ಮೈಸೂರು : ಇಲ್ಲಿನ ಶಿವರಾಂಪೇಟೆಯ ಶೃಂಗಾರ ಹೋಟೆಲ್ ಹತ್ತಿರ ಇರುವ ಮನ್ನಾರ್ ಕೃಷ್ಣಶೆಟ್ಟಿ ಹಾಸ್ಟೆಲ್ ಗೋಡೆಗೆ ವಕ್ಫ್ ಆಸ್ತಿ ಎಂದು ನೋಟಿಸ್ ಅಂಟಿಸಲಾಗಿದೆ. ಸದ್ಯ ಈ ವಿಚಾರವಾಗಿ ಹಾಸ್ಟೆಲ್ ಮುಂಭಾಗ ವಕ್ಫ್ ಮಂಡಳಿ ವಿರುದ್ಧ ಪ್ರತಿಭಟನೆ ನಡೆಸಲಾಗಿದೆ.
ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ, ಮಾಜಿ ಶಾಸಕ ಬಿಜೆಪಿ ಜಿಲ್ಲಾಧ್ಯಕ್ಷ ಎಲ್.ನಾಗೇಂದ್ರ ಸೇರಿದಂತೆ ಕನ್ನಡ ಪರ ಹೋರಾಟಗಾರರ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ವಕ್ಫ್ ನೋಟಿಸ್ ಗೆ ಚಪ್ಪಲಿಯಲ್ಲಿ ಹೊಡೆದು ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ ವಕ್ಫ್ ವಿರುದ್ಧ ದಿಕ್ಕಾರ ಕೂಗಿದ ಪ್ರತಿಭಟನಾಕಾರರು ವಕ್ಫ್ ನಿಷೇಧ ಮಾಡುವಂತೆ ಆಗ್ರಹಿಸಿದರು.
ಬಳಿಕ ಮಾತನಾಡಿದ ಮಾಜಿ ಸಂಸದ ಪ್ರತಾಪ್ ಸಿಂಹ, 109 ವರ್ಷದ ಎಂ.ಕೆ ಹಾಸ್ಟೆಲ್ ಮೇಲೆ ವಕ್ಫ್ ನೋಟಿಸ್ ಅಂಟಿಸಿ ಈ ಅಸ್ತಿ ನಮಗೆ ಸೇರಿದೆ ಎಂದು ಹೇಳುತ್ತಿದ್ದಾರೆ ಎಂದು ಕಿಡಿಕಾರಿದರು.
ಮೈಸೂರಿಗೆ ಮಹರಾಜರ ಹಿನ್ನಲೆ ಇದೆ ಹೊರತು ಹೈದರಾಲಿ, ಟಿಪ್ಪುಸುಲ್ತಾನ ಇತಿಹಾಸವಿಲ್ಲ. ವಕ್ಫ್ ಮಂಡಳಿ ಅವರು ಖಾಸಿಗೆ ಅಸ್ತಿ ಎಲ್ಲಾ ನನ್ನದ್ದು ಎಂದು ಕಬಳಿಕೆ ಮಾಡುತ್ತಿದ್ದಾರೆ. ಈ ಕಾರಣದಿಂದ ಪ್ರಧಾನಿ ನರೇಂದ್ರ ಮೋದಿ ಅವರು ವಕ್ಫ್ ತಿದ್ದುಪಡಿಯನ್ನು ತಂದಿದ್ದು. ವಕ್ಫ್ ವಕ್ಫ್ ಅಂತ ರೈತರ ಆಸ್ತಿ ಕಬಳಿಸುತ್ತಿದ್ದಾರೆ ಎಂದು ವಕ್ಫ್ ಬೋರ್ಡ್ ವಿರುದ್ಧ ವಾಗ್ದಾಳಿ ನಡೆಸಿದರು.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…