ಮೈಸೂರು: ಮೈಸೂರು-ಕೊಡಗು ಲೋಕಸಭಾ ಚುನಾವಣೆಯಲ್ಲೂ ಮತಗಳ್ಳತನ ನಡೆದಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರು ಲೋಕಸಭಾ ಚುನಾವಣೆಯಲ್ಲಿ ಬಹಳ ಲೋಪವಾಗಿದ್ದು, ಬಿಜೆಪಿ EVMನಲ್ಲಿ ಮತಗಳ್ಳತನ ಮಾಡಿದೆ. ಒಟ್ಟು 2202 ಬೂತ್ಗಳ ಪೈಕಿ 292 ಬೂತ್ಗಳಲ್ಲಿ ಮತಗಳ್ಳತನ ಆಗಿದ್ದು, 292 ಇವಿಎಂ ಯಂತ್ರದಲ್ಲಿ ರಿಗ್ಗಿಂಗ್ ಆಗಿದೆ.
292 ಬೂತ್ಗಳಲ್ಲಿ 1 ಲಕ್ಷದ 45 ಸಾವಿರ ಮತಗಳಿದ್ದು ಅದರಲ್ಲಿ 22 ಸಾವಿರ ಮತ ಮಾತ್ರ ಕಾಂಗ್ರೆಸ್ಗೆ ಬಂದಿವೆ. ಕಳೆದ ನಾಲ್ಕು ಚುನಾವಣೆಯಲ್ಲಿ ಇದೇ ಬೂತ್ಗಳಲ್ಲಿ ಕಾಂಗ್ರೆಸ್ ಗೆ ಶೇಕಡಾ 50 – 60 ಮತಗಳು ಬಂದಿದ್ದವು. ಒಂದು ಬೂತ್ ವ್ಯಾಪ್ತಿಯಲ್ಲಿ 15 ಮನೆ ಕಾಂಗ್ರೆಸ್ ಕಾರ್ಯಕರ್ತರದ್ದೇ ಆಗಿದೆ. ಅಲ್ಲಿ ಒಟ್ಟು 750 ಮತಗಳಿವೆ. ಆದರೆ ಕಾಂಗ್ರೆಸ್ಗೆ ಬಂದಿದ್ದು ಬರೀ ಏಳು ಮತ ಮಾತ್ರ. ಎನ್.ಆರ್.ಕ್ಷೇತ್ರದ ಶಾಂತಿ ನಗರದಲ್ಲೂ ಇದೇ ರೀತಿ ಆಗಿದೆ ಎಂದು ಗಂಭೀರ ಆರೋಪ ಮಾಡಿದರು.
ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…
ಟೆಹ್ರಾನ್ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…
ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪಾರದರ್ಶಕ ನೇಮಕಾತಿ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗ ಅಕ್ರಮಗಳಲ್ಲಿ ಮುಳುಗಿದೆ. ಸರ್ಕಾರ ಒಂದೇ…
ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…