ಮೈಸೂರು : ಇಲ್ಲಿನ ಶಿವರಾಂಪೇಟೆಯ ಶೃಂಗಾರ ಹೋಟೆಲ್ ಹತ್ತಿರ ಇರುವ ಮನ್ನಾರ್ ಕೃಷ್ಣಶೆಟ್ಟಿ ಹಾಸ್ಟೆಲ್ ಗೋಡೆಗೆ ವಕ್ಫ್ ಆಸ್ತಿ ಎಂದು ನೋಟಿಸ್ ಅಂಟಿಸಲಾಗಿದೆ. ಸದ್ಯ ಈ ವಿಚಾರವಾಗಿ ಹಾಸ್ಟೆಲ್ ಮುಂಭಾಗ ವಕ್ಫ್ ಮಂಡಳಿ ವಿರುದ್ಧ ಪ್ರತಿಭಟನೆ ನಡೆಸಲಾಗಿದೆ.
ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ, ಮಾಜಿ ಶಾಸಕ ಬಿಜೆಪಿ ಜಿಲ್ಲಾಧ್ಯಕ್ಷ ಎಲ್.ನಾಗೇಂದ್ರ ಸೇರಿದಂತೆ ಕನ್ನಡ ಪರ ಹೋರಾಟಗಾರರ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ವಕ್ಫ್ ನೋಟಿಸ್ ಗೆ ಚಪ್ಪಲಿಯಲ್ಲಿ ಹೊಡೆದು ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ ವಕ್ಫ್ ವಿರುದ್ಧ ದಿಕ್ಕಾರ ಕೂಗಿದ ಪ್ರತಿಭಟನಾಕಾರರು ವಕ್ಫ್ ನಿಷೇಧ ಮಾಡುವಂತೆ ಆಗ್ರಹಿಸಿದರು.
ಬಳಿಕ ಮಾತನಾಡಿದ ಮಾಜಿ ಸಂಸದ ಪ್ರತಾಪ್ ಸಿಂಹ, 109 ವರ್ಷದ ಎಂ.ಕೆ ಹಾಸ್ಟೆಲ್ ಮೇಲೆ ವಕ್ಫ್ ನೋಟಿಸ್ ಅಂಟಿಸಿ ಈ ಅಸ್ತಿ ನಮಗೆ ಸೇರಿದೆ ಎಂದು ಹೇಳುತ್ತಿದ್ದಾರೆ ಎಂದು ಕಿಡಿಕಾರಿದರು.
ಮೈಸೂರಿಗೆ ಮಹರಾಜರ ಹಿನ್ನಲೆ ಇದೆ ಹೊರತು ಹೈದರಾಲಿ, ಟಿಪ್ಪುಸುಲ್ತಾನ ಇತಿಹಾಸವಿಲ್ಲ. ವಕ್ಫ್ ಮಂಡಳಿ ಅವರು ಖಾಸಿಗೆ ಅಸ್ತಿ ಎಲ್ಲಾ ನನ್ನದ್ದು ಎಂದು ಕಬಳಿಕೆ ಮಾಡುತ್ತಿದ್ದಾರೆ. ಈ ಕಾರಣದಿಂದ ಪ್ರಧಾನಿ ನರೇಂದ್ರ ಮೋದಿ ಅವರು ವಕ್ಫ್ ತಿದ್ದುಪಡಿಯನ್ನು ತಂದಿದ್ದು. ವಕ್ಫ್ ವಕ್ಫ್ ಅಂತ ರೈತರ ಆಸ್ತಿ ಕಬಳಿಸುತ್ತಿದ್ದಾರೆ ಎಂದು ವಕ್ಫ್ ಬೋರ್ಡ್ ವಿರುದ್ಧ ವಾಗ್ದಾಳಿ ನಡೆಸಿದರು.
ಟೆಹರಾನ್: ಇಸ್ಲಾಮಾಬಾದ್ನಲ್ಲಿ ನಡೆದ 21 ಗಂಟೆಗಳ ಮಾತುಕತೆ ವಿಫಲವಾದ ಬೆನ್ನಲ್ಲೇ ಇರಾನ್ ಮೊದಲ ಪ್ರತಿಕ್ರಿಯೆ ನೀಡಿದ್ದು, ಮಾತುಕತೆ ವಿಫಲವಾಗಲು ಇಸ್ರೇಲ್…
ಟಿ.ನರಸೀಪುರ: ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಟಿ ನರಸೀಪುರ-ಮೈಸೂರು…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತಾ ಅರಣ್ಯ ಪ್ರದೇಶದ ಓಂಕಾರ್ ವ್ಯಾಪ್ತಿಯಲ್ಲಿ ಒಂಟಿ ಸಲಗದ ದಾಂಧಲೆ ಮಿತಿಮೀರಿದ್ದು. ರೈತರ ಅಪಾರ ಪ್ರಮಾಣದ…
ಗುಂಡ್ಲುಪೇಟೆ: ಪ್ರತಿಷ್ಠಿತ ಹುಲಿ ಸಂರಕ್ಷಿತಾರಣ್ಯ ಬಂಡೀಪುರದಲ್ಲಿ ಸಫಾರಿಗೆ ತೆರಳಿದ್ದವರಿಗೆ ವ್ಯಾಘ್ರ ದರ್ಶನದ ಜೊತೆಗೆ ಜಿಂಕೆಯನ್ನು ಬೇಟೆಯಾಡಿದ ಸೀಳುನಾಯಿ ದರ್ಶನವಾಗಿದ್ದು, ಅಪರೂಪದ…
ರಾಜ್ಯದ ಅರಣ್ಯ ಪ್ರದೇಶ ಒಂದು ವಾರದ ಅಂತರದಲ್ಲಿ ಕೇರಳ ರಾಜ್ಯದ ಇಬ್ಬರು ಹೆಣ್ಣುಮಕ್ಕಳ ಪೈಕಿ ಒಬ್ಬಾಕೆಯ ಪ್ರಾಣವನ್ನೇ ಬಲಿತೆಗೆದುಕೊಂಡರೆ, ಇನ್ನೊಬ್ಬಾಕೆಯ…
ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ.೩೩ರಷ್ಟು ಮೀಸಲಾತಿ ಕಲ್ಪಿಸುವ ಕುರಿತು ನಿರ್ಧಾರ ಏಪ್ರಿಲ್ ೧೬ರಿಂದ ೧೮ರವರೆಗೆ ಮೂರು ದಿನಗಳ ಕಾಲ ಸಂಸತ್ತಿನ…