ಮೈಸೂರು ನಗರ

ಸಾಗರದಾಜೆಗೊ ಸಂಸ್ಕೃತಿ ಪಸರಿಸಿದ್ದೇ ವಿವೇಕಾನಂದರು : ಪೇಜಾವರಿ ಶ್ರೀ

ಮೈಸೂರು : ಸ್ವಾಮಿ ವಿವೇಕಾನಂದರು ಭಾರತೀಯ ಸಂಸ್ಕೃತಿಯ ಚಿಂತನೆಯನ್ನು ಸಾಗರದಾಜೆಗೂ ತಲುಪಿಸಿ ದರು ಎಂದು ಪೇಜಾವರ ಅಧೋಕ್ಷಜ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದರು.

ಶ್ರೀ ರಾಮಕೃಷ್ಣ ಆಶ್ರಮದ ಶತಮಾನೋತ್ಸವದ ಅಂಗವಾಗಿ ಆಶ್ರಮದ ಆವರಣದಲ್ಲಿ ಶುಕ್ರವಾರ 300 ಪೌರಕಾರ್ಮಿಕರಿಗೆ ನಾರಾಯಣ ಪೂಜೆ ಸಲ್ಲಿಸುವ ಸಮಾರಂಭದಲ್ಲಿ ಮಾತನಾಡಿದ ಅವರು, ಭಾರತದ ಸಂಸ್ಕೃತಿ, ಸಂಸ್ಕಾರ ಹಾಗೂ ಚಿಂತನೆಗಳನ್ನು ವಿದೇಶಿ ನೆಲದಲ್ಲೂ ವಿವೇಕಾನಂದರು ಬಿತ್ತರಿಸಿದರು. ‘ವಸುದೈ ವ ಕುಟುಂಬಕಂ’ ಎನ್ನುವುದು ಭಾರತೀಯರ ಮಂತ್ರ. ಭೂಮಿ ಮೇಲಿನ ಎಲ್ಲರೂ ನಮ್ಮವರು ಎಂಬುದೇ ನಮ್ಮ ಸಂಸ್ಕೃತಿ. ಇಂತಹ ಭಾರತೀಯ ಉದಾರತೆ ಮನೋಭಾವವನ್ನೇ ವಿವೇಕಾನಂದರು ವಿದೇಶಿಗರಿಗೆ ತೋರಿಸಿಕೊಟ್ಟರು ಎಂದು ಹೇಳಿದರು.

ನಿತ್ಯ ನಮ್ಮ ಕಾರ್ಯದಲ್ಲಿ ವಿಜಯ ಸಂಪಾದನೆಗೆ ಭಗವದ್ಗೀತೆಯ ‘ಯತ್ರ ಯೋಗೇಶ್ವರ ಕೃಷ್ಣೋ ಯತ್ರ ಪಾರ್ಥೋ ಧನುರ್ಧರಃ’ ಮುಖ್ಯ. ಅಂದರೆ ಕೃಷ್ಣ ಮತ್ತು ಪಾರ್ಥ ಇಬ್ಬರೂ ನಮಗೆ ಬೇಕು. ಭಗವಂತನ ಪೂಜಿಸುವ ನಾವೆಲ್ಲರೂ ಆಸ್ತಿಕರು. ಹಾಗಾಗಿ ನಾವು ಮಾಡುವ ಎಲ್ಲ ಕಾರ್ಯಗಳಲ್ಲೂ ದೇವರ ಅನುಗ್ರಹ ವಿದ್ದರೆ ಮಾತ್ರ ಯಶಸ್ಸು ಸಿಗುತ್ತದೆ ಎಂದು ನಂಬಿದವರು ನಾವು ಎಂದು ಹೇಳಿದರು.

ಇದನ್ನೂ ಓದಿ:-ಅಮಿತ್‌ ಶಾ ಭೇಟಿಯಾದ ರಾಜಣ್ಣ ಪುತ್ರ

ಶಾಸಕ ಜಿ.ಟಿ.ದೇವೇಗೌಡ ಮಾತನಾಡಿ, ರಾಮಕೃಷ್ಣ ಆಶ್ರಮ ಶತಮಾನದ ತನ್ನ ನಡಿಗೆಯಲ್ಲಿ ಸಾವಿರಾರು ಮಕ್ಕಳ ಬಾಳಲ್ಲಿ ವಿದ್ಯಾಬೆಳಕು ಹರಿಸಿದ ಮಹೋನ್ನತ ಸೇವಾ ಕೇಂದ್ರವಾಗಿದೆ. ಪರಿಸರ ಸಂರಕ್ಷಣೆ, ಮುಕ್ತ ಶಿಕ್ಷಣ, ವಯಸ್ಕರ ಶಿಕ್ಷಣ, ಜೈಲು ಕೈದಿಗಳಿಗೆ ಮೌಲ್ಯಯುತ ಶಿಕ್ಷಣ, ಗ್ರಾಮೀಣಾಭಿವೃದ್ಧಿಯಂತಹ ಹಲವು ಸಾಮಾಜಿಕ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವುದು ನಾಡಿನ ಹೆಮ್ಮೆ ಎಂದು ತಿಳಿಸಿದರು.

ಮೈಸೂರಿನ ಶ್ರೀರಾಮಕೃಷ್ಣ ಆಶ್ರಮದ ಅಧ್ಯಕ್ಷ ಶ್ರೀ ಸ್ವಾಮಿ ಮುಕ್ತಿದಾನಂದ ಮಾತನಾಡಿ, ಮೈಸೂರಿನ ಸ್ವಚ್ಛತೆ ಕಾಪಾಡುವಲ್ಲಿ ಪೌರಕಾರ್ಮಿಕರ ಪಾತ್ರ ದೊಡ್ಡದು. ಪೌರಕಾರ್ಮಿಕರು ತಮ್ಮ ಕಾಯಕದ ಮೂಲಕ ಭಗ ವಂತನಿಗೆ ಪುಷ್ಪ ಸಮರ್ಪಿಸುತ್ತಿದ್ದಾರೆ. ಎಲ್ಲರನ್ನೂ ದೇವರು ಎಂದು ಪೂಜಿಸುವ ಭಾವವನ್ನು ಸ್ವಾಮಿ ವಿವೇಕಾನಂದರು, ಶಾರದಾ ಮಾತೆ ತಿಳಿಸಿದ್ದಾರೆ. ಆದರ್ಶ ಸಮಾಜ ಹಾಗೂ ಸರ್ವಜನಾಂಗದ ಶಾಂತಿಯ ತೋಟವನ್ನು ನಾವು ಪ್ರಾಯೋಗಿಕವಾಗಿ ಕಟ್ಟಬೇಕು ಎಂದರು.

ಕಡಪ ರಾಮಕೃಷ್ಣ ಮಿಷನ್ ಕಾರ್ಯದರ್ಶಿ ಸ್ವಾಮಿ ಅನುಪಮಾನಂದ ಮಾತನಾಡಿದರು. ಹಲಸೂರು ರಾಮಕೃಷ್ಣ ಆಶ್ರಮದ ಅಧ್ಯಕ್ಷ ಸ್ವಾಮಿ ಬೋಧಸ್ವರೂಪಾನಂದ, ಬಿಳಿಗಿರಿರಂಗನಬೆಟ್ಟದ ವಿವೇಕಾನಂದ ಗಿರಿಜನ ಕಲ್ಯಾಣ ಕೇಂದ್ರದ ಗೌರವ ಕಾರ್ಯದರ್ಶಿ ಡಾ.ಎಚ್.ಸುದರ್ಶನ್, ನಗರಪಾಲಿಕೆ ಮಾಜಿ ಸದಸ್ಯ ಡಿ.ನಾಗಭೂಷಣ್, ಕನ್ನಡ ಪರಿಚಾರಕ ಅರವಿಂದ ಶರ್ಮ ಹಾಜರಿದ್ದರು. ಇದೇ ವೇಳೆ ರಾಮಕೃಷ್ಣ ಆಶ್ರಮದ ಆವರಣದಲ್ಲಿ ೩೦೦ ಪೌರಕಾರ್ಮಿಕರಿಗೆ ನಾರಾಯಣಪೂಜೆ ಸಲ್ಲಿಸುವ ಮೂಲಕ ಆಶ್ರಮದ ಶತಮಾನೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಆಂದೋಲನ ಡೆಸ್ಕ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

6 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

8 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

9 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

11 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

16 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

23 hours ago