ಮೈಸೂರು ; ದಲಿತರಿಗೆ ಮೀಸಲಿಟ್ಟಿರುವ SCP-TSP ಹಣದಲ್ಲಿ ಸುಮಾರು 25000 ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ನೀಡಿರುವುದನ್ನು ಖಂಡಿಸಿ ಮೈಸೂರು ವಿವಿ ದಲಿತ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಯಿತು.
ಮಾನಸ ಗಂಗೋತ್ರಿಯ ಕ್ಲಾಕ್ ಟವರ್ ಬಳಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅಧ್ಯಕ್ಷ ಸಚಿನ್ ದಲಿತರ ಹಣವನ್ನು ಗ್ಯಾರಂಟಿಗಳಿಗೆ ಬಳಕೆ ಮಾಡಿದೆ. ಇದಲ್ಲದೆ ಕಲ್ಯಾಣ ಇಲಾಖೆ ವತಿಯಿಂದ ಶೇಕಡ 60 ಕ್ಕಿಂತ ಹೆಚ್ಚಿನ ಅಂಕ ಪಡೆದ ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಪ್ರೋತ್ಸಾಹ ಧನವನ್ನು ಪ್ರಸಕ್ತ ಸಾಲಿನಿಂದ ಶೇಕಡ 75 ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ನೀಡುವಂತೆ ಆದೇಶ ಹೊರಡಿಸಿದೆ. ಇಂದರಿಂದಾಗಿ ಅನೇಕ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎಲ್ಲಾ ಕಾಲೇಜುಗಳ ಪ್ರವೇಶಾತಿ ಸಂಧರ್ಭದಲ್ಲಿ ವಿದ್ಯಾರ್ಥಿಗಳು ಮುಂಗಡ ಶುಲ್ಕ ಕಟ್ಟದೆಯೇ ಪ್ರವೇಶ ಪಡೆಯಬಹುದು ಎಂದು ಆದೇಶ ಹೊರಡಿಸಿದ್ದರು, ಎಷ್ಟು ಕಾಲೇಜುಗಳಲ್ಲಿ ಈ ಆದೇಶ ಜಾರಿಯಲ್ಲಿದೆ ಹೇಳಿ ಎಂದು ಪ್ರಶ್ನಿಸಿದರು. ಅಲ್ಲದೆ ಕೂಡಲೇ ಸರ್ಕಾರ ಮಧ್ಯ ಪ್ರವೇಶಿಸಿ ದಲಿತ ವಿರೋಧಿ ನೀತಿಗಳನ್ನು ಹಿಂತೆಗೆದುಕೊಳ್ಳಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಪದಾಧಿಕಾರಿಗಳಾದ ನವೀನ್ ಕೋಳೂರು,ಗಿರೀಶ್ ಬೆಂಡರವಾಡಿ,ಮುತ್ತುರಾಜ್,ರೋಹಿತ್ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…