ಮೈಸೂರು ನಗರ

ಸಾಗರದಾಜೆಗೊ ಸಂಸ್ಕೃತಿ ಪಸರಿಸಿದ್ದೇ ವಿವೇಕಾನಂದರು : ಪೇಜಾವರಿ ಶ್ರೀ

ಮೈಸೂರು : ಸ್ವಾಮಿ ವಿವೇಕಾನಂದರು ಭಾರತೀಯ ಸಂಸ್ಕೃತಿಯ ಚಿಂತನೆಯನ್ನು ಸಾಗರದಾಜೆಗೂ ತಲುಪಿಸಿ ದರು ಎಂದು ಪೇಜಾವರ ಅಧೋಕ್ಷಜ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದರು.

ಶ್ರೀ ರಾಮಕೃಷ್ಣ ಆಶ್ರಮದ ಶತಮಾನೋತ್ಸವದ ಅಂಗವಾಗಿ ಆಶ್ರಮದ ಆವರಣದಲ್ಲಿ ಶುಕ್ರವಾರ 300 ಪೌರಕಾರ್ಮಿಕರಿಗೆ ನಾರಾಯಣ ಪೂಜೆ ಸಲ್ಲಿಸುವ ಸಮಾರಂಭದಲ್ಲಿ ಮಾತನಾಡಿದ ಅವರು, ಭಾರತದ ಸಂಸ್ಕೃತಿ, ಸಂಸ್ಕಾರ ಹಾಗೂ ಚಿಂತನೆಗಳನ್ನು ವಿದೇಶಿ ನೆಲದಲ್ಲೂ ವಿವೇಕಾನಂದರು ಬಿತ್ತರಿಸಿದರು. ‘ವಸುದೈ ವ ಕುಟುಂಬಕಂ’ ಎನ್ನುವುದು ಭಾರತೀಯರ ಮಂತ್ರ. ಭೂಮಿ ಮೇಲಿನ ಎಲ್ಲರೂ ನಮ್ಮವರು ಎಂಬುದೇ ನಮ್ಮ ಸಂಸ್ಕೃತಿ. ಇಂತಹ ಭಾರತೀಯ ಉದಾರತೆ ಮನೋಭಾವವನ್ನೇ ವಿವೇಕಾನಂದರು ವಿದೇಶಿಗರಿಗೆ ತೋರಿಸಿಕೊಟ್ಟರು ಎಂದು ಹೇಳಿದರು.

ನಿತ್ಯ ನಮ್ಮ ಕಾರ್ಯದಲ್ಲಿ ವಿಜಯ ಸಂಪಾದನೆಗೆ ಭಗವದ್ಗೀತೆಯ ‘ಯತ್ರ ಯೋಗೇಶ್ವರ ಕೃಷ್ಣೋ ಯತ್ರ ಪಾರ್ಥೋ ಧನುರ್ಧರಃ’ ಮುಖ್ಯ. ಅಂದರೆ ಕೃಷ್ಣ ಮತ್ತು ಪಾರ್ಥ ಇಬ್ಬರೂ ನಮಗೆ ಬೇಕು. ಭಗವಂತನ ಪೂಜಿಸುವ ನಾವೆಲ್ಲರೂ ಆಸ್ತಿಕರು. ಹಾಗಾಗಿ ನಾವು ಮಾಡುವ ಎಲ್ಲ ಕಾರ್ಯಗಳಲ್ಲೂ ದೇವರ ಅನುಗ್ರಹ ವಿದ್ದರೆ ಮಾತ್ರ ಯಶಸ್ಸು ಸಿಗುತ್ತದೆ ಎಂದು ನಂಬಿದವರು ನಾವು ಎಂದು ಹೇಳಿದರು.

ಇದನ್ನೂ ಓದಿ:-ಅಮಿತ್‌ ಶಾ ಭೇಟಿಯಾದ ರಾಜಣ್ಣ ಪುತ್ರ

ಶಾಸಕ ಜಿ.ಟಿ.ದೇವೇಗೌಡ ಮಾತನಾಡಿ, ರಾಮಕೃಷ್ಣ ಆಶ್ರಮ ಶತಮಾನದ ತನ್ನ ನಡಿಗೆಯಲ್ಲಿ ಸಾವಿರಾರು ಮಕ್ಕಳ ಬಾಳಲ್ಲಿ ವಿದ್ಯಾಬೆಳಕು ಹರಿಸಿದ ಮಹೋನ್ನತ ಸೇವಾ ಕೇಂದ್ರವಾಗಿದೆ. ಪರಿಸರ ಸಂರಕ್ಷಣೆ, ಮುಕ್ತ ಶಿಕ್ಷಣ, ವಯಸ್ಕರ ಶಿಕ್ಷಣ, ಜೈಲು ಕೈದಿಗಳಿಗೆ ಮೌಲ್ಯಯುತ ಶಿಕ್ಷಣ, ಗ್ರಾಮೀಣಾಭಿವೃದ್ಧಿಯಂತಹ ಹಲವು ಸಾಮಾಜಿಕ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವುದು ನಾಡಿನ ಹೆಮ್ಮೆ ಎಂದು ತಿಳಿಸಿದರು.

ಮೈಸೂರಿನ ಶ್ರೀರಾಮಕೃಷ್ಣ ಆಶ್ರಮದ ಅಧ್ಯಕ್ಷ ಶ್ರೀ ಸ್ವಾಮಿ ಮುಕ್ತಿದಾನಂದ ಮಾತನಾಡಿ, ಮೈಸೂರಿನ ಸ್ವಚ್ಛತೆ ಕಾಪಾಡುವಲ್ಲಿ ಪೌರಕಾರ್ಮಿಕರ ಪಾತ್ರ ದೊಡ್ಡದು. ಪೌರಕಾರ್ಮಿಕರು ತಮ್ಮ ಕಾಯಕದ ಮೂಲಕ ಭಗ ವಂತನಿಗೆ ಪುಷ್ಪ ಸಮರ್ಪಿಸುತ್ತಿದ್ದಾರೆ. ಎಲ್ಲರನ್ನೂ ದೇವರು ಎಂದು ಪೂಜಿಸುವ ಭಾವವನ್ನು ಸ್ವಾಮಿ ವಿವೇಕಾನಂದರು, ಶಾರದಾ ಮಾತೆ ತಿಳಿಸಿದ್ದಾರೆ. ಆದರ್ಶ ಸಮಾಜ ಹಾಗೂ ಸರ್ವಜನಾಂಗದ ಶಾಂತಿಯ ತೋಟವನ್ನು ನಾವು ಪ್ರಾಯೋಗಿಕವಾಗಿ ಕಟ್ಟಬೇಕು ಎಂದರು.

ಕಡಪ ರಾಮಕೃಷ್ಣ ಮಿಷನ್ ಕಾರ್ಯದರ್ಶಿ ಸ್ವಾಮಿ ಅನುಪಮಾನಂದ ಮಾತನಾಡಿದರು. ಹಲಸೂರು ರಾಮಕೃಷ್ಣ ಆಶ್ರಮದ ಅಧ್ಯಕ್ಷ ಸ್ವಾಮಿ ಬೋಧಸ್ವರೂಪಾನಂದ, ಬಿಳಿಗಿರಿರಂಗನಬೆಟ್ಟದ ವಿವೇಕಾನಂದ ಗಿರಿಜನ ಕಲ್ಯಾಣ ಕೇಂದ್ರದ ಗೌರವ ಕಾರ್ಯದರ್ಶಿ ಡಾ.ಎಚ್.ಸುದರ್ಶನ್, ನಗರಪಾಲಿಕೆ ಮಾಜಿ ಸದಸ್ಯ ಡಿ.ನಾಗಭೂಷಣ್, ಕನ್ನಡ ಪರಿಚಾರಕ ಅರವಿಂದ ಶರ್ಮ ಹಾಜರಿದ್ದರು. ಇದೇ ವೇಳೆ ರಾಮಕೃಷ್ಣ ಆಶ್ರಮದ ಆವರಣದಲ್ಲಿ ೩೦೦ ಪೌರಕಾರ್ಮಿಕರಿಗೆ ನಾರಾಯಣಪೂಜೆ ಸಲ್ಲಿಸುವ ಮೂಲಕ ಆಶ್ರಮದ ಶತಮಾನೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಆಂದೋಲನ ಡೆಸ್ಕ್

Recent Posts

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

14 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

17 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

17 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

18 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

21 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

2 days ago