಾಮಕೃಷ್ಣ ಆಶ್ರಮದ ಅಧ್ಯಕ್ಷ ಶ್ರೀ ಸ್ವಾಮಿ ಮುಕ್ತಿದಾನಂದ ಮಾತನಾಡಿ, ಮೈಸೂರಿನ ಸ್ವಚ್ಛತೆ ಕಾಪಾಡುವಲ್ಲಿ ಪೌರಕಾರ್ಮಿಕರ ಪಾತ್ರ ದೊಡ್ಡದು. ಪೌರಕಾರ್ಮಿಕರು ತಮ್ಮ ಕಾಯಕದ ಮೂಲಕ ಭಗ ವಂತನಿಗೆ ಪುಷ್ಪ ಸಮರ್ಪಿಸುತ್ತಿದ್ದಾರೆ. ಎಲ್ಲರನ್ನೂ ದೇವರು ಎಂದು ಪೂಜಿಸುವ ಭಾವವನ್ನು ಸ್ವಾಮಿ ವಿವೇಕಾನಂದರು, ಶಾರದಾ ಮಾತೆ ತಿಳಿಸಿದ್ದಾರೆ. ಆದರ್ಶ ಸಮಾಜ ಹಾಗೂ ಸರ್ವಜನಾಂಗದ ಶಾಂತಿಯ ತೋಟವನ್ನು ನಾವು ಪ್ರಾಯೋಗಿಕವಾಗಿ ಕಟ್ಟಬೇಕು ಎಂದರು.

ಕಡಪ ರಾಮಕೃಷ್ಣ ಮಿಷನ್ ಕಾರ್ಯದರ್ಶಿ ಸ್ವಾಮಿ ಅನುಪಮಾನಂದ ಮಾತನಾಡಿದರು. ಹಲಸೂರು ರಾಮಕೃಷ್ಣ ಆಶ್ರಮದ ಅಧ್ಯಕ್ಷ ಸ್ವಾಮಿ ಬೋಧಸ್ವರೂಪಾನಂದ, ಬಿಳಿಗಿರಿರಂಗನಬೆಟ್ಟದ ವಿವೇಕಾನಂದ ಗಿರಿಜನ ಕಲ್ಯಾಣ ಕೇಂದ್ರದ ಗೌರವ ಕಾರ್ಯದರ್ಶಿ ಡಾ.ಎಚ್.ಸುದರ್ಶನ್, ನಗರಪಾಲಿಕೆ ಮಾಜಿ ಸದಸ್ಯ ಡಿ.ನಾಗಭೂಷಣ್, ಕನ್ನಡ ಪರಿಚಾರಕ ಅರವಿಂದ ಶರ್ಮ ಹಾಜರಿದ್ದರು. ಇದೇ ವೇಳೆ ರಾಮಕೃಷ್ಣ ಆಶ್ರಮದ ಆವರಣದಲ್ಲಿ ೩೦೦ ಪೌರಕಾರ್ಮಿಕರಿಗೆ ನಾರಾಯಣಪೂಜೆ ಸಲ್ಲಿಸುವ ಮೂಲಕ ಆಶ್ರಮದ ಶತಮಾನೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಆಂದೋಲನ ಡೆಸ್ಕ್

Recent Posts

ಹಾಡಿ ಕುಟುಂಬಗಳಿಗೆ ಗ್ಯಾರಂಟಿ ಯೋಜನೆ ತಲುಪಿಸಿ: ಅರುಣ್ ಕುಮಾರ್

ಮೈಸೂರು : ಜಿಲ್ಲೆಯಲ್ಲಿರುವ ಹಾಡಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ತಲುಪಿಸಿ, ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ…

29 mins ago

ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ: ಕೆ.ಎನ್.ರಾಜಣ್ಣ

ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ…

2 hours ago

ಡೆವಿಲ್‌ ಸಿನಿಮಾ ಬ್ಲಾಕ್‌ ಬಸ್ಟರ್‌ ಆಗಲಿ: ನಟ ದರ್ಶನ್‌ಗೆ ರಿಷಬ್‌ ಶೆಟ್ಟಿ ವಿಶ್‌

ಬೆಂಗಳೂರು: ನಾಳೆ ದರ್ಶನ್‌ ಅಭಿನಯದ ಡೆವಿಲ್‌ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಡಿ ಬಾಸ್‌ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.…

2 hours ago

ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್‌ ಸರ್ಕಾರ ಪರಿಹಾರ ನೀಡಿಲ್ಲ, ಮನೆ…

3 hours ago

ಕೇಂದ್ರ ಸರ್ಕಾರ, ಇಂಡಿಗೋ ವಿರುದ್ಧ ಹೈಕೋರ್ಟ್‌ ಆಕ್ರೋಶ

ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ…

3 hours ago

ಸಕ್ಕರೆನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ…

4 hours ago