ಮೈಸೂರು ನಗರ

ಮುಗಿಯದ ವಕ್ಫ್‌ ವಿವಾದ ; ಮೈಸೂರಲ್ಲಿ ಹಾಸ್ಟೆಲ್‌ಗೆ ವಕ್ಫ್‌ ಮಂಡಳಿ ನೋಟಿಸ್‌

ಮೈಸೂರು : ಇಲ್ಲಿನ ಶಿವರಾಂಪೇಟೆಯ ಶೃಂಗಾರ ಹೋಟೆಲ್‌ ಹತ್ತಿರ ಇರುವ ಮನ್ನಾರ್‌ ಕೃಷ್ಣಶೆಟ್ಟಿ ಹಾಸ್ಟೆಲ್‌ ಗೋಡೆಗೆ ವಕ್ಫ್‌ ಆಸ್ತಿ ಎಂದು ನೋಟಿಸ್‌ ಅಂಟಿಸಲಾಗಿದೆ. ಸದ್ಯ ಈ ವಿಚಾರವಾಗಿ ಹಾಸ್ಟೆಲ್‌ ಮುಂಭಾಗ ವಕ್ಫ್‌ ಮಂಡಳಿ ವಿರುದ್ಧ ಪ್ರತಿಭಟನೆ ನಡೆಸಲಾಗಿದೆ.

ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ, ಮಾಜಿ ಶಾಸಕ ಬಿಜೆಪಿ ಜಿಲ್ಲಾಧ್ಯಕ್ಷ ಎಲ್.ನಾಗೇಂದ್ರ ಸೇರಿದಂತೆ ಕನ್ನಡ ಪರ ಹೋರಾಟಗಾರರ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ವಕ್ಫ್ ನೋಟಿಸ್ ಗೆ ಚಪ್ಪಲಿಯಲ್ಲಿ ಹೊಡೆದು ಆಕ್ರೋಶ ವ್ಯಕ್ತಪಡಿಸಿದರು.

ಬಳಿಕ ವಕ್ಫ್ ವಿರುದ್ಧ ದಿಕ್ಕಾರ ಕೂಗಿದ ಪ್ರತಿಭಟನಾಕಾರರು ವಕ್ಫ್ ನಿಷೇಧ ಮಾಡುವಂತೆ ಆಗ್ರಹಿಸಿದರು.

ಬಳಿಕ ಮಾತನಾಡಿದ ಮಾಜಿ ಸಂಸದ ಪ್ರತಾಪ್‌ ಸಿಂಹ, 109 ವರ್ಷದ ಎಂ.ಕೆ ಹಾಸ್ಟೆಲ್ ಮೇಲೆ ವಕ್ಫ್ ನೋಟಿಸ್ ಅಂಟಿಸಿ ಈ ಅಸ್ತಿ ನಮಗೆ ಸೇರಿದೆ ಎಂದು ಹೇಳುತ್ತಿದ್ದಾರೆ ಎಂದು ಕಿಡಿಕಾರಿದರು.

ಮೈಸೂರಿಗೆ ಮಹರಾಜರ ಹಿನ್ನಲೆ ಇದೆ ಹೊರತು ಹೈದರಾಲಿ, ಟಿಪ್ಪುಸುಲ್ತಾನ ಇತಿಹಾಸವಿಲ್ಲ. ವಕ್ಫ್ ಮಂಡಳಿ ಅವರು ಖಾಸಿಗೆ ಅಸ್ತಿ ಎಲ್ಲಾ ನನ್ನದ್ದು ಎಂದು ಕಬಳಿಕೆ ಮಾಡುತ್ತಿದ್ದಾರೆ. ಈ ಕಾರಣದಿಂದ ಪ್ರಧಾನಿ ನರೇಂದ್ರ ಮೋದಿ ಅವರು ವಕ್ಫ್ ತಿದ್ದುಪಡಿಯನ್ನು ತಂದಿದ್ದು. ವಕ್ಫ್ ವಕ್ಫ್ ಅಂತ ರೈತರ ಆಸ್ತಿ ಕಬಳಿಸುತ್ತಿದ್ದಾರೆ ಎಂದು ವಕ್ಫ್ ಬೋರ್ಡ್ ವಿರುದ್ಧ ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಜೆಡಿಎಸ್‌ ಎಂಎಲ್‌ಸಿ ಸೂರಜ್‌ ರೇವಣ್ಣಗೆ ಬಿಗ್‌ ಶಾಕ್‌

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…

6 hours ago

ಟಿ.ನರಸೀಪುರ| ಆನೆ ದಾಳಿಗೆ ರೈತ ಬಲಿ

ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್‌ ಠಾಣೆ ವ್ಯಾಪ್ತಿಯ…

9 hours ago

ಮೈಸೂರು ನಗರ ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಪೂರೈಸುತ್ತಿದ್ದ ಇಬ್ಬರ ಬಂಧನ

ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…

10 hours ago

ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲೂ ಆಸಕ್ತಿ ಬೆಳೆಸಿಕೊಳ್ಳಿ: ದಿನೇಶ್‌ ಗೂಳಿಗೌಡ

ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಕರ್ನಾಟಕ ರಾಜ್ಯ…

10 hours ago

ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…

10 hours ago

ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣ: ಅಂತಿಮ ಹಂತಕ್ಕೆ ತಲುಪಿದ ಎಸ್‌ಐಟಿ ತನಿಖೆ

ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…

10 hours ago