ಮೈಸೂರು ನಗರ

ಜ.4ರಂದು ʼಚಾ.ಬೆಟ್ಟಕ್ಕೆ ನಡಿಗೆʼ ಜಾಗೃತಿ ಜಾಥ ; ಬೆಂಬಲಿಸಲು ಮನವಿ

ಮೈಸೂರು : ಅರಮನೆ ನಗರಿ ಮೈಸೂರಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದ ಸಂರಕ್ಷಣೆ ಮತ್ತು ಉಳಿವಿಗಾಗಿ ಜ.4ರಂದು(ಭಾನುವಾರ) ಜಾಗೃತಿ ಆಂದೋಲನವನ್ನು ಆಯೋಜಿಸಲಾಗಿದೆ.

ಈ ಕುರಿತು ಪ್ರಕಟಣೆ ನೀಡಿರುವ ಮೈಸೂರು ಜಿಲ್ಲಾ ಪಾರಂಪರಿಕ ಸಂರಕ್ಷಣಾ ಸಮಿತಿ ಸದಸ್ಯ ಹಾಗೂ ಮೈಸೂರು ವಿಶ್ವವಿದ್ಯಾನಿಲಯದ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಅಧ್ಯಯನ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ.ಎನ್.ಎಸ್.ರಂಗರಾಜು ಅವರು, ಚಾಮುಂಡಿಬೆಟ್ಟದ ಸಂರಕ್ಷಣೆ ಮತ್ತು ಅದರ ಉಳಿವಿಗಾಗಿ ಭಾನುವಾರ ಬೆಳಿಗ್ಗೆ 7.30ಕ್ಕೆ ಚಾಮುಂಡಿಬೆಟ್ಟಕ್ಕೆ ನಡಿಗೆ ಶೀರ್ಷಿಕೆಯಡಿ ಏರ್ಪಡಿಸಿರುವ ಜಾಗೃತಿ ಜಾಥಾದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಾಗರಿಕರು, ಪ್ರಜ್ಞಾವಂತರು, ಹಿರಿಯರು, ಕಿರಿಯರು, ವಿದ್ಯಾರ್ಥಿಗಳು ನಮ್ಮೊಂದಿಗೆ ಸೇರಿಕೊಂಡು ಜಾಗೃತಿ ಆಂದೋಲನವನ್ನು ಬೆಂಬಲಿಸಬೇಕೆಂದು ಮನವಿ ಮಾಡಿದ್ದಾರೆ.

ಚಾಮುಂಡಿಬೆಟ್ಟ ಒಂದು ಪ್ರಸಿದ್ಧ ಸ್ವಾಭಾವಿಕ ಉತ್ತಮ ಹಾಗೂ ಶ್ರೇಷ್ಠ ಸ್ಪರ್ಶಕ್ಕೆ ನಿಲುಕುವ ಸಾಂಸ್ಕೃತಿಕ ಪಾರಂಪರಿಕ ಪ್ರದೇಶ ಹಾಗೂ ಜೀವ ವೈವಿಧ್ಯಮಯವಾದ ಪರಂಪರೆಯುಳ್ಳ ತಾಣವಾಗಿದೆ. ಇಲ್ಲಿ ಮೊದಲ ಬಾರಿಗೆ ಗಂಗರು ಮಹಾಬಲೇಶ್ವರ ದೇವಾಲಯವನ್ನು ಕ್ರಿ.ಶ 950ರಲ್ಲಿ ನಿರ್ಮಿಸಿ ಶಾಸನವನ್ನು ಹಾಕಿಸಿ ಮಹಾಬಲೇಶ್ವರ ಬೆಟ್ಟ ಎಂದು ಕರೆದಿದ್ದು, ಈ ದೇವಾಲಯ ಸಂರಕ್ಷಣಾ ಕಾರ್ಯಗಳಿಂದ ಇಂದಿಗೂ ಸುರಕ್ಷಿತವಾಗಿದೆ. ಈವೆರೆಗೂ ಬೆಟ್ಟದಲ್ಲಿ 29 ಶಾಸನಗಳು ದೊರಕಿವೆ. ಮೈಸೂರು ಜಿಲ್ಲೆಯ ಗೆಜೆಟಿಯರ್‌ ಪ್ರಕಾರ ಚಮರಾಜ ಒಡೆಯರ್(‌1572-76) ಅವರು ತಮ್ಮ ಪತ್ನಿ ಜೊತೆಯಲ್ಲಿ ಬೆಟ್ಟಕ್ಕೆ ಬಂದಿದ್ದ ವೇಳೆ ಅವರ ತಲೆಗೆ ಸಿಡಿಲು ಬಡಿದು ಕೂದಲು ಮಾತ್ರ ಸುಟ್ಟು ಹೋಗಿದ್ದು ಬಿಟ್ಟರೆ ಬೇರೆ ಯಾವುದೇ ಅನಾಹುತವಾಲ್ಲ. ಈ ಘಟನೆಯ ನಂತರದಲ್ಲಿ ಬೆಟ್ಟದಲ್ಲಿ ಧಾರ್ಮಿಕ ಕಾರ್ಯಗಳು ಹಾಗೂ ಆಚರಣೆಗಳು ಹೆಚ್ಚು ನಡೆಯಲು ಪ್ರಾರಂಭಗೊಂಡು ಮೈಸೂರಿನ ಕೊನೆಯ ರಾಜ ಜಯಚಾಮರಾಜ ಒಡೆಯರ್‌ ಅವರ ಕಾಲದವರೆಗೂ ಮಾತ್ರವಲ್ಲದೆ, ಇಂದಿಗೂ ಚಾಲ್ತಿಯಲ್ಲಿವೆ. ಇಂತಹ ಪರಂಪರೆಯುಳ್ಳ ಬೆಟ್ಟ ಇಂದು ಧಾರ್ಮಿಕತೆಯ ಹೆಸರಿನಲ್ಲಿ ಪ್ರವಾಸೋದ್ಯಮ ಕೇಂದ್ರ, ವ್ಯಾಪಾರಿ ಕೇಂದ್ರ ಮತ್ತು ಧಾರ್ಮಿಕವಲ್ಲದ ಇತರೆ ಚಟುವಟಿಕೆಗಳಿಂದ ತನ್ನ ಸ್ವರೂಪವನ್ನು ಕಳೆದುಕೊಂಡಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರ ಚಾಮುಂಡಿಬೆಟ್ಟಕ್ಕೆ ಒಂದು ಪ್ರಾಧಿಕಾರವನ್ನು ರಚಿಸಿದ್ದರೂ ಅದಕ್ಕೆ ಸಂಬಂಧಿಸಿದ ತಜ್ಞರನ್ನು ಸದಸ್ಯರನ್ನಾಗಿ ನೇಮಿಸಿಲ್ಲ. ಯಾವುದೇ ಸಂರಕ್ಷಣೆಯ ಕಾರ್ಯಗಳು ನಡೆಯದೆ ವಿಪರೀತವಾದ ಪ್ರವಾಸಿಗರಿಂದ ಬೆಟ್ಟದ ಪರಂಪರೆ, ಸ್ವಚ್ಛತೆ ಹಾಗೂ ಯಾವುದೇ ನಿಯಂತ್ರಣವಿಲ್ಲದೆ ಬೆಳೆಯುತ್ತಿರುವ ಕಟ್ಟಡಗಳ ನಿರ್ಮಾಣ ಮತ್ತು ಯಾರ ಹಂಗಿಲ್ಲದೆ ಬೆಳೆಯುತ್ತಿರುವ ಸಣ್ಣ ಪುಟ್ಟ ವ್ಯಾಪಾರಸ್ಥರ ಗುಂಪು ಇತ್ಯಾದಿಗಳಿಂದ ಚಾಮುಂಡಿಬೆಟ್ಟದ ಪರಂಪರೆಗೆ ಧಕ್ಕೆಯಾದರೂ ಯಾವುದೇ ವೈಜ್ಞಾನಿಕ ನಿಯಂತ್ರಣಗಳಿಲ್ಲದಂತಾಗಿದೆ. ಹೀಗಾಗಿ ಜ.4ರಂದು ನಡೆಯುವ ಜಾಗೃತಿ ಆಂದೋಲನಕ್ಕೆ ಎಲ್ಲರೂ ಕೈ ಜೋಡಿಸಬೇಕು ಎಂದು ಮನವಿ ಮಾಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

4 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

6 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

7 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

9 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

15 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

21 hours ago